ಬ್ರೇಕಿಂಗ್ ನ್ಯೂಸ್
09-05-26 02:13 pm HK News Staffer ಕರಾವಳಿ
ಉಡುಪಿ, ಮೇ 9: ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಮನೆ ಕಳ್ಳತನ ಪ್ರಕರಣಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಉಡುಪಿ ಪೊಲೀಸರು “ಲಾಕ್ ಹೌಸ್ ಬೀಟ್ ಸಿಸ್ಟಮ್” ಎಂಬ ಹೊಸ ಭದ್ರತಾ ಯೋಜನೆಯನ್ನು ಜಾರಿಗೆ ತಂದಿದ್ದಾರೆ. ಮನೆಮಾಲೀಕರು ಪ್ರವಾಸ, ಉದ್ಯೋಗ ಅಥವಾ ಇತರ ಕಾರಣಗಳಿಂದ ಕೆಲವು ದಿನ ಮನೆ ಖಾಲಿ ಇಡುವ ಸಂದರ್ಭಗಳಲ್ಲಿ ಪೊಲೀಸರಿಗೆ ಮುಂಚಿತವಾಗಿ ಮಾಹಿತಿ ನೀಡುವ ಮೂಲಕ ಈ ಸೇವೆಯ ಪ್ರಯೋಜನ ಪಡೆಯಬಹುದಾಗಿದೆ.
ಖಾಲಿ ಮನೆಗಳ ಮೇಲೆ ಪೊಲೀಸರ ವಿಶೇಷ ನಿಗಾ
ಈ ಯೋಜನೆಯಡಿ ಮನೆಮಾಲೀಕರು ತಮ್ಮ ಮನೆಯ ವಿಳಾಸ, ಸಂಪರ್ಕ ಸಂಖ್ಯೆ, ಹೊರಡುವ ಹಾಗೂ ಮರಳುವ ದಿನಾಂಕದ ಮಾಹಿತಿ ಸ್ಥಳೀಯ ಪೊಲೀಸ್ ಠಾಣೆಗೆ ನೀಡಬೇಕು. ಮಾಹಿತಿ ಪಡೆದ ಬಳಿಕ ಪೊಲೀಸ್ ಸಿಬ್ಬಂದಿ ಆ ಮನೆಗಳ ಮೇಲೆ ವಿಶೇಷ ನಿಗಾ ವಹಿಸಿ, ವಿಶೇಷವಾಗಿ ರಾತ್ರಿ ವೇಳೆ ನಿಯಮಿತ ಪೆಟ್ರೋಲಿಂಗ್ ನಡೆಸಲಿದ್ದಾರೆ.

ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ಮಾತನಾಡಿ, “ಜನರ ಮನೆಗಳ ಸುರಕ್ಷತೆ ನಮ್ಮ ಮೊದಲ ಆದ್ಯತೆ. ಸಾರ್ವಜನಿಕರು ಪೊಲೀಸರೊಂದಿಗೆ ಸಹಕರಿಸಿದರೆ ಮನೆ ಕಳ್ಳತನ ಪ್ರಕರಣಗಳನ್ನು ಬಹಳ ಮಟ್ಟಿಗೆ ತಡೆಯಬಹುದು” ಎಂದು ತಿಳಿಸಿದ್ದಾರೆ.
ಮೂರು ವರ್ಷಗಳಲ್ಲಿ ಕಳ್ಳತನ ಪ್ರಕರಣ ಏರಿಕೆ
ಪೊಲೀಸರ ಮಾಹಿತಿ ಪ್ರಕಾರ, ಕಳೆದ ಮೂರು ವರ್ಷಗಳಲ್ಲಿ ಜಿಲ್ಲೆಯಲ್ಲಿ ಮನೆ ಕಳ್ಳತನ ಪ್ರಕರಣಗಳು ಹೆಚ್ಚಳವಾಗಿರುವ ಹಿನ್ನೆಲೆ ಈ ಹೊಸ ವ್ಯವಸ್ಥೆ ಜಾರಿಗೆ ತರಲಾಗಿದೆ. ಖಾಲಿ ಮನೆಗಳನ್ನು ಗುರಿಯಾಗಿಸಿಕೊಂಡು ನಡೆಯುವ ಕಳ್ಳತನ ತಡೆಯಲು ಈ ಯೋಜನೆ ಸಹಕಾರಿ ಆಗಲಿದೆ ಎಂಬ ವಿಶ್ವಾಸವನ್ನು ಇಲಾಖೆ ವ್ಯಕ್ತಪಡಿಸಿದೆ.
ಸೇವೆ ಪಡೆಯಲು ಏನು ಮಾಡಬೇಕು?
• ಮನೆ ಕೆಲವು ದಿನ ಖಾಲಿ ಇಡುವ ಮೊದಲು ಸಮೀಪದ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು.
• ಮನೆಯ ಪೂರ್ಣ ವಿಳಾಸ, ಮೊಬೈಲ್ ಸಂಖ್ಯೆ ಹಾಗೂ ಪರ್ಯಾಯ ಸಂಪರ್ಕ ಸಂಖ್ಯೆಯನ್ನು ಸಲ್ಲಿಸಬೇಕು.
• ಹೊರಡುವ ದಿನಾಂಕ ಮತ್ತು ಮರಳುವ ದಿನಾಂಕವನ್ನು ತಿಳಿಸಬೇಕು.
• ಅಗತ್ಯವಿದ್ದರೆ ಆಧಾರ್ ಮಾಹಿತಿ ಹಾಗೂ ಇಮೇಲ್ ವಿಳಾಸ ನೀಡಬೇಕು.
• ಪೊಲೀಸ್ ವೆಬ್ಸೈಟ್ ಅಥವಾ ಮೊಬೈಲ್ ಆಪ್ ಮೂಲಕವೂ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಮಾಹಿತಿ ನೀಡಿದ ಬಳಿಕ ಪೊಲೀಸರು ಮನೆ ಸುತ್ತಮುತ್ತ ನಿಯಮಿತ ಪೆಟ್ರೋಲಿಂಗ್ ನಡೆಸಿ ಭದ್ರತೆ ಪರಿಶೀಲಿಸಲಿದ್ದಾರೆ.
ಸಂಪರ್ಕಕ್ಕೆ
📞 ಪೊಲೀಸ್ ಸಹಾಯವಾಣಿ : 9480805400
📞 ಉಡುಪಿ ಎಸ್ಪಿ ಕಚೇರಿ : 0820-2526709
08-05-26 08:05 pm
HK News Staffer
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
ಗದಗದತ್ತ ಹೊರಟಿದ್ದ ಪಲ್ಲಕ್ಕಿ ಬಸ್ಸಿಗೆ ಬೆಂಕಿ ; ನಡು...
05-05-26 03:52 pm
09-05-26 12:06 pm
HK News Staffer
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
09-05-26 02:15 pm
HK News Staffer
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
ಚೆನ್ನಾಗಿದ್ದ ಕಾಂಕ್ರೀಟ್ ರಸ್ತೆಗೆ ಡಾಂಬರ್ ಶಾಕ್ ! ಕ...
07-05-26 07:40 pm
09-05-26 09:54 am
HK News Staffer
ಕಡಬದ ಮನೆಯೊಂದರಲ್ಲಿ ಬೆಂಗಳೂರಿನ 23 ಜನ ಪ್ರವಾಸಿಗರು...
08-05-26 07:02 pm
ಬಸ್ ಚಲಿಸುತ್ತಿರುವಾಗಲೇ ಡ್ರೈವರ್ ಗೆ ಹೃದಯಾಘಾತ; ಪ್...
08-05-26 06:20 pm
ಪೋಕ್ಸೋ ಕೇಸ್ ಭಯಕ್ಕೆ ಠಾಣೆಯಲ್ಲೇ ಕೀ ನುಂಗಿದ ಆರೋಪಿ...
08-05-26 06:12 pm
ಬೆಂಗಳೂರಿನ ಆಸ್ಪತ್ರೆಯ ಒಳಗೇ ಆಭರಣ ದರೋಡೆ ! ರೋಗಿಯ 9...
07-05-26 08:00 pm