ಬ್ರೇಕಿಂಗ್ ನ್ಯೂಸ್
02-05-26 08:58 pm HK News Staffer ಕರಾವಳಿ
ಮಂಗಳೂರು, ಮೇ 2: ತುಂಬೆ ವೆಂಟೆಡ್ ಡ್ಯಾಂನಲ್ಲಿ ನೀರಿನ ಮಟ್ಟ ಅತ್ಯಂತ ಕನಿಷ್ಠ ಮಟ್ಟಕ್ಕೆ ಕುಸಿದು ಅಣೆಕಟ್ಟಿನಲ್ಲಿ ಕೇವಲ 4 ಮೀಟರ್ಗೆ ಇಳಿಕೆಯಾಗುವ ಮೂಲಕ ನಗರದಲ್ಲಿ ಕೃತಕ ಜಲಕ್ಷಾಮವನ್ನು ಸೃಷ್ಟಿಸಲಾಗಿದೆ. ಕೂಡಲೇ ಎಎಂಆರ್ ಡ್ಯಾಮ್ ನಿಂದ ತುಂಬೆ ಡ್ಯಾಮ್ ಗೆ ನೀರು ಹರಿಸಿ ಜಲಕ್ಷಾಮ ನಿವಾರಿಸಬೇಕು ಎಂದು ಶಾಸಕ ವೇದವ್ಯಾಸ ಕಾಮತ್ ಆಗ್ರಹಿಸಿದ್ದಾರೆ.
ನೇತ್ರಾವತಿ ನದಿಯ ತುಂಬೆ ಡ್ಯಾಮ್ ಗೆ ಖುದ್ದು ಭೇಟಿ ನೀಡಿ ವೀಕ್ಷಣೆ ನಡೆಸಿದ ಶಾಸಕರು, ನಗರ ವ್ಯಾಪ್ತಿಯಲ್ಲಿ ಇಬ್ಬರು ಶಾಸಕರು ಇದ್ದರೂ ಯಾವುದೇ ಮಾಹಿತಿ ನೀಡದೇ ಜಿಲ್ಲಾಡಳಿತ ನೇತೃತ್ವದ ಪಾಲಿಕೆಯು ನೀರಿನ ರೇಷನಿಂಗ್ ಬಗ್ಗೆ ನಿರ್ಧಾರ ತೆಗೆದುಕೊಂಡಿದೆ. ವಾಸ್ತವದಲ್ಲಿ ಆಪತ್ಕಾಲದ ಬಳಕೆಗೆ ಇರುವ ಎಎಂಆರ್ ಡ್ಯಾಮ್ ನಲ್ಲಿ ಸಾಕಷ್ಟು ನೀರಿದ್ದು ತುಂಬೆಗೆ ಹರಿಸಿ ನೀರಿನ ಮಟ್ಟ 6 ಮೀಟರ್ ವರೆಗೆ ಏರಿಸಿ ಜನರಿಗೆ ದಿನನಿತ್ಯ ನೀರು ಸರಬರಾಜು ಮಾಡಬಹುದು. ಇದನ್ನು ಬಿಜೆಪಿಯು ಹಿಂದಿನ ಪಾಲಿಕೆಯ ಆಡಳಿತದಲ್ಲಿ ಮಾಡಿ ತೋರಿಸಿರುವಾಗ, ಜನರನ್ನು ಹೀಗೆ ಭಯ ಭೀತಗೊಳಿಸುವುದು ಎಷ್ಟು ಸರಿ.? ನಾಳೆಯೊಳಗೆ ಎಎಂಆರ್ ಡ್ಯಾಮ್ ನಿಂದ ನೀರು ಬಿಡಬೇಕೆಂದು ಅಧಿಕಾರಿಗಳನ್ನು ಆಗ್ರಹಿಸಿದರು.

ಮಾಜಿ ಮೇಯರ್ ಗಳಾದ ಪ್ರೇಮಾನಂದ ಶೆಟ್ಟಿ ಹಾಗೂ ಸುಧೀರ್ ಶೆಟ್ಟಿ ಕಣ್ಣೂರು ಮಾತನಾಡಿ, ಖಂಡಿತ ನೀರಿನ ಸಮಸ್ಯೆ ಇಲ್ಲ. ಆಡಳಿತ ನಡೆಸುವವರು ಅನುಭವವಿಲ್ಲದೆ ಇಂತಹ ನಿರ್ಧಾರ ಕೈಗೊಂಡಂತಾಗಿದೆ. ಇನ್ನಿತರ ಬಳಕೆಗೆ ನೀರು ಬಳಸುವುದನ್ನು ತಡೆಯುವುದು ಬಿಟ್ಟು ಜನರ ಕುಡಿಯುವ ನೀರು ನಿಲ್ಲಿಸುವುದು ಎಷ್ಟು ಸರಿ? ನಗರದ ಹಲವೆಡೆ ನೀರೇ ಬರುತ್ತಿಲ್ಲ ಎಂಬ ಆರೋಪವಿದ್ದು 24 ಗಂಟೆ ಎಲ್ಲಾ ಮನೆಗಳಿಗೂ ನೀರು ತಲುಪುವಂತೆ ಕ್ರಮ ಕೈಗೊಳ್ಳಬೇಕು ಎಂದರು. ತುಂಬೆ ಡ್ಯಾಮ್ ನಲ್ಲಿ ನೀರು ಇಲ್ಲವೆಂದು ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು ಹರಿಸಲು ಮಹಾನಗರ ಪಾಲಿಕೆ ನಿರ್ಧಾರ ಕೈಗೊಂಡಿದ್ದು ನೀರು ಪೂರೈಕೆ ಕಡಿತ ಮಾಡಿದೆ.
ಈ ಸಂದರ್ಭದಲ್ಲಿ ಬಿಜೆಪಿ ನಿಕಟ ಪೂರ್ವ ಪಾಲಿಕೆ ಸದಸ್ಯರುಗಳಾದ ಪೂರ್ಣಿಮಾ, ಭಾನುಮತಿ, ವೀಣಾಮಂಗಳ, ಲೀಲಾವತಿ ಪ್ರಕಾಶ್, ಜಯಲಕ್ಷ್ಮಿ ಶೆಟ್ಟಿ, ಸಂದೀಪ್ ಗರೋಡಿ, ಭರತ್ ಕುಮಾರ್, ಶೈಲೇಶ್ ಶೆಟ್ಟಿ, ಗಣೇಶ್ ಕುಲಾಲ್, ಶೋಭಾ ಪೂಜಾರಿ, ಕಿಶೋರ್ ಕೊಟ್ಟಾರಿ, ಮನೋಹರ್ ಶೆಟ್ಟಿ, ಪ್ರಮುಖರಾದ ಅಶ್ವಿತ್ ಕೊಟ್ಟಾರಿ, ರಮೇಶ್ ಹೆಗ್ಡೆ, ಮೋಹನ್ ಪೂಜಾರಿ, ಪಾಲಿಕೆಯ ಹಿರಿಯ ಅಧಿಕಾರಿಗಳಾದ ನರೇಶ್ ಶೆಣೈ, ಅಶ್ವಿನ್ ಉಪಸ್ಥಿತರಿದ್ದರು.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 10:21 pm
HK News Staffer
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm