ಬ್ರೇಕಿಂಗ್ ನ್ಯೂಸ್
28-04-26 01:26 pm HK News Staffer ಕರಾವಳಿ
ಬಂಟ್ವಾಳ, ಎಪ್ರಿಲ್ 28: ನೂತನ ಮನೆಯ ಗೃಹ ಪ್ರವೇಶದ ಔಣಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗಲೇ ಮನೆ ಯಜಮಾನ, ಯುವ ಮುಸ್ಲಿಂ ವಿದ್ವಾಂಸ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಸಜಿಪ ಮುನ್ನೂರು ಗ್ರಾಮದ ಆಲಾಡಿ-ಕೊಪ್ಪಳ ಎಂಬಲ್ಲಿ ಸೋಮವಾರ ನಡೆದಿದೆ.
ಸಜಿಪನಡು ನಿವಾಸಿ ಪುತ್ತನಾಕ ಎಂಬವರ ಪುತ್ರ ಅಮೀರ್ ಅರ್ಶದಿ(36) ಹಠಾತ್ ಹೃದಯಾಘಾತಕ್ಕೀಡಾಗಿ ಮೃತಪಟ್ಟವರು. ಅವರಿಗೆ ತಂದೆ-ತಾಯಿ, ಪತ್ನಿ, ಪುತ್ರ, ಪುತ್ರಿ ಇದ್ದಾರೆ. ಮರ್ಹೂಂ ಶೈಖುನಾ ಮಿತ್ತಬೈಲು ಉಸ್ತಾದರ ಶಿಷ್ಯರಾಗಿದ್ದ ಇವರು ಕಾಸರಗೋಡು ತಾಳಿಪಡ್ಪು ಮಸ್ಟಿದುಲ್ ಹುದಾ ಮಸೀದಿಯಲ್ಲಿ ಐದು ವರ್ಷಗಳಿಂದ ಖತೀಬರಾಗಿ ಸೇವೆ ಸಲ್ಲಿಸುತ್ತಿದ್ದು, ಯುವ ಸಮೂಹದಲ್ಲಿ ಧಾರ್ಮಿಕ ಪ್ರಜ್ಞೆ ಮೂಡಿಸುವ ಕಾರ್ಯ ನಡೆಸಿದ್ದರು ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.
ಇತ್ತೀಚೆಗಷ್ಟೆ ಕಿಡ್ನಿ ಸಂಬಂಧಿ ಕಾಯಿಲೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಭಾನುವಾರ ಮಧ್ಯರಾತ್ರಿ ಹಠಾತ್ ಎದೆನೋವು ಕಾಣಿಸಿಕೊಂಡಿದ್ದು, ತಕ್ಷಣ ಅವರನ್ನು ಬಿ.ಸಿ.ರೋಡ್ ಪರ್ಲಿಯಾದ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಅಲ್ಲಿನ ವೈದ್ಯರ ಸಲಹೆಯಂತೆ ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅದಾಗಲೇ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಸಜಿಪಮುನ್ನೂರು ಗ್ರಾಮದ ಆಲಂಪಾಡಿ-ಕೊಪ್ಪಳ ಎಂಬಲ್ಲಿ ನೂತನ ಮನೆ ನಿರ್ಮಿಸಿದ್ದು, ಏ.17ರಂದು ಔಪಚಾರಿಕ ಗೃಹ ಪ್ರವೇಶ ಪ್ರಕ್ರಿಯೆ ನಡೆಸಿದ್ದರು. ಏ.27 ರಂದು ಮಧ್ಯಾಹ್ನ ಬಂಧು-ಮಿತ್ರರಿಗೆ ಔತಣಕೂಟ ಏರ್ಪಡಿಸಿದ್ದರು. ಈ ಔತಣಕೂಟಕ್ಕಾಗಿ ಭಾನುವಾರ ರಾತ್ರಿ ವರೆಗೂ ಬಂಧು-ಮಿತ್ರರಿಗೆ ಕರೆ ಮಾಡಿ ಆಹ್ವಾನಿಸಿದ್ದರು ಎಂದು ಆಹ್ವಾನ ಕರೆ ಸ್ವೀಕರಿಸಿದ ಬಂಧು-ಮಿತ್ರರು ತಿಳಿಸಿದ್ದಾರೆ. ಅಮೀರ್ ಅರ್ಶದಿ ಅವರ ಹಠಾತ್, ಅಕಾಲಿಕ ನಿಧನಕ್ಕೆ ಬಂಧು ಮಿತ್ರರು ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ.
In a tragic turn of events, a young Muslim scholar from Bantwal passed away suddenly on the very day of his new housewarming feast. The deceased, known in the community for his knowledge and humility, had organized the gathering to celebrate moving into his new home.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm