ಬ್ರೇಕಿಂಗ್ ನ್ಯೂಸ್
08-05-26 09:05 pm HK News Staffer ಕರಾವಳಿ
ಮಂಗಳೂರು, ಮೇ 08: ದಶಕಗಳ ಕನಸಾಗಿದ್ದ ಮಂಗಳೂರು-ತಣ್ಣೀರುಬಾವಿ ಸೇತುವೆ ಕಾಮಗಾರಿ ಇದೀಗ ಅಂತಿಮ ಹಂತ ತಲುಪಿದ್ದು, ಆಗಸ್ಟ್ ಅಥವಾ ಸೆಪ್ಟೆಂಬರ್ ತಿಂಗಳಲ್ಲಿ ಸಾರ್ವಜನಿಕ ಬಳಕೆಗೆ ಲೋಕಾರ್ಪಣೆ ಮಾಡುವ ಸಾಧ್ಯತೆ ಇದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಈ ಸೇತುವೆ ನಿರ್ಮಾಣದಿಂದ ತಣ್ಣೀರುಬಾವಿ ಭಾಗದ ಜನರ ಸಂಚಾರ ಸಮಸ್ಯೆಗೆ ದೊಡ್ಡ ಮಟ್ಟದ ಪರಿಹಾರ ಸಿಗಲಿದೆ.
ದಶಕಗಳ ಬೇಡಿಕೆಗೆ ಸಾಕಾರ;
ತಣ್ಣೀರುಬಾವಿ ಬೀಚ್ ಮಂಗಳೂರು ನಗರದ ಸಮೀಪದಲ್ಲೇ ಇದ್ದರೂ, ರಸ್ತೆ ಮಾರ್ಗದಲ್ಲಿ ತೆರಳಬೇಕಾದರೆ ಸುಮಾರು 15 ರಿಂದ 20 ಕಿಲೋಮೀಟರ್ ಸುತ್ತುವ ಪರಿಸ್ಥಿತಿ ಇತ್ತು. ಫೆರಿಯಲ್ಲಿ ಕೆಲವೇ ನಿಮಿಷಗಳಲ್ಲಿ ತಲುಪಬಹುದಾದ ಈ ಭಾಗಕ್ಕೆ ನೇರ ರಸ್ತೆ ಸಂಪರ್ಕದ ಕೊರತೆ ವರ್ಷಗಳಿಂದ ಜನರ ಸಮಸ್ಯೆಯಾಗಿತ್ತು.
ತಣ್ಣೀರುಬಾವಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸುಮಾರು 4 ಸಾವಿರಕ್ಕೂ ಹೆಚ್ಚು ಕುಟುಂಬಗಳು ವಾಸಿಸುತ್ತಿದ್ದು, ಮಂಗಳೂರಿಗೆ ಸಂಪರ್ಕ ಸಾಧಿಸಲು ಫೆರಿಯನ್ನೇ ಅವಲಂಬಿಸಬೇಕಾಗುತ್ತಿತ್ತು. ತುರ್ತು ವೈದ್ಯಕೀಯ ಸೇವೆ ಸೇರಿದಂತೆ ಹಲವು ಸಂದರ್ಭಗಳಲ್ಲಿ ಜನರು ತೀವ್ರ ತೊಂದರೆ ಅನುಭವಿಸುತ್ತಿದ್ದರು.
ಪ್ರಯಾಣದ ಸಮಯ 35 ನಿಮಿಷದಿಂದ 10 ನಿಮಿಷಕ್ಕೆ;
ಫಲ್ಗುಣಿ ನದಿಗೆ ಅಡ್ಡಲಾಗಿ ನಿರ್ಮಾಣವಾಗುತ್ತಿರುವ ಈ ಸೇತುವೆ ಒಟ್ಟು 285 ಮೀಟರ್ ಉದ್ದವಿದ್ದು, ಸುಮಾರು 64 ಕೋಟಿ ರೂಪಾಯಿ ವೆಚ್ಚದಲ್ಲಿ ಕಾಮಗಾರಿ ನಡೆಯುತ್ತಿದೆ. ಇದರಲ್ಲೂ 100 ಮೀಟರ್ ಉದ್ದದ ಬೋ-ಸ್ಟ್ರಿಂಗ್ ವಿನ್ಯಾಸದ ಸೇತುವೆ ಪ್ರಮುಖ ಆಕರ್ಷಣೆಯಾಗಿದೆ. ಸೇತುವೆ ಪೂರ್ಣಗೊಂಡ ಬಳಿಕ ಪ್ರಸ್ತುತ 30 ರಿಂದ 35 ನಿಮಿಷ ಬೇಕಾಗುವ ಪ್ರಯಾಣ ಕೇವಲ 8 ರಿಂದ 10 ನಿಮಿಷಕ್ಕೆ ಇಳಿಯಲಿದೆ.
ಎಲ್ಲಾ ವಾಹನಗಳಿಗೆ ಸಂಚಾರ ಸೌಲಭ್ಯ ;
ಈ ಸೇತುವೆ ಎಲ್ಲಾ ಮಾದರಿಯ ವಾಹನಗಳ ಸಂಚಾರಕ್ಕೆ ಅನುಕೂಲವಾಗುವಂತೆ ವಿನ್ಯಾಸಗೊಳಿಸಲಾಗಿದೆ. ಪ್ರವಾಸೋದ್ಯಮ, ವ್ಯಾಪಾರ ಮತ್ತು ಸ್ಥಳೀಯ ಸಂಚಾರಕ್ಕೆ ಇದು ಹೊಸ ಚೈತನ್ಯ ನೀಡಲಿದೆ ಎನ್ನಲಾಗುತ್ತಿದೆ.
ಮಳೆಗಾಲದ ನಡುವೆ ಕಾಮಗಾರಿ ಸವಾಲು;
ಸದ್ಯ ಕಾಮಗಾರಿ ವೇಗವಾಗಿ ಸಾಗುತ್ತಿದ್ದರೂ, ಮಳೆಗಾಲ ಆರಂಭವಾಗುತ್ತಿರುವ ಹಿನ್ನೆಲೆ ಉಳಿದ ಕೆಲಸಗಳು ಎಷ್ಟು ವೇಗವಾಗಿ ಪೂರ್ಣಗೊಳ್ಳುತ್ತವೆ ಎನ್ನುವ ಕುತೂಹಲ ಹೆಚ್ಚಾಗಿದೆ. ಸಚಿವ ದಿನೇಶ್ ಗುಂಡೂರಾವ್ ಈಗಾಗಲೇ ಲೋಕಾರ್ಪಣೆ ವೇಳಾಪಟ್ಟಿ ಘೋಷಿಸಿರುವುದರಿಂದ, ಗುತ್ತಿಗೆದಾರರು ಮತ್ತು ಅಧಿಕಾರಿಗಳು ಗಡುವಿನೊಳಗೆ ಕಾಮಗಾರಿ ಪೂರ್ಣಗೊಳಿಸಬೇಕಾದ ಒತ್ತಡದಲ್ಲಿದ್ದಾರೆ.
06-08-26 03:49 pm
HK News Staffer
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅಸಮರ್ಥ, ಛಲವಾದಿ...
04-08-26 09:12 pm
ಸಿದ್ದರಾಮಯ್ಯ ಆಪ್ತ ಎಂಬ ಕಾರಣಕ್ಕೆ ನನಗೆ ಅನ್ಯಾಯ ಆಗಿ...
04-08-26 09:10 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
06-08-26 11:03 pm
Mangaluru Staffer
ಅಯೋಧ್ಯೆ ಕಾಣಿಕೆ ಹಣ ಕಳವು ತೀವ್ರ ಆಘಾತಕಾರಿ, ಯಾವುದೇ...
06-08-26 10:22 pm
ಹಿಂದೂ ದೇವಸ್ಥಾನಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ...
06-08-26 09:33 pm
ಹೆದ್ದಾರಿ ಬದಿ ವ್ಯಾಪಾರಿಗಳ ವಿರುದ್ಧ ಕಾರ್ಯಾಚರಣೆಗಿಳ...
06-08-26 08:09 pm
ಸುರತ್ಕಲ್ ಎನ್ಐಟಿಕೆ ಕಾಲೇಜು ಹಾಸ್ಟೆಲ್ನಲ್ಲಿ ಸ್ವಯ...
05-08-26 08:08 pm
07-08-26 12:35 pm
HK News Staffer
ಲವ್ - ಸೆಕ್ಸ್..ದೋಖಾ ; ಬಳ್ಳಾರಿಯಲ್ಲಿ ಬೆಚ್ಚಿಬೀಳಿಸ...
06-08-26 09:31 pm
ಲವ್ - ಸೆಕ್ಸ್ ದೋಖಾ ; ಬಳ್ಳಾರಿಯಲ್ಲಿ ಬೆಚ್ಚಿಬೀಳಿಸಿ...
06-08-26 09:31 pm
ಬೆಂಗಳೂರು ; ಒಂದು ತಿಂಗಳ ಹಿಂದೆ ನೇಪಾಳದಿಂದ ಕೆಲಸಕ್ಕ...
06-08-26 06:13 pm
7 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ...
06-08-26 11:48 am