ಬ್ರೇಕಿಂಗ್ ನ್ಯೂಸ್
04-01-21 09:05 pm Mangaluru Correspondant ಕರಾವಳಿ
Photo credits : RPTS
ಮಂಗಳೂರು, ಜ.4: ಪಡೀಲ್ ಬಳಿಯ ಫೈಸಲ್ ನಗರದಲ್ಲಿ ಏಕ್ಟಿವಾ ವಾಹನದಲ್ಲಿ ಸಾಗುತ್ತಿದ್ದ ಸವಾರರಿಬ್ಬರು ರಸ್ತೆ ಬದಿಯ ಬಾವಿಗೆ ಬಿದ್ದು ದುರಂತ ಸಂಭವಿಸಿದೆ.
ಸಂಜೆ ಏಳು ಗಂಟೆ ಸುಮಾರಿಗೆ ಘಟನೆ ನಡೆದಿದ್ದು ಫೈಸಲ್ ನಗರದ ಏರು ಹಾದಿಯ ರಸ್ತೆಯಲ್ಲಿ ಸಾಗುತ್ತಿದ್ದಾಗ ರಸ್ತೆ ಬದಿಯಿದ್ದ ಬಾವಿಗೆ ಉರುಳಿ ಬಿದ್ದಿದೆ. ಕಾಂಕ್ರೀಟ್ ರಸ್ತೆಯಾಗಿದ್ದು ರಸ್ತೆ ಬದಿಗೆ ಇಳಿಯುವಷ್ಟರಲ್ಲಿ ಸ್ಕಿಡ್ ಆಗಿ ಏಕ್ಟಿವಾ ಉರುಳಿ ಬಿದ್ದಿರುವ ಸಾಧ್ಯತೆಯಿದೆ ಎನ್ನಲಾಗಿದೆ. ಏಕ್ಟಿವಾ ವಾಹನ ರಸ್ತೆ ಬದಿಯಲ್ಲಿ ಉಳಿದುಕೊಂಡಿದ್ದರೆ, ಅದರಲ್ಲಿದ್ದ ಇಬ್ಬರು ಸವಾರರು ಬಾವಿಗೆ ಉರುಳಿ ಬಿದ್ದಿದ್ದಾರೆ.
ಘಟನೆ ನಡೆದಿರುವ ಪ್ರದೇಶದಲ್ಲಿ ಕತ್ತಲು ಕವಿದಿದ್ದರಿಂದ ಯಾರಿಗೂ ಗೊತ್ತಾಗಿಲ್ಲ. ಬೀದಿ ದೀಪ ಇಲ್ಲದ ರಸ್ತೆ ಅದಾಗಿದ್ದು ಇತ್ತೀಚೆಗಷ್ಟೇ ಕಾಂಕ್ರೀಟ್ ಆಗಿತ್ತು. ರಸ್ತೆ ಬದಿಯಲ್ಲೇ ಬಾವಿ ಇದ್ದು ಅದಕ್ಕೆ ಆವರಣ ಗೋಡೆ ಇರಲಿಲ್ಲ. ರಸ್ತೆ ಬದಿ ಅಪಾಯಕಾರಿ ಜಾಗ ಆಗಿದ್ದರೂ ತಡೆಗೋಡೆ ಮಾಡಿರಲಿಲ್ಲ.
ಸ್ವಲ್ಪ ಹೊತ್ತಿನ ಬಳಿಕ ಅದೇ ದಾರಿಯಲ್ಲಿ ಬಂದವರು ಯಾರೋ ಏಕ್ಟಿವಾ ಗಮನಿಸಿ, ಬಾವಿಗೆ ಇಣುಕಿದಾಗ ನೀರಿನಲ್ಲಿ ಯುವಕರು ಇರುವುದು ಪತ್ತೆಯಾಗಿದೆ. ಆನಂತರ ಸ್ಥಳೀಯರು ಸೇರಿ ಒಬ್ಬನನ್ನು ರಕ್ಷಣೆ ಮಾಡಿದ್ದು ಬಾವಿಯಿಂದ ಮೇಲಕ್ಕೆತ್ತಿ ಆಸ್ಪತ್ರೆಗೆ ಒಯ್ದಿದ್ದಾರೆ. ಇನ್ನೊಬ್ಬನ ರಕ್ಷಣಾ ಕಾರ್ಯ ನಡೆಯುತ್ತಿದೆ. ಎಂಟು ಗಂಟೆ ಸುಮಾರಿಗೆ ಅಗ್ನಿಶಾಮಕ ದಳ ಆಗಮಿಸಿದೆ. ಅದಕ್ಕೂ ಮುನ್ನ ಲೈಟ್ ಇಲ್ಲದೆ ಸ್ಥಳೀಯರು ಮೊಬೈಲ್ ಬೆಳಕಿನಲ್ಲಿ ರಕ್ಷಣಾ ಕಾರ್ಯ ನಡೆಸಿದ್ದಾರೆ. ನೀರಿಗೆ ಬಿದ್ದವರ ಗುರುತು ಪತ್ತೆಯಾಗಿಲ್ಲ. ಸ್ಥಳದಲ್ಲಿ ಪೊಲೀಸರು ಮತ್ತು ನೂರಾರು ಮಂದಿ ಸೇರಿದ್ದಾರೆ.
Breaking Update: ಆ್ಯಕ್ಟಿವಾ ನಿಯಂತ್ರಣ ತಪ್ಪಿ ಪಲ್ಟಿ ; ಸವಾರ ಬಾವಿಗೆ ಬಿದ್ದು ಸಾವು !
Two Wheeler Active fell into well after rider lost control and got slipped in FaizalNagar, Padil, Mangalore. The Fire brigade personals rushed to the spot and have rescued two persons.
09-05-26 10:41 pm
HK News Desk
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
09-05-26 12:06 pm
HK News Staffer
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am