ಬ್ರೇಕಿಂಗ್ ನ್ಯೂಸ್
05-05-26 11:01 pm HK News Desk ಕರಾವಳಿ
ಪುತ್ತೂರು, ಮೇ 5 ಸವಣೂರು ಸಮೀಪದ ಚಾಪಳ್ಳ ಎಂಬಲ್ಲಿನ ಹೆದ್ದಾರಿ ತಿರುವಿನಲ್ಲಿ ಮಂಗಳವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನಿಬ್ಬರು ಗಾಯಗೊಂಡಿದ್ದಾರೆ.
ಬಂಟ್ವಾಳ ತಾಲ್ಲೂಕಿನ ಮಿತ್ತೂರು ಗ್ರಾಮದ ಯಜ್ಞೇಶ್ (21) ಹಾಗೂ ಪುತ್ತೂರು ತಾಲ್ಲೂಕಿನ ಪಾಣಾಜೆ ಗ್ರಾಮದ ಜಗನ್ (20) ಮೃತಪಟ್ಟ ದುರ್ದೈವಿಗಳು. ಜಗನ್ ಅವರು ಪುತ್ತೂರಿನ ಅಕ್ಷಯ ಕಾಲೇಜಿನ ಹೋಟೆಲ್ ಮ್ಯಾನೇಜ್ಮೆಂಟ್ ವಿದ್ಯಾರ್ಥಿಯಾಗಿದ್ದು, ಇಂಟರ್ನ್ಷಿಪ್ಗಾಗಿ ಆಸ್ಟ್ರೇಲಿಯಾಕ್ಕೆ ಹೋಗಿ ಇತ್ತೀಚೆಗಷ್ಟೇ ಊರಿಗೆ ಮರಳಿದ್ದರು

ಯುವಕರಿಬ್ಬರು ಕೆಲಸದ ನಿಮಿತ್ತ ಆಲಂಕಾರಿಗೆ ತೆರಳಿ ಬೈಕಿನಲ್ಲಿ ಮನೆಗೆ ಹಿಂತಿರುಗುತ್ತಿದ್ದಾಗ ಚಾಪಳ್ಳ ತಿರುವಿನಲ್ಲಿ ಎದುರಿನಿಂದ ಬಂದ ನೀರಿನ ಟ್ಯಾಂಕರ್ ಡಿಕ್ಕಿಯಾಗಿದೆ. ಎದುರಿನಿಂದ ಬಂದ ಸ್ಕೂಟರ್ ಒಂದಕ್ಕೆ ಡಿಕ್ಕಿಯಾಗುವುದನ್ನು ತಪ್ಪಿಸಲು ಟ್ಯಾಂಕರ್ ಚಾಲಕ ವಾಹನವನ್ನು ಎಡಕ್ಕೆ ತಿರುಗಿಸಿದಾಗ ಬೈಕ್ ಟ್ಯಾಂಕರ್ನ ಚಕ್ರದಡಿಗೆ ಸಿಲುಕಿದೆ. ಬಳಿಕ ನಿಯಂತ್ರಣ ತಪ್ಪಿದ ಟ್ಯಾಂಕರ್ ರಸ್ತೆ ಪಕ್ಕದ ಕಂದಕಕ್ಕೆ ಉರುಳಿ ಬಿದ್ದಿದೆ.
ಇದೇ ವೇಳೆ ಹಿಂದಿನಿಂದ ಬರುತ್ತಿದ್ದ ಮತ್ತೊಂದು ಬೈಕ್ ಸವಾರರು ಅಪಘಾತ ಕಂಡು ಗಾಬರಿಯಿಂದ ಬ್ರೇಕ್ ಹಾಕಿದಾಗ ಬೈಕ್ ಸ್ಕಿಡ್ ಆಗಿ ಅವರಿಗೂ ಸಣ್ಣಪುಟ್ಟ ಗಾಯಗಳಾಗಿವೆ. ಘಟನಾ ಸ್ಥಳಕ್ಕೆ ಬೆಳ್ಳಾರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ
In a tragic road accident near Savanur, two bike riders lost their lives on the spot after a water tanker collided with their motorcycle at a highway curve in Chapalla on Tuesday evening. Two others sustained minor injuries in the incident.
05-05-26 03:52 pm
HK News Desk
ಶೃಂಗೇರಿ ಕ್ಷೇತ್ರದ ಮರು ಮತ ಎಣಿಕೆ ; ಶಾಸಕ ಡಿಎನ್ ಜೀ...
05-05-26 03:37 pm
ಚಿಕ್ಕಮಗಳೂರು ; ಕೆರೆಯಲ್ಲಿ ಬಾತುಕೋಳಿ ಹಿಡಿಯಲು ಹೋಗಿ...
04-05-26 10:33 pm
ಶೃಂಗೇರಿ ; ದಿಢೀರ್ ಮಾಜಿಯಾದ ಕಾಂಗ್ರೆಸ್ ಶಾಸಕ ರಾಜೇಗ...
04-05-26 07:16 pm
ಮಂಜೇಶ್ವರದಲ್ಲಿ ಮತ ಧ್ರುವೀಕರಣ ; 29,252 ಮತಗಳಿಂದ ಮ...
04-05-26 06:27 pm
05-05-26 10:30 pm
HK News Staffer
ಎಲ್ಲರ ಲೆಕ್ಕ ತಲೆಕೆಳಗಾಗಿಸಿದ ದಳಪತಿ ; ಕರುಣಾನಿಧಿ ಹ...
05-05-26 10:27 pm
ಚುನಾವಣೆಯಲ್ಲಿ ನಾನು ಸೋತಿಲ್ಲ, ಯಾವುದೇ ಕಾರಣಕ್ಕೂ ರಾ...
05-05-26 08:34 pm
ಒಂದು ಕಾಲದ ಆಪ್ತನಿಂದಲೇ ಸಿಎಂ ಸ್ಟಾಲಿನ್ ಹೀನಾಯ ಸೋಲು...
04-05-26 09:51 pm
ತಿರುವನಂತಪುರಂ ಜಿಲ್ಲೆಯಲ್ಲೇ ಕಮಲ ಕಮಾಲ್ ; ಮೂರು ಕ್ಷ...
04-05-26 07:04 pm
05-05-26 11:01 pm
HK News Desk
ಕೋರ್ಟ್ ಜಟಾಪಟಿ ಬಳಿಕ ಉಳ್ಳಾಲ ದರ್ಗಾ ಆಡಳಿತ ಸಮಿತಿಗೆ...
02-05-26 11:05 pm
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
05-05-26 11:23 pm
HK News Desk
Minister Zameer Ahmed Khan, House robbery: ಸಚ...
05-05-26 05:22 pm
ಕ್ಯಾನ್ಸರ್ಗೆ ಬಲಿಯಾದ ವಿಜಿಲೆನ್ಸ್ ಎಸ್ಪಿ ಬಿ.ಎನ್...
03-05-26 09:19 pm
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm