ಬ್ರೇಕಿಂಗ್ ನ್ಯೂಸ್
05-01-21 12:44 pm Mangalore Correspondent ಕರಾವಳಿ
ಮಂಗಳೂರು, ಜ.5: ಬಾಹುಬಲಿ ಚಿತ್ರದಲ್ಲಿ ಶಿವಗಾಮಿ ಮಗುವನ್ನು ಕೈಯಲ್ಲಿ ಹಿಡಿದು ನದಿಯಲ್ಲಿ ಮುಳುಗಿದ್ದನ್ನು ಎಲ್ಲರೂ ನೋಡಿರುತ್ತೀರಿ. ಅಂಥದ್ದೇ ನೈಜ ಘಟನೆಯ ವಿಡಿಯೋ ಈಗ ವೈರಲ್ ಆಗಿದೆ. ಮಂಗಳೂರಿನ ಸಸಿಹಿತ್ಲು ಬಳಿ ಶಾಂಭವಿ ನದಿ ಸಮುದ್ರ ಸೇರುವಲ್ಲಿ ಡಿ.31ರಂದು ದುರಂತ ನಡೆದಿತ್ತು.

ಇಬ್ಬರು ಮಕ್ಕಳ ಜೊತೆ ದಂಪತಿ ನದಿಯಲ್ಲಿ ನೀರಾಟ ಆಡುತ್ತಿದ್ದಾಗ ಸಮುದ್ರದಲ್ಲಿ ನೀರಿನ ಏರಿಕೆಯಾಗಿ ಎಲ್ಲರೂ ಮುಳುಗಿದ್ದರು. ಈ ವೇಳೆ ದಂಪತಿ ಮತ್ತು ಮಕ್ಕಳಿಗೆ ನೀರಿನಿಂದ ಮೇಲೆ ಬರಲು ಸಾಧ್ಯವಾಗಲಿಲ್ಲ. ನದಿ ದಡದಲ್ಲೇ ಇದ್ದರೂ, ನೀರಿನ ಮಧ್ಯೆ ವಿಲ ವಿಲ ಒದ್ದಾಡುವಂತಾಗಿತ್ತು. ಮಕ್ಕಳು ಮುಳುಗುತ್ತಿರುವುದನ್ನು ಕಂಡ ಜಯರಾಮ ಗೌಡ, ಇಬ್ಬರು ಮಕ್ಕಳನ್ನೂ ಕೈಯಲ್ಲಿ ಮೇಲೆ ಹಿಡಿದು ತಾವು ನದಿ ತಳದಲ್ಲಿ ನಿಂತಿದ್ದರು. ಮಕ್ಕಳು ಮತ್ತು ತಾಯಿ ಬೊಬ್ಬಿಡುತ್ತಿರುವುದನ್ನು ಕೇಳಿದ, ಅಲ್ಲಿಯೇ ಸ್ವಲ್ಪ ದೂರದಲ್ಲಿ ಇದ್ದ ಮಂತ್ರ ಸರ್ಫಿಂಗ್ ಕ್ಲಬ್ ಸದಸ್ಯರು ರಕ್ಷಣೆಗೆ ಧಾವಿಸಿದ್ದರು.

ಕೂಡಲೇ ಬೋಟ್ ಹಿಡಿದು ರಕ್ಷಣೆಗೆ ಧಾವಿಸಿದ ಮಂತ್ರ ಸರ್ಫಿಂಗ್ ಕ್ಲಬ್ ಸದಸ್ಯ ಶ್ಯಾಮ್, ಜಯರಾಮ ಗೌಡರ ಕೈಯಲ್ಲಿದ್ದ ಇಬ್ಬರು ಮಕ್ಕಳನ್ನು ಮೊದಲು ರಕ್ಷಣೆ ಮಾಡಿದ್ದರು. ಆಬಳಿಕ ಮಹಿಳೆಯನ್ನು ಬೋಟಿಗೆ ಎಳೆಯಲು ಭಾರೀ ಶ್ರಮ ಪಟ್ಟಿದ್ದಾರೆ. ಧಡೂತಿ ದೇಹದ ಮಹಿಳೆಯಾಗಿದ್ದರಿಂದ ಅವರನ್ನು ಬೋಟಿಗೆ ಎಳೆಯುವುದು ಇಬ್ಬರಿದ್ದ ತಂಡಕ್ಕೆ ಸುಲಭದಲ್ಲಿ ಸಾಧ್ಯವಾಗಲಿಲ್ಲ. ತಾಯಿ, ಮಕ್ಕಳನ್ನು ರಕ್ಷಣೆ ಮಾಡುವಾಗ ಹತ್ತು ನಿಮಿಷ ಕಳೆದಿದ್ದು, ಈ ವೇಳೆ ಜಯರಾಮ ಗೌಡ ನೀರಿನಲ್ಲಿ ಮುಳುಗಿದ್ದಾರೆ.


ಮೊದಲೇ ನದಿ ನೀರಿನಲ್ಲಿ ಮುಳುಗಿದ್ದ ಜಯರಾಮ ಗೌಡ, ಮಕ್ಕಳನ್ನು ಮೇಲಕ್ಕೆ ಹಿಡಿದೇ ಪ್ರಾಣ ಬಿಟ್ಟಿದ್ದಾರೆ. ಬಾಹುಬಲಿ ಚಿತ್ರದಲ್ಲಿ ಶಿವಗಾಮಿ ಮಗುವನ್ನು ಹಿಡಿದುಕೊಂಡೇ ತೇಲಿಕೊಂಡು ಹೋದ ರೀತಿ ಜಯರಾಮ ಗೌಡ ಪ್ರಾಣ ಬಿಟ್ಟಿದ್ದು ನೆನಪಿಸುವಂತೆ ಅಲ್ಲಿನ ವಿಡಿಯೋ ಈಗ ವೈರಲ್ ಆಗುತ್ತಿದೆ. ಪುತ್ತೂರಿನ ಕಡಬ ನಿವಾಸಿಯಾಗಿದ್ದ ಜಯರಾಮ ಗೌಡ, ಮೂಲ್ಕಿ ಮೂಲಕ ಸಸಿಹಿತ್ಲು ಕಡಲ ತೀರಕ್ಕೆ ಆಗಮಿಸಿದ್ದರು. ಹೊಸ ವರ್ಷಕ್ಕೆ ಬೀಚ್ ಇಳಿಯಬಾರದೆಂದು ಜಿಲ್ಲಾಡಳಿತದ ಸೂಚನೆ ಹಿನ್ನೆಲೆಯಲ್ಲಿ ನದಿಯಲ್ಲಿ ನೀರಾಟವಾಡಲು ತೊಡಗಿದ್ದರು. ಆದರೆ, ವಿಧಿಯಾಟವೇ ಬೇರೆಯದ್ದೇ ಆಗಿತ್ತು. ನದಿಯೇ ದುರಂತಕ್ಕೆ ಆಹ್ವಾನಿಸಿತ್ತು.
Video:
In a heartbreaking incident father saved his little daughter and drows in Shambhavi river in Mangalore. The incident took place while they were playing in water and water level increased.
09-05-26 10:41 pm
HK News Desk
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
09-05-26 12:06 pm
HK News Staffer
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am