ಬ್ರೇಕಿಂಗ್ ನ್ಯೂಸ್
13-05-26 11:02 pm HK News Desk ಕರಾವಳಿ
ಮಂಗಳೂರು, ಮೇ 13: ಬೀಗ ಹಾಕಿರುವ ಮನೆಗಳಲ್ಲಿ ಸಂಭಾವ್ಯ ಕಳ್ಳತನವನ್ನು ತಡೆಯುವ ನಿಟ್ಟಿನಲ್ಲಿ ಅಂತಹ ಮನೆಗಳ ಮೇಲೆ ನಿಯಮಿತ ಪೊಲೀಸ್ ನಿಗಾವಹಿಸಲು ರಾಜ್ಯದ ವಿವಿಧೆಡೆ ಜಾರಿಗೆ ಬಂದಿರುವ "ಲಾಕ್ಡ್ ಹೌಸ್ ಬೀಟ್ ಸಿಸ್ಟಮ್' (ಎಲ್ಎಚ್ಬಿಎಸ್) ಅನ್ನು ಉಡುಪಿ ನಂತರ ಇದೀಗ ಮಂಗಳೂರು ಕಮಿನಷರೆಟ್ ವ್ಯಾಪ್ತಿಯಲ್ಲೂ ಅನುಷ್ಠಾನ ಮಾಡಲಾಗಿದೆ.
ಸಮುದಾಯ ಪೊಲೀಸ್ ಉಪಕ್ರಮದ ಭಾಗವಾಗಿರುವ "ಲಾಕ್ಸ್ ಹೌಸ್ ಬೀಟ್ ಸಿಸ್ಟಮ್' ಯೋಜನೆ ಮನೆಯನ್ನು ಕಳ್ಳತನದಿಂದ ರಕ್ಷಿಸಲು ಸಹಾಯ ಮಾಡಲಿದೆ. ಬೀಗ ಹಾಕಿರುವ ಮನೆಗಳ ಮೇಲೆ ನಿಯಮಿತ ನಿಗಾ ವಹಿಸುವ ಮೂಲಕ ಮನೆಯ ಮಾಲಕರು ವಾಪಾಸು ಬರುವವ ವರೆಗೆ ಸಂಪೂರ್ಣ ಸುರಕ್ಷತೆ ಮತ್ತು ಭದ್ರತೆಯನ್ನು ಒದಗಿಸಲಾಗಿತ್ತದೆ.
ಮನೆ ಮಾಲಕರು ಪ್ರವಾಸ, ಇತರ ಕಾರ್ಯಕ್ರಮಗಳಿಗಾಗಿ ಮನೆಗೆ ಬೀಗ ಹಾಕಿ ತಾತ್ಕಾಲಿಕವಾಗಿ ಹೊರಗೆ ಹೋಗುವ ಸಂದರ್ಭದಲ್ಲಿ ಪೊಲೀಸರಿಗೆ ಮಾಹಿತಿ ನೀಡುವುದರಿಂದ ಅಂತಹ ಮನೆಗಳ ಮೇಲೆ ಹೆಚ್ಚಿನ ನಿಗಾ ವಹಿಸಲು ಸಾಧ್ಯವಾಗಲಿದೆ. ಈ ಯೋಜನೆ ವೈಯಕ್ತಿಕ ಮನೆಗಳಿಗೆ ಮಾತ್ರ ಅನ್ವಯಿಸುತ್ತದೆ. ಅಪಾರ್ಟ್ ಮೆಂಟ್ ಅಥವಾ ವಾಣಿಜ್ಯ ಕಟ್ಟಡಗಳಿಗೆ ಅನ್ವಯಿಸುವುದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಮಾಹಿತಿ ನೀಡಿದವರ ಮನೆಯ ಪರಿಸರದಲ್ಲಿ ಪೊಲೀಸ್ ಬೀಟ್ ಹೆಚ್ಚಿಸಲಾಗುತ್ತದೆ. ರಾತ್ರಿಯ ಹೊತ್ತು ಪೊಲೀಸರು ಈ ಭಾಗದಲ್ಲಿ ಹೆಚ್ಚು ಓಡಾಟ ನಡೆಸುತ್ತಾರೆ. ಮನೆಯ ಸುತ್ತಮುತ್ತ ಅನುಮಾನಾಸ್ಪದ ವ್ಯಕ್ತಿಗಳು ಓಡಾಡುತ್ತಿದ್ದರೆ ಗಮನಹರಿಸಲಿದ್ದಾರೆ.
ಯೋಜನೆಯ ಉದ್ದೇಶಗಳು;
ಬೀಗ ಹಾಕಿರುವ ಮನೆಗಳಲ್ಲಿ ಕಳ್ಳತನ ತಡೆಗಟ್ಟುವುದು.
ರಾತ್ರಿ ಗಸ್ತನ್ನು ಹೆಚ್ಚು ಪರಿಣಾಮಕಾರಿ ಆಗಿಸುವುದು.
ಅಪರಾಧ ತಡೆಯಲ್ಲಿ ಸಾರ್ವಜನಿಕರ ಸಹಭಾಗಿತ್ವ ಹೆಚ್ಚಳ
ಸಾರ್ವಜನಿಕರು ಏನು ಮಾಡಬೇಕು ?
ಸಾರ್ವಜನಿಕರು ಮನೆಯನ್ನು ಕೆಲ ದಿನಗಳ ಮಟ್ಟಿಗೆ ಖಾಲಿ ಬಿಟ್ಟು ಹೋಗಲು ನಿರ್ಧರಿಸಿದ್ದರೆ ಅಂತಹ ಸಂದರ್ಭದಲ್ಲಿ ಪೊಲೀಸ್ ಕಂಟ್ರೋಲ್ ರೂಂ.ನ ವಾಟ್ಸ್ ಆ್ಯಪ್ ಸಂಖ್ಯೆಗೆ ಮಾಹಿತಿ ನೀಡಬಹುದು. ವಾಟ್ಸ್ ಆ್ಯಪ್ ನಲ್ಲಿ ಮನೆ ಮಾಲಕರ ಹೆಸರು, ಪೂರ್ಣ ವಿಳಾಸ, ಗೂಗಲ್ ಲೊಕೇಶನ್, ಮನೆಯಲ್ಲಿ ಇಲ್ಲದಿರುವ ದಿನಾಂಕ ಹಾಗೂ ಮನೆಯೊಂದಿಗೆ ಒಂದು ಸೆಲ್ಪಿಯನ್ನು ಕಳುಹಿಸಬೇಕು. ವಾಟ್ಸ್ ಆ್ಯಪ್ ಕಳುಹಿಸಬೇಕಾದ ಸಂಖ್ಯೆ 9480802321.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm