ಬ್ರೇಕಿಂಗ್ ನ್ಯೂಸ್
05-01-21 04:15 pm Mangalore Correspondent ಕರಾವಳಿ
ಮಂಗಳೂರು, ಜ.5: ನಗರ ಹೊರವಲಯದ ಕೊಣಾಜೆ ಠಾಣೆ ವ್ಯಾಪ್ತಿಯ ಮಂಜನಾಡಿ ಬಳಿಯ ಆರಂಗಡಿ ಎಂಬಲ್ಲಿ ಕಾಗೆಗಳು ಗುಂಪಾಗಿ ಸತ್ತು ಬಿದ್ದಿರುವ ಘಟನೆ ಬೆಳಕಿಗೆ ಬಂದಿದೆ.
ಗುಡ್ಡ ಪ್ರದೇಶದಲ್ಲಿ ಹಲವಾರು ಕಾಗೆಗಳು ಸತ್ತು ಬಿದ್ದಿರುವುದನ್ನು ಸ್ಥಳೀಯರು ಕಂಡಿದ್ದಾರೆ. ಒಂದೇ ಕಡೆ ಆರು ಕಾಗೆಗಳು ಸತ್ತು ಬಿದ್ದಿವೆ. ಇದರಿಂದ ಸ್ಥಳೀಯರು ಆತಂಕಗೊಂಡಿದ್ದಾರೆ.
ಘಟನಾ ಸ್ಥಳಕ್ಕೆ ಗ್ರಾಮಕರಣಿಕ ಪ್ರಸಾದ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಂಜಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿ, ಮೇಲಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.
ಮಧ್ಯಪ್ರದೇಶದಲ್ಲಿ ಇಂಥದ್ದೇ ಆಗಿತ್ತು...!
ಮಧ್ಯಪ್ರದೇಶದ ಹಲವು ಜಿಲ್ಲೆಗಳಲ್ಲಿ ನೂರಾರು ಕಾಗೆಗಳು ಗುಂಪು ಗುಂಪಾಗಿ ಸತ್ತು ಬಿದ್ದಿರುವುದನ್ನು ಪತ್ತೆ ಮಾಡಲಾಗಿತ್ತು. ಕಳೆದ ಒಂದು ವಾರದಿಂದ ಭೋಪಾಲ್, ಇಂಧೋರ್, ಮಂಡ್ಸೌರ್ ಜಿಲ್ಲೆಯ ಹಲವೆಡೆ ಇಂಥ ವಿದ್ಯಮಾನಗಳು ಕಂಡುಬಂದಿದ್ದವು. ಈ ಬಗ್ಗೆ ಇನ್ನೂ ಪರೀಕ್ಷೆ , ಪ್ರಯೋಗ ನಡೆಯುತ್ತಿದೆ. ಮೇಲ್ನೋಟಕ್ಕೆ ಹಕ್ಕಿ ಜ್ವರ ಎನ್ನಲಾಗಿತ್ತು. ಆದರೆ, ಯಾವ ರೀತಿಯ ಜ್ವರ ಎಂದು ತಜ್ಞರು ದೃಢಪಡಿಸಿಲ್ಲ.
ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ಕಾಗೆಗಳು ಸತ್ತಿರುವ ವಿದ್ಯಮಾನ ಕಂಡುಬಂದಿದ್ದು ಎಚ್ಚರಿಕೆ ಸಂದೇಶ ರವಾನಿಸಿದೆ. ಕಾಗೆ ಸತ್ತಿರುವ ಪ್ರಕರಣ ಹಿನ್ನೆಲೆ ಮಧ್ಯಪ್ರದೇಶ ಸರಕಾರ ಎಲರ್ಟ್ ಘೋಷಣೆ ಮಾಡಿದೆ.
ಸಾಮಾನ್ಯ ಹಕ್ಕಿಜ್ವರದಲ್ಲಿ ಕಾಗೆಗಳು ಸತ್ತು ಬೀಳುವುದು ಕಡಿಮೆ. ಈ ಹಿಂದೆ ಕೇರಳದಲ್ಲಿ ಹಕ್ಕಿಜ್ವರ ಕಂಡುಬಂದ ವೇಳೆ ಸಾವಿರಾರು ಕೋಳಿಗಳನ್ನು ಕೊಲ್ಲಲಾಗಿತ್ತು. ಆದರೆ, ಈಗ ದಿಢೀರ್ ಆಗಿ ಕಾಗೆಗಳು ಸತ್ತಿರುವ ಪ್ರಕರಣ ಕರಾವಳಿಯಲ್ಲಿ ಕಂಡುಬಂದಿದ್ದು ಆಘಾತ ಮೂಡಿಸಿದೆ. ಇತರೇ ಹಕ್ಕಿಗಳಿಗಿಂತ ವಿಭಿನ್ನ ಜಾತಿಯ ಕಾಗೆಗಳು ಎಲ್ಲವನ್ನೂ ತಿನ್ನುತ್ತವೆ. ಕೊಳೆತು ಬಿದ್ದ ವಸ್ತುಗಳನ್ನು ತಿಂದು ಪರಿಸರ ಸ್ಚಚ್ಚಗೊಳಿಸುವ ಕಾಗೆಗಳಿಗೇ ಹೊಸ ರೋಗ ತಗಲಿದ್ಯಾ ಎನ್ನುವ ಆತಂಕ, ಕುತೂಹಲ ಉಂಟಾಗಿದೆ.
Bird Flu Suspected in Mangalore as Group of Crows die in Manjanady. A bird flu alert has been sounded in Rajasthan after the presence of the dreaded virus was confirmed in dead crows in Jhalawar and more avian deaths were reported in other districts, including Jaipur.
08-06-25 06:03 pm
Bangalore Correspondent
Bhaskar Rao, Cm Siddaramaiah, DK Shivakumar:...
07-06-25 08:04 pm
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
08-06-25 10:51 pm
Mangalore Correspondent
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
08-06-25 10:29 pm
HK News Desk
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm