ಬ್ರೇಕಿಂಗ್ ನ್ಯೂಸ್
21-04-26 02:36 pm HK News Staffer ಕರಾವಳಿ
ಮಂಗಳೂರು, ಎಪ್ರಿಲ್ 21 : ಅಡ್ವೆಂಚರ್ ವಾಟರ್ ಸ್ಪೋರ್ಟ್ಸ್, ಪ್ರವಾಸೋದ್ಯಮ ಸಹಿತ ದಕ್ಷಿಣ ಕನ್ನಡದ ಅಭಿವೃದ್ಧಿಗೆ ಪೂರಕವಾದ ವಿವಿಧ ವಿಚಾರಗಳಿಗೆ ಸಂಬಂಧಿಸಿ ಆಸ್ಟ್ರೇಲಿಯಾದ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ ಅವರನ್ನು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಮಂಗಳೂರಿನಲ್ಲಿ ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿದ್ದಾರೆ.
ಸೋಮವಾರ ಮಂಗಳೂರಿಗೆ ಭೇಟಿ ನೀಡಿದ ಕಾನ್ಸುಲ್ ಜನರಲ್ ಅವರೊಂದಿಗೆ ನಡೆಸಿದ ಚರ್ಚೆಯ ಸಂದರ್ಭದಲ್ಲಿ, ಆಸ್ಟ್ರೇಲಿಯಾ ಹಾಗೂ ದಕ್ಷಿಣ ಕನ್ನಡ ಎರಡೂ ಕಡೆ ವಿಸ್ತಾರವಾದ ಕರಾವಳಿ ಪ್ರದೇಶ ಹೊಂದಿರುವುದರಿಂದ, ಸಾಹಸಮಯ ವಾಟರ್ ಸ್ಪೋರ್ಟ್ಸ್ ಮತ್ತು ಪ್ರವಾಸೋದ್ಯಮವನ್ನು ಉತ್ತೇಜಿಸುವ ಕುರಿತು ಸಮಾಲೋಚಿಸಲಾಯಿತು. ಪ್ರಮುಖವಾಗಿ, ಆಸ್ಟ್ರೇಲಿಯಾದ ತಾಂತ್ರಿಕ ನೈಪುಣ್ಯತೆ ಮತ್ತು ಈ ಕ್ಷೇತ್ರದಲ್ಲಿ ಅವರಿಗಿರುವ ದಶಕಗಳ ಅನುಭವವನ್ನು ನಮ್ಮ ಕರಾವಳಿಯ ಅಭಿವೃದ್ಧಿಗೆ ಪೂರಕವಾಗಿ ಹೇಗೆ ಬಳಸಿಕೊಳ್ಳಬಹುದು ಎಂಬ ಬಗ್ಗೆ ಚರ್ಚಿಸಲಾಯಿತು.


ಕ್ರೀಡಾ ಕ್ಷೇತ್ರದಲ್ಲಿ ಯುವಜನತೆಗೆ ಹೆಚ್ಚಿನ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ, ಆಸ್ಟ್ರೇಲಿಯಾದ ವಿಶ್ವವಿದ್ಯಾಲಯಗಳೊಂದಿಗೆ ಕ್ರೀಡಾ ಪಠ್ಯಕ್ರಮ ಅಭಿವೃದ್ಧಿಗಾಗಿ ಸಹಭಾಗಿತ್ವ ಹೊಂದುವ ಕುರಿತಾಗಿಯೂ ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ಕಾನ್ಸುಲ್ ಜನರಲ್ ಅವರು ಸಂಸದ ಕ್ಯಾ. ಚೌಟ ಅವರಿಗೆ ಸ್ಮರಣಿಕೆಯಾಗಿ ಲೆದರ್ ಬಾಲ್ ಅನ್ನು ಉಡುಗೊರೆಯಾಗಿ ನೀಡಿದ್ದು ವಿಶೇಷವಾಗಿತ್ತು.
ಭೇಟಿ ಬಳಿಕ ಪ್ರತಿಕ್ರಿಯಿಸಿದ ಕ್ಯಾ. ಚೌಟ ಅವರು ಇಂತಹ ಉಪಕ್ರಮಗಳು ಎರಡು ದೇಶಗಳ ನಡುವಿನ ಸಂಬಂಧ ಗಟ್ಟಿಗೊಳಿಸುವುದಲ್ಲದೆ ನಮ್ಮ ಯುವಜನತೆಗೆ ಜಾಗತಿಕ ಮಟ್ಟದ ಕೌಶಲ್ಯ ಮತ್ತು ಮಾನ್ಯತೆಯನ್ನು ಒದಗಿಸುವ ಮೂಲಕ ಹೊಸ ಹಾದಿ ತೆರೆಯಲಿವೆ. ಅಲ್ಲದೆ ಇದು ಆರ್ಥಿಕ ಪ್ರಗತಿಯ ಜೊತೆಗೆ 'ವಿಕಸಿತ ಭಾರತ'ದ ದೃಷ್ಟಿಕೋನಕ್ಕೆ ಮಹತ್ವದ ಕೊಡುಗೆ ನೀಡಲಿದೆ ಎಂದು ಆಶಯ ವ್ಯಕ್ತಪಡಿಸಿದರು.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 02:34 pm
HK News Staffer
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm
ಕಾರವಾರದ ಕಡ್ಲೆ ಬೀಚ್ನಲ್ಲಿ ರೀಲ್ಸ್ ಮಾಡುಲು ಹೋಗಿ ಅ...
15-06-26 04:54 pm