ಬ್ರೇಕಿಂಗ್ ನ್ಯೂಸ್
02-05-26 08:58 pm HK News Staffer ಕರಾವಳಿ
ಮಂಗಳೂರು, ಮೇ 2: ತುಂಬೆ ವೆಂಟೆಡ್ ಡ್ಯಾಂನಲ್ಲಿ ನೀರಿನ ಮಟ್ಟ ಅತ್ಯಂತ ಕನಿಷ್ಠ ಮಟ್ಟಕ್ಕೆ ಕುಸಿದು ಅಣೆಕಟ್ಟಿನಲ್ಲಿ ಕೇವಲ 4 ಮೀಟರ್ಗೆ ಇಳಿಕೆಯಾಗುವ ಮೂಲಕ ನಗರದಲ್ಲಿ ಕೃತಕ ಜಲಕ್ಷಾಮವನ್ನು ಸೃಷ್ಟಿಸಲಾಗಿದೆ. ಕೂಡಲೇ ಎಎಂಆರ್ ಡ್ಯಾಮ್ ನಿಂದ ತುಂಬೆ ಡ್ಯಾಮ್ ಗೆ ನೀರು ಹರಿಸಿ ಜಲಕ್ಷಾಮ ನಿವಾರಿಸಬೇಕು ಎಂದು ಶಾಸಕ ವೇದವ್ಯಾಸ ಕಾಮತ್ ಆಗ್ರಹಿಸಿದ್ದಾರೆ.
ನೇತ್ರಾವತಿ ನದಿಯ ತುಂಬೆ ಡ್ಯಾಮ್ ಗೆ ಖುದ್ದು ಭೇಟಿ ನೀಡಿ ವೀಕ್ಷಣೆ ನಡೆಸಿದ ಶಾಸಕರು, ನಗರ ವ್ಯಾಪ್ತಿಯಲ್ಲಿ ಇಬ್ಬರು ಶಾಸಕರು ಇದ್ದರೂ ಯಾವುದೇ ಮಾಹಿತಿ ನೀಡದೇ ಜಿಲ್ಲಾಡಳಿತ ನೇತೃತ್ವದ ಪಾಲಿಕೆಯು ನೀರಿನ ರೇಷನಿಂಗ್ ಬಗ್ಗೆ ನಿರ್ಧಾರ ತೆಗೆದುಕೊಂಡಿದೆ. ವಾಸ್ತವದಲ್ಲಿ ಆಪತ್ಕಾಲದ ಬಳಕೆಗೆ ಇರುವ ಎಎಂಆರ್ ಡ್ಯಾಮ್ ನಲ್ಲಿ ಸಾಕಷ್ಟು ನೀರಿದ್ದು ತುಂಬೆಗೆ ಹರಿಸಿ ನೀರಿನ ಮಟ್ಟ 6 ಮೀಟರ್ ವರೆಗೆ ಏರಿಸಿ ಜನರಿಗೆ ದಿನನಿತ್ಯ ನೀರು ಸರಬರಾಜು ಮಾಡಬಹುದು. ಇದನ್ನು ಬಿಜೆಪಿಯು ಹಿಂದಿನ ಪಾಲಿಕೆಯ ಆಡಳಿತದಲ್ಲಿ ಮಾಡಿ ತೋರಿಸಿರುವಾಗ, ಜನರನ್ನು ಹೀಗೆ ಭಯ ಭೀತಗೊಳಿಸುವುದು ಎಷ್ಟು ಸರಿ.? ನಾಳೆಯೊಳಗೆ ಎಎಂಆರ್ ಡ್ಯಾಮ್ ನಿಂದ ನೀರು ಬಿಡಬೇಕೆಂದು ಅಧಿಕಾರಿಗಳನ್ನು ಆಗ್ರಹಿಸಿದರು.

ಮಾಜಿ ಮೇಯರ್ ಗಳಾದ ಪ್ರೇಮಾನಂದ ಶೆಟ್ಟಿ ಹಾಗೂ ಸುಧೀರ್ ಶೆಟ್ಟಿ ಕಣ್ಣೂರು ಮಾತನಾಡಿ, ಖಂಡಿತ ನೀರಿನ ಸಮಸ್ಯೆ ಇಲ್ಲ. ಆಡಳಿತ ನಡೆಸುವವರು ಅನುಭವವಿಲ್ಲದೆ ಇಂತಹ ನಿರ್ಧಾರ ಕೈಗೊಂಡಂತಾಗಿದೆ. ಇನ್ನಿತರ ಬಳಕೆಗೆ ನೀರು ಬಳಸುವುದನ್ನು ತಡೆಯುವುದು ಬಿಟ್ಟು ಜನರ ಕುಡಿಯುವ ನೀರು ನಿಲ್ಲಿಸುವುದು ಎಷ್ಟು ಸರಿ? ನಗರದ ಹಲವೆಡೆ ನೀರೇ ಬರುತ್ತಿಲ್ಲ ಎಂಬ ಆರೋಪವಿದ್ದು 24 ಗಂಟೆ ಎಲ್ಲಾ ಮನೆಗಳಿಗೂ ನೀರು ತಲುಪುವಂತೆ ಕ್ರಮ ಕೈಗೊಳ್ಳಬೇಕು ಎಂದರು. ತುಂಬೆ ಡ್ಯಾಮ್ ನಲ್ಲಿ ನೀರು ಇಲ್ಲವೆಂದು ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು ಹರಿಸಲು ಮಹಾನಗರ ಪಾಲಿಕೆ ನಿರ್ಧಾರ ಕೈಗೊಂಡಿದ್ದು ನೀರು ಪೂರೈಕೆ ಕಡಿತ ಮಾಡಿದೆ.
ಈ ಸಂದರ್ಭದಲ್ಲಿ ಬಿಜೆಪಿ ನಿಕಟ ಪೂರ್ವ ಪಾಲಿಕೆ ಸದಸ್ಯರುಗಳಾದ ಪೂರ್ಣಿಮಾ, ಭಾನುಮತಿ, ವೀಣಾಮಂಗಳ, ಲೀಲಾವತಿ ಪ್ರಕಾಶ್, ಜಯಲಕ್ಷ್ಮಿ ಶೆಟ್ಟಿ, ಸಂದೀಪ್ ಗರೋಡಿ, ಭರತ್ ಕುಮಾರ್, ಶೈಲೇಶ್ ಶೆಟ್ಟಿ, ಗಣೇಶ್ ಕುಲಾಲ್, ಶೋಭಾ ಪೂಜಾರಿ, ಕಿಶೋರ್ ಕೊಟ್ಟಾರಿ, ಮನೋಹರ್ ಶೆಟ್ಟಿ, ಪ್ರಮುಖರಾದ ಅಶ್ವಿತ್ ಕೊಟ್ಟಾರಿ, ರಮೇಶ್ ಹೆಗ್ಡೆ, ಮೋಹನ್ ಪೂಜಾರಿ, ಪಾಲಿಕೆಯ ಹಿರಿಯ ಅಧಿಕಾರಿಗಳಾದ ನರೇಶ್ ಶೆಣೈ, ಅಶ್ವಿನ್ ಉಪಸ್ಥಿತರಿದ್ದರು.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 08:58 pm
HK News Staffer
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm