ಬ್ರೇಕಿಂಗ್ ನ್ಯೂಸ್
17-04-26 12:33 pm HK News Staffer ಕರಾವಳಿ
ಬೆಂಗಳೂರು, ಎಪ್ರಿಲ್ 17: ಬೆಳ್ತಂಗಡಿ ತಾಲೂಕಿನ ಎರಡು ಸ್ಥಳಗಳಲ್ಲಿ ಸರ್ಕಾರಿ ಭೂಮಿಯನ್ನು ಅತಿಕ್ರಮಣ ಮಾಡಿರುವ ಆರೋಪಕ್ಕೆ ಸಂಬಂಧಿಸಿ ಧರ್ಮಸ್ಥಳ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರಿಗೆ ನೋಟಿಸ್ ಜಾರಿ ಮಾಡುವಂತೆ ಕರ್ನಾಟಕ ಭೂಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯವು ಬೆಳ್ತಂಗಡಿ ಪೊಲೀಸ್ ನಿರೀಕ್ಷಕರಿಗೆ ನಿರ್ದೇಶನ ನೀಡಿದೆ.
ನ್ಯಾಯಾಲಯವು ಫೆಬ್ರವರಿ 19 ಹಾಗೂ ಏಪ್ರಿಲ್ 2ರಂದು ಎರಡು ಆದೇಶಗಳನ್ನು ಹೊರಡಿಸಿದೆ. ಮೊದಲನೆಯ ಆದೇಶವು ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಸರ್ವೆ ಸಂಖ್ಯೆ 96/1 ರಲ್ಲಿ 83 ಸೆಂಟ್ಸ್ ಸರ್ಕಾರಿ ಭೂಮಿಯ ಅತಿಕ್ರಮಣಕ್ಕೆ ಸಂಬಂಧಿಸಿದೆ. ಅಲ್ಲಿ ಈಗ ರಬ್ಬರ್ ತೋಟವಿದೆ. ಪ್ರಕರಣದಲ್ಲಿ ಎಸ್ಡಿಎಂ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಎರಡನೇ ಪ್ರತಿವಾದಿಯಾಗಿದ್ದಾರೆ.
ಎರಡನೇ ಆದೇಶವು ಬೆಳ್ತಂಗಡಿ ಗ್ರಾಮದ ಸರ್ವೆ ಸಂಖ್ಯೆ 173/5 ರಲ್ಲಿ 25 ಸೆಂಟ್ಸ್ ಅತಿಕ್ರಮಣಕ್ಕೆ ಸಂಬಂಧಿಸಿದ್ದು, ಅಲ್ಲಿ ಆಂಫಿಥಿಯೇಟರ್ ನಿರ್ಮಿಸಲಾಗಿದೆ. ಬೆಳ್ತಂಗಡಿ ಸಮಾಜ ಮಂದಿರ ಕಾರ್ಯದರ್ಶಿ ಈ ಪ್ರಕರಣದಲ್ಲಿ ಎರಡನೇ ಪ್ರತಿವಾದಿಯಾಗಿದ್ದಾರೆ. ನಾಗರಿಕ ಸೇವಾ ಟ್ರಸ್ಟ್ ಅಧ್ಯಕ್ಷ ಕೆ. ಸೋಮನಾಥ ನಾಯಕ್ ನ್ಯಾಯಾಲಯಕ್ಕೆ ಸಲ್ಲಿಸಿದ ಎರಡು ಪ್ರತ್ಯೇಕ ಅರ್ಜಿಗಳ ಆಧಾರದ ಮೇಲೆ ನೋಟಿಸ್ಗಳನ್ನು ನೀಡಲಾಗಿದೆ. ಪ್ರತಿವಾದಿಗಳು ನ್ಯಾಯಾಲಯದ ಮುಂದೆ ಹಾಜರಾಗಲು ಮತ್ತು ಆಕ್ಷೇಪಣೆ ಇದ್ಜರೆ ಹೇಳಿಕೆಯನ್ನು ಸಲ್ಲಿಸಲು ಸೂಚಿಸಲಾಗಿದೆ.
ದೂರಿನಲ್ಲಿ ಮಾಡಲಾದ ಆರೋಪಗಳಿಗೆ ಸಂಬಂಧಿಸಿದಂತೆ ಅತಿಕ್ರಮಣವಿದೆಯೇ ಎಂಬುದನ್ನು ಪರಿಶೀಲಿಸಬೇಕು. ಒಂದು ವೇಳೆ ಅತಿಕ್ರಮಣವಿದ್ದರೆ, ಅತಿಕ್ರಮಣದ ಸ್ವರೂಪ, ಅತಿಕ್ರಮಣದ ವ್ಯಾಪ್ತಿಗೆ ಸಂಬಂಧಿಸಿದಂತೆ ಸ್ಥಿತಿಗತಿ ವರದಿಯನ್ನು ಸಲ್ಲಿಸುವಂತೆ ಬೆಳ್ತಂಗಡಿ ತಹಶೀಲ್ದಾರ್ಗೆ ನ್ಯಾಯಾಲಯವು ನಿರ್ದೇಶನ ನೀಡಿದೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ, ಪುತ್ತೂರು ಸಹಾಯಕ ಆಯುಕ್ತರು ಮತ್ತು ಬೆಳ್ತಂಗಡಿ ತಾಲ್ಲೂಕಿನ ತಹಶೀಲ್ದಾರ್ ಅವರನ್ನು ಎರಡೂ ಪ್ರಕರಣಗಳಲ್ಲಿ ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.
ಕರ್ನಾಟಕ ಭೂಕಬಳಿಕೆ ಕಾಯ್ದೆ 2011 ರ ಸೆಕ್ಷನ್ 9 (1) ರ ಅಡಿಯಲ್ಲಿ ಸಲ್ಲಿಸಲಾದ ಅರ್ಜಿಯ ಜ್ಞಾಪಕ ಪತ್ರದಲ್ಲಿ, ಅರ್ಜಿದಾರರು (ಕುವೆಟ್ಟು ಭೂಕಬಳಿಕೆ) ಕರ್ನಾಟಕ ಸಂಘಗಳ ನೋಂದಣಿ ಕಾಯ್ದೆಯಡಿ ನೋಂದಾಯಿತ ಸಂಸ್ಥೆಯಾಗಿರುವ ಮೊದಲ ಪ್ರತಿವಾದಿ ಸಂಘವು 29/2/2008 ರ ಮಾರಾಟ ಪತ್ರದ ಆಧಾರದ ಮೇಲೆ ಕುವೆಟ್ಟು ಗ್ರಾಮದ ಸರ್ವೆ ಸಂಖ್ಯೆ 96/2 ರಲ್ಲಿ 3 ಎಕರೆ 41 ಸೆಂಟ್ಸ್ ವ್ಯಾಪ್ತಿಯ ಹಕ್ಕುಗಳನ್ನು ಪಡೆದುಕೊಂಡಿದೆ ಎಂದು ಹೇಳುತ್ತದೆ. ಈ ಸಂಸ್ಥೆಯು ಕುವೆಟ್ಟು ಗ್ರಾಮದ ಸರ್ವೆ ಸಂಖ್ಯೆ 96/1 ರಲ್ಲಿ ಸುಮಾರು 83 ಸೆಂಟ್ಸ್ ಸರ್ಕಾರಿ ಭೂಮಿಯನ್ನು ಅಕ್ರಮವಾಗಿ ಸ್ವಾಧೀನಪಡಿಸಿಕೊಂಡಿದೆ ಎಂದು ಆರೋಪಿಸಿದೆ.
ಇದಲ್ಲದೆ, ಸಂಬಂಧಪಟ್ಟ ಕಂದಾಯ ನಿರೀಕ್ಷಕರು ಈ ಭೂಮಿಯನ್ನು ಪರಿಶೀಲಿಸಿದ್ದಾರೆ ಮತ್ತು SDME ಸೊಸೈಟಿ ಸರ್ಕಾರಿ ಭೂಮಿಯಲ್ಲಿ ಸ್ಥಾಪಿಸಲಾಗಿದೆ ಎಂದು ಹೇಳುವ ವರದಿಯನ್ನು ಸಲ್ಲಿಸಿದ್ದಾರೆ ಎಂದು ಅರ್ಜಿದಾರರು ಹೇಳಿದ್ದಾರೆ. ಆದರೆ ಸಂಬಂಧಪಟ್ಟ ಅಧಿಕಾರಿಗಳು ಕಾನೂನಿನಡಿ ಅಗತ್ಯವಿರುವಂತೆ ತಮ್ಮ ಕರ್ತವ್ಯಗಳನ್ನು ನಿರ್ವಹಿಸಲು ವಿಫಲರಾಗಿದ್ದಾರೆ ಮತ್ತು ಇಂದಿನವರೆಗೆ ಅವರು ಅಕ್ರಮವಾಗಿ ಒತ್ತುವರಿ ಮಾಡಿಕೊಂಡ ಸರ್ಕಾರಿ ಭೂಮಿಯನ್ನು ವಶಪಡಿಸಿಕೊಳ್ಳಲು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಲಾಗಿದೆ.
ಇದರಲ್ಲಿ ಬೆಳ್ತಂಗಡಿ ತಹಶೀಲ್ದಾರ್ ಅವರ ಕೈವಾಡವಿದ್ದು, ಪ್ರತಿವಾದಿಗಳು ಸರ್ಕಾರದ ಅಮೂಲ್ಯ ಭೂಮಿಯನ್ನು ಕಬಳಿಸಲು ಅನುವು ಮಾಡಿಕೊಟ್ಟಿದ್ದಾರೆ ಎಂದು ಅರ್ಜಿದಾರರು ಆರೋಪಿಸಿದ್ದಾರೆ. ಈ ಭೂಮಿಯು ಬೆಳ್ತಂಗಡಿ ಪಟ್ಟಣದಿಂದ ಸುಮಾರು 3 ಕಿ.ಮೀ ದೂರದಲ್ಲಿದೆ ಮತ್ತು ಇದರ ಮೌಲ್ಯ 1.50 ಕೋಟಿ ರೂಪಾಯಿಗಳಿಗಿಂತ ಹೆಚ್ಚು ಎಂದು ಅರ್ಜಿದಾರರು ಮಾಹಿತಿ ನೀಡಿದ್ದಾರೆ.
ಎರಡನೇ ಪ್ರಕರಣದಲ್ಲಿ, ಸದರಿ ಸೊಸೈಟಿಗೆ ಬೆಳ್ತಂಗಡಿಯಲ್ಲಿ ಸರ್ವೇ ಸಂಖ್ಯೆ 174/4 ರಲ್ಲಿ 26 ಸೆಂಟ್ಸ್ ಅಳತೆಯ ಭೂಮಿಯನ್ನು ಸಮುದಾಯ ಭವನ ನಿರ್ಮಾಣಕ್ಕಾಗಿ ನೀಡಲಾಗಿದೆ ಎಂದು ಅರ್ಜಿದಾರರು ಹೇಳಿದ್ದಾರೆ. ಇದರಲ್ಲಿ ಸೊಸೈಟಿಯು ಸರ್ವೇ ಸಂಖ್ಯೆ 173/5 ರಲ್ಲಿ 25 ಸೆಂಟ್ಸ್ ಅಳತೆಯ ಸರ್ಕಾರಿ ಜಮೀನಿಗೆ ಹೊಂದಿಕೊಂಡಂತೆ ಸಮುದಾಯ ಭವನವನ್ನು ನಿರ್ಮಿಸಿದೆ ಮತ್ತು ಸದರಿ ಭೂಮಿಯನ್ನು ಸಂಪೂರ್ಣವಾಗಿ ಅಕ್ರಮವಾಗಿ ಆಕ್ರಮಿಸಿಕೊಂಡಿದೆ.
ಈಗ ಅಸ್ತಿತ್ವದಲ್ಲಿರುವ ಸಮುದಾಯ ಭವನವನ್ನು ಕೆಡವಿ ಆಂಫಿಥಿಯೇಟರ್ ನಿರ್ಮಿಸಿದೆ. ಬಿ.ಸಿ. ರಸ್ತೆ-ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯಿಂದ 500 ಮೀಟರ್ ದೂರದಲ್ಲಿರುವ ಈ ಭೂಮಿಯ ಮಾರುಕಟ್ಟೆ ಮೌಲ್ಯ 2 ಕೋಟಿ ರೂ. ಎಂದು ಅರ್ಜಿದಾರರು ದೂರಿನಲ್ಲಿ ತಿಳಿಸಿದ್ದಾರೆ.
ಕರ್ನಾಟಕ ಭೂಕಬಳಿಕೆ (ನಿಷೇಧ) ಕಾಯ್ದೆ 2011 ರ ಸೆಕ್ಷನ್ 4 ರ ಅಡಿಯಲ್ಲಿ ಪ್ರತಿವಾದಿಗಳನ್ನು ಶಿಕ್ಷಿಸಲು, ಅತಿಕ್ರಮಣಗಳನ್ನು ತೆರವುಗೊಳಿಸಲು ಮತ್ತು ಭೂಮಿಯನ್ನು ಸರ್ಕಾರಕ್ಕೆ ಹಸ್ತಾಂತರಿಸಲು ಅರ್ಜಿಯಲ್ಲಿ ನ್ಯಾಯಾಲಯಕ್ಕೆ ಮನವಿ ಮಾಡಿದ್ದು, ಮುಂದಿನ ವಿಚಾರಣೆ ಜುಲೈ 20 ಮತ್ತು ಸೆಪ್ಟೆಂಬರ್ 18 ರಂದು ನಡೆಯಲಿದೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am