ಬ್ರೇಕಿಂಗ್ ನ್ಯೂಸ್
20-04-26 05:28 pm HK News Staffer ಕರಾವಳಿ
ಪುತ್ತೂರು, ಎಪ್ರಿಲ್ 20: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ಅಂಗಡಿ ಏಲಂ ಪ್ರಕ್ರಿಯೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದೆ ಎಂದು ಕರ್ನಾಟಕ ರಾಜ್ಯ ಹಿಂದೂ ಜಾತ್ರಾ ವ್ಯಾಪಾರಸ್ಥರ ಸಂಘ ಗಂಭೀರ ಆರೋಪ ಮಾಡಿದೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಮಹೇಶ್ ದಾಸ್, ದೇವಸ್ಥಾನದ ಆಡಳಿತ ಮಂಡಳಿ ಮತ್ತು ಅಧಿಕಾರಿಗಳ ವಿರುದ್ಧ ಹರಿಹಾಯ್ದರು. ಜಾತ್ರೆಯ ಸಂದರ್ಭದಲ್ಲಿ ದೇವಸ್ಥಾನದ ಗದ್ದೆಯಲ್ಲಿ ವ್ಯಾಪಾರಕ್ಕೆ ಕೇವಲ 320 ಅಂಗಡಿಗಳಿಗೆ ಮಾತ್ರ ಅಧಿಕೃತವಾಗಿ ಏಲಂ ಮೂಲಕ ಅವಕಾಶ ನೀಡಲಾಗಿತ್ತು. ಆದರೆ, ಪ್ರಸ್ತುತ 700ಕ್ಕೂ ಅಧಿಕ ಅಂಗಡಿಗಳು ಕಾರ್ಯಾಚರಿಸುತ್ತಿವೆ ಎಂದು ಅವರು ದೂರಿದರು.
“ಅಧಿಕೃತವಾಗಿ ನಿಗದಿಪಡಿಸಿದ 320 ಅಂಗಡಿಗಳಿಗಿಂತ ಹೆಚ್ಚುವರಿಯಾಗಿ ಇರುವ 400ಕ್ಕೂ ಹೆಚ್ಚು ಅಂಗಡಿಗಳಿಂದ ಅನಧಿಕೃತವಾಗಿ ಹಣ ವಸೂಲಿ ಮಾಡಲಾಗಿದೆ. ಈ ಹಣವು ದೇವಸ್ಥಾನದ ಬೊಕ್ಕಸಕ್ಕೆ ಸೇರುವ ಬದಲು ಭ್ರಷ್ಟರ ಪಾಲಾಗಿದೆ. ಇದರಲ್ಲಿ ದೇವಸ್ಥಾನದ ಆಡಳಿತ ಮಂಡಳಿ, ಕಾರ್ಯ ನಿರ್ವಹಣಾಧಿಕಾರಿ ಹಾಗೂ ಅಧಿಕಾರಿ ವರ್ಗದವರು ಭಾಗಿಯಾಗಿದ್ದಾರೆ,” ಎಂದು ಮಹೇಶ್ ದಾಸ್ ಆರೋಪಿಸಿದರು.
ಹಣ ವಸೂಲಿಗೆ ಸಂಬಂಧಿಸಿದಂತೆ ದೇವಸ್ಥಾನದ ಅಧಿಕೃತ ಲೆಟರ್ ಹೆಡ್ ಬದಲಾಗಿ, ಸಾಮಾನ್ಯ ಬಿಳಿ ಕಾಗದದ ಚೂರುಗಳಲ್ಲಿ ದೇವಸ್ಥಾನದ ಸೀಲ್ ಹಾಕಿ ಹಣ ಪಡೆದುಕೊಳ್ಳಲಾಗುತ್ತಿದೆ. ಈ ಮೂಲಕ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದಿದೆ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದರು.
ಹಗರಣದ ಬಗ್ಗೆ ಸಂಪೂರ್ಣ ತನಿಖೆ ನಡೆಸುವಂತೆ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ಸಲ್ಲಿಸಲಾಗುವುದು. ಕಷ್ಟಪಟ್ಟು ವ್ಯಾಪಾರ ಮಾಡುವ ಹಿಂದೂ ವ್ಯಾಪಾರಿಗಳಿಗೆ ನ್ಯಾಯ ಸಿಗಬೇಕು ಮತ್ತು ಭ್ರಷ್ಟ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.
06-08-26 03:49 pm
HK News Staffer
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅಸಮರ್ಥ, ಛಲವಾದಿ...
04-08-26 09:12 pm
ಸಿದ್ದರಾಮಯ್ಯ ಆಪ್ತ ಎಂಬ ಕಾರಣಕ್ಕೆ ನನಗೆ ಅನ್ಯಾಯ ಆಗಿ...
04-08-26 09:10 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
06-08-26 11:03 pm
Mangaluru Staffer
ಅಯೋಧ್ಯೆ ಕಾಣಿಕೆ ಹಣ ಕಳವು ತೀವ್ರ ಆಘಾತಕಾರಿ, ಯಾವುದೇ...
06-08-26 10:22 pm
ಹಿಂದೂ ದೇವಸ್ಥಾನಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ...
06-08-26 09:33 pm
ಹೆದ್ದಾರಿ ಬದಿ ವ್ಯಾಪಾರಿಗಳ ವಿರುದ್ಧ ಕಾರ್ಯಾಚರಣೆಗಿಳ...
06-08-26 08:09 pm
ಸುರತ್ಕಲ್ ಎನ್ಐಟಿಕೆ ಕಾಲೇಜು ಹಾಸ್ಟೆಲ್ನಲ್ಲಿ ಸ್ವಯ...
05-08-26 08:08 pm
07-08-26 12:35 pm
HK News Staffer
ಲವ್ - ಸೆಕ್ಸ್..ದೋಖಾ ; ಬಳ್ಳಾರಿಯಲ್ಲಿ ಬೆಚ್ಚಿಬೀಳಿಸ...
06-08-26 09:31 pm
ಲವ್ - ಸೆಕ್ಸ್ ದೋಖಾ ; ಬಳ್ಳಾರಿಯಲ್ಲಿ ಬೆಚ್ಚಿಬೀಳಿಸಿ...
06-08-26 09:31 pm
ಬೆಂಗಳೂರು ; ಒಂದು ತಿಂಗಳ ಹಿಂದೆ ನೇಪಾಳದಿಂದ ಕೆಲಸಕ್ಕ...
06-08-26 06:13 pm
7 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ...
06-08-26 11:48 am