ಬ್ರೇಕಿಂಗ್ ನ್ಯೂಸ್
11-04-26 05:05 pm Mangalore Correspondent ಕರಾವಳಿ
ಬಂಟ್ವಾಳ, ಎಪ್ರಿಲ್ 11: ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ್ತಿದ್ದ ಮಾಜಿ ಪತ್ರಕರ್ತ, ಯುವಕನೊಬ್ಬ ಕುಸಿದು ಬಿದ್ದು ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ನಾಯಿಲ ಎಂಬಲ್ಲಿ ಸಂಭವಿಸಿದೆ. ನಿನ್ನೆ ರಾತ್ರಿ ಘಟನೆ ನಡೆದಿದ್ದು ಕಾರ್ಯಕ್ರಮದ ನಿರೂಪಣೆ ಮಾಡುತ್ತಿದ್ದಾಗಲೇ ವೇದಿಕೆಯಲ್ಲಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ.
ಫರಂಗಿಪೇಟೆ ಅಬ್ಬೆಟ್ಟು ನಿವಾಸಿ, ಹತ್ತು ವರ್ಷಗಳ ಹಿಂದೆ ಮಂಗಳೂರಿನಲ್ಲಿ ರಾಜ್ ಟಿವಿ ಸೇರಿದಂತೆ ಸ್ಥಳೀಯ ಕೇಬಲ್ ವಾಹಿನಿಗಳಲ್ಲಿ ವರದಿಗಾರನಾಗಿದ್ದ ಅಶ್ವಿತ್ ಕುಮಾರ್ (32) ಮೃತಪಟ್ಟ ಯುವಕ. ಪತ್ರಕರ್ತ ಕೆಲಸ ಬಿಟ್ಟು ಮೋಟಾರ್ಸ್ ಸಂಸ್ಥೆಯೊಂದರಲ್ಲಿ ಸುಪರ್ ವೈಸರ್ ಆಗಿದ್ದರು. ಇದರ ನಡುವೆ, ಸ್ಥಳೀಯ ಕಾರ್ಯಕ್ರಮಗಳಲ್ಲಿ ನಿರೂಪಕರಾಗಿ ಗುರುತಿಸಿಕೊಂಡಿದ್ದರು. ನಾಯಿಲದಲ್ಲಿರುವ ಸಂಬಂಧಿಕರ ಮನೆಯ ಮದರಂಗಿ ಕಾರ್ಯಕ್ರಮದಲ್ಲಿ ಅಶ್ವಿತ್ ನಿರೂಪಣೆ ಜವಾಬ್ದಾರಿ ವಹಿಸಿಕೊಂಡಿದ್ದರು.
ಅದರಂತೆ ಶುಕ್ರವಾರ ರಾತ್ರಿ (ಏಪ್ರಿಲ್ 10) ಎಂದಿನಂತೆ ವೇದಿಕೆ ಏರಿ ಕಾರ್ಯಕ್ರಮ ಆರಂಭಿಸಲು ತಯಾರಿ ನಡೆಸುತ್ತಿದ್ದರು. ಮಾತು ಆರಂಭಿಸಿದ ಕೆಲವೇ ನಿಮಿಷಗಳಲ್ಲಿ ತೀವ್ರ ಅಸ್ವಸ್ಥಗೊಂಡು ಇದ್ದಕ್ಕಿದ್ದಂತೆ ವೇದಿಕೆಯಲ್ಲೇ ಕುಸಿದು ಬಿದ್ದಿದ್ದಾರೆ.
ಕೂಡಲೇ ಅವರನ್ನು ತುಂಬೆಯ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದು ಅಷ್ಟರಲ್ಲಿ ಮೃತಪಟ್ಟಿದ್ದಾರೆ. ಸಂಭ್ರಮ ಮನೆ ಮಾಡಿದ್ದ ಮನೆಯಲ್ಲಿ ಕ್ಷಣಾರ್ಧದಲ್ಲಿ ಶೋಕ ಆವರಿಸಿದೆ. ಮದರಂಗಿ, ಮದುವೆ ಕಾರ್ಯಕ್ರಮಕ್ಕೆ ನಿರೂಪಣೆ ಮಾಡಲಿಕ್ಕಿದ್ದ ಯುವಕನ ಸಾವು ಕುಟುಂಬಸ್ಥರಲ್ಲಿ ಬೇಸರ ಮೂಡಿಸಿದೆ. ಅಶ್ವಿತ್ ಮದುವೆ ಆಗಿರಲಿಲ್ಲ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am