ಬ್ರೇಕಿಂಗ್ ನ್ಯೂಸ್
13-04-26 11:39 pm Mangalore Correspondent ಕರಾವಳಿ
ಮಂಗಳೂರು, ಎಪ್ರಿಲ್ 13: ಮಹಿಳೆಯೊಬ್ಬರು ಕಾವೂರಿನ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬಂದು ಆಟೋದಲ್ಲಿ ತನ್ನ ಮನೆಗೆ ತೆರಳುತ್ತಿದ್ದಾಗ ಚಿನ್ನಾಭರಣಗಳಿದ್ದ ಬ್ಯಾಗ್ ಕಳಕೊಂಡಿದ್ದು ಕಾವೂರು ಪೊಲೀಸರು ಕೆಲವೇ ಗಂಟೆಗಳಲ್ಲಿ ಆಟೋವನ್ನು ಪತ್ತೆಹಚ್ಚಿ ಬಂಗಾರ ಮರಳಿಸಿದ್ದಾರೆ.
ಕುಂಜತ್ತ್ ಬೈಲು ನಿವಾಸಿ ರೇಖಾ ತಾಜವ್ ಎಂಬವರು ಎಪ್ರಿಲ್ 7ರಂದು ಕಾವೂರು ಮಹಾಲಿಂಗೇಶ್ವರ ದೇವಸ್ಥಾನದಿಂದ ತನ್ನ ಮನೆಯಾದ ಕುಂಜತ್ ಬೈಲಿಗೆ ಆಟೋ ರಿಕ್ಷಾದಲ್ಲಿ ಹೋಗಿದ್ದು ಮನೆಗೆ ತಲುಪಿದಾಗ ಅವರು ತನ್ನ ಬ್ಯಾಗ್ ಅನ್ನು ಆಟೋ ರಿಕ್ಷಾದಲ್ಲಿಯೇ ಮರೆತು ಇಳಿದಿದ್ದರು. ಬ್ಯಾಗ್ ನಲ್ಲಿ 4 ಚಿನ್ನದ ಉಂಗುರಗಳು ಮತ್ತು 1 ಚಿನ್ನದ ಪೆಂಡೆಂಟ್ ಹಾಗೂ 2 ವಾಚ್ ಇದ್ದ ವಿಷಯ ತಿಳಿದಾಗ ಆಟೋ ಹಿಂತಿರುಗಿ ಹೋಗಿತ್ತು.
ಇನ್ನೇನು ಮಾಡುವುದೆಂದು ತಿಳಿಯದೆ ಮಹಿಳೆ ಬಳಿಕ ಕಾವೂರು ಪೊಲೀಸ್ ಠಾಣೆಗೆ ಬಂದು ದೂರು ನೀಡಿ ಆಟೋ ಚಾಲಕನ ಬಗ್ಗೆ ಒಂದಷ್ಟು ವಿವರ ನೀಡಿದ್ದರು. ತಕ್ಷಣವೇ ಕಾವೂರು ಠಾಣಾ ಸಿಬ್ಬಂದಿಗಳು ಸದ್ರಿ ರಸ್ತೆಯಲ್ಲಿ ಸಿಸಿಟಿವಿ ಚೆಕ್ ಮಾಡಿದ್ದು ಆಟೋ ರಿಕ್ಷಾ ನಂಬರ್ ಪತ್ತೆ ಮಾಡಿದ್ದಾರೆ. ಬಳಿಕ ಆಟೋ ಚಾಲಕನನ್ನು ವಿಚಾರಿಸಿದಾಗ ಅವರಿಗೆ ಯಾವುದೇ ಮಾಹಿತಿ ಇರಲಿಲ್ಲ.
ಆಟೋವನ್ನು ಪರಿಶೀಲನೆ ನಡೆಸಿದಾಗ ಡಿಕ್ಕಿಯಲ್ಲಿ ಮಹಿಳೆಯ ಬ್ಯಾಗ್ ಪತ್ತೆಯಾಗಿದ್ದು ಅದರಲ್ಲಿ ಬಂಗಾರದ ಒಡವೆಗಳು ಹಾಗೇ ಇದ್ದವು. ಘಟನೆ ನಡೆದು 24 ಗಂಟೆ ಒಳಗೆ ಆಟೋ ಪತ್ತೆಹಚ್ಚಿದ ಪೊಲೀಸರು ಕಳೆದು ಹೋದ ಬ್ಯಾಗ್ ಸಮೇತ ಎಲ್ಲಾ ಬಂಗಾರವನ್ನು ಮಹಿಳೆಗೆ ಒಪ್ಪಿಸಿದ್ದಾರೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm