ಬ್ರೇಕಿಂಗ್ ನ್ಯೂಸ್
18-04-26 11:31 pm HK News Desk ಕರಾವಳಿ
ಪುತ್ತೂರು, ಎಪ್ರಿಲ್ 18: ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೆಯ ಬೆಡಿ ಉತ್ಸವ ನಡೆಯುತ್ತಿದ್ದ ಸಂದರ್ಭದಲ್ಲಿ ಸುಡುಮದ್ದಿನ ಬೆಂಕಿ ತಾಗಿ ಹಲವರು ಗಾಯಗೊಂಡ ಘಟನೆ ನಡೆದಿದ್ದು ಈ ಬಗ್ಗೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಘಟನೆ ಬಗ್ಗೆ ಜಾತ್ರೆ ನೋಡಲು ಬಂದಿದ್ದ ಉಡುಪಿ ಕುಂದಾಪುರ ನಿವಾಸಿ ಸುಮಂತ್ ಶೆಟ್ಟಿ (20) ಎಂಬವರ ದೂರಿನಂತೆ, ಪ್ರಕರಣ ದಾಖಲಾಗಿದೆ. ಎಪ್ರಿಲ್ 17ರಂದು ರಾತ್ರಿ ಪುತ್ತೂರಿನಲ್ಲಿ ನಡೆಯುತ್ತಿದ್ದ ಜಾತ್ರೆಗೆ ಸ್ನೇಹಿತರೊಂದಿಗೆ ಬಂದಿದ್ದು, ಜಾತ್ರೆಯ ಗದ್ದೆಯಲ್ಲಿ ಏರ್ಪಡಿಸಿದ್ದ ಸುಡುಮದ್ದು ಪ್ರದರ್ಶನವನ್ನು ಸ್ನೇಹಿತರೊಂದಿಗೆ ನಿಂತು ವೀಕ್ಷಿಸುತ್ತಿದ್ದಾಗ, ಸುಡುಮದ್ದಿನ ಬೆಂಕಿ ಹರಡಿ ಸುಟ್ಟ ಗಾಯವಾಗಿದೆ. ಸುಮಂತ್ ಶೆಟ್ಟಿ ಹಾಗೂ ಭರತ್, ಕೌಶಿಕ್, ಸೌಮ್ಯ, ದೀಪಕ್ , ಯಶವಂತ್, ಮೋಹನ್ ಎಂಬವರ ಮೇಲೆ ಬೆಂಕಿ ಬಿದ್ದು ಸುಟ್ಟ ಗಾಯ ಆಗಿರುತ್ತದೆ. ಗಾಯಗೊಂಡ ಪಿರ್ಯಾದಿದಾರರನ್ನು ಅವರ ಸ್ನೇಹಿತರು ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿರುತ್ತಾರೆ.
ಈ ಬಗ್ಗೆ ಸುಡುಮದ್ದು ನಿರ್ವಹಣೆ ಮಾಡುವವರು ಹಾಗೂ ದೇವಸ್ಥಾನ ವ್ಯವಸ್ಥಾಪನ ಸಮಿತಿಯವರು ಮತ್ತು ಇತರರು ಸುಡುಮದ್ದು ಪ್ರದರ್ಶನದ ವೇಳೆ ಅಗತ್ಯ ಮುಂಜಾಗ್ರತೆ ವ್ಯವಸ್ಥೆಯನ್ನು ಮಾಡಿಕೊಳ್ಳದೇ ನಿರ್ಲಕ್ಷ್ಯ ತೋರಿರುವುದಾಗಿ ಗಾಯಾಳು ಸುಮಂತ್ ನೀಡಿದ ದೂರಿನ ಮೇರೆಗೆ ಪುತ್ತೂರು ನಗರ ಠಾಣೆಯಲ್ಲಿ ಅ.ಕ್ರ:45/2026 ಕಲಂ: 288,125(a), 3(5), BNS 2023 ರಂತೆ ಪ್ರಕರಣ ದಾಖಲಿಸಲಾಗಿದೆ.
06-08-26 03:49 pm
HK News Staffer
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅಸಮರ್ಥ, ಛಲವಾದಿ...
04-08-26 09:12 pm
ಸಿದ್ದರಾಮಯ್ಯ ಆಪ್ತ ಎಂಬ ಕಾರಣಕ್ಕೆ ನನಗೆ ಅನ್ಯಾಯ ಆಗಿ...
04-08-26 09:10 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
06-08-26 11:03 pm
Mangaluru Staffer
ಅಯೋಧ್ಯೆ ಕಾಣಿಕೆ ಹಣ ಕಳವು ತೀವ್ರ ಆಘಾತಕಾರಿ, ಯಾವುದೇ...
06-08-26 10:22 pm
ಹಿಂದೂ ದೇವಸ್ಥಾನಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ...
06-08-26 09:33 pm
ಹೆದ್ದಾರಿ ಬದಿ ವ್ಯಾಪಾರಿಗಳ ವಿರುದ್ಧ ಕಾರ್ಯಾಚರಣೆಗಿಳ...
06-08-26 08:09 pm
ಸುರತ್ಕಲ್ ಎನ್ಐಟಿಕೆ ಕಾಲೇಜು ಹಾಸ್ಟೆಲ್ನಲ್ಲಿ ಸ್ವಯ...
05-08-26 08:08 pm
07-08-26 12:35 pm
HK News Staffer
ಲವ್ - ಸೆಕ್ಸ್..ದೋಖಾ ; ಬಳ್ಳಾರಿಯಲ್ಲಿ ಬೆಚ್ಚಿಬೀಳಿಸ...
06-08-26 09:31 pm
ಲವ್ - ಸೆಕ್ಸ್ ದೋಖಾ ; ಬಳ್ಳಾರಿಯಲ್ಲಿ ಬೆಚ್ಚಿಬೀಳಿಸಿ...
06-08-26 09:31 pm
ಬೆಂಗಳೂರು ; ಒಂದು ತಿಂಗಳ ಹಿಂದೆ ನೇಪಾಳದಿಂದ ಕೆಲಸಕ್ಕ...
06-08-26 06:13 pm
7 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ...
06-08-26 11:48 am