ಬ್ರೇಕಿಂಗ್ ನ್ಯೂಸ್
13-05-26 11:02 pm HK News Desk ಕರಾವಳಿ
ಮಂಗಳೂರು, ಮೇ 13: ಬೀಗ ಹಾಕಿರುವ ಮನೆಗಳಲ್ಲಿ ಸಂಭಾವ್ಯ ಕಳ್ಳತನವನ್ನು ತಡೆಯುವ ನಿಟ್ಟಿನಲ್ಲಿ ಅಂತಹ ಮನೆಗಳ ಮೇಲೆ ನಿಯಮಿತ ಪೊಲೀಸ್ ನಿಗಾವಹಿಸಲು ರಾಜ್ಯದ ವಿವಿಧೆಡೆ ಜಾರಿಗೆ ಬಂದಿರುವ "ಲಾಕ್ಡ್ ಹೌಸ್ ಬೀಟ್ ಸಿಸ್ಟಮ್' (ಎಲ್ಎಚ್ಬಿಎಸ್) ಅನ್ನು ಉಡುಪಿ ನಂತರ ಇದೀಗ ಮಂಗಳೂರು ಕಮಿನಷರೆಟ್ ವ್ಯಾಪ್ತಿಯಲ್ಲೂ ಅನುಷ್ಠಾನ ಮಾಡಲಾಗಿದೆ.
ಸಮುದಾಯ ಪೊಲೀಸ್ ಉಪಕ್ರಮದ ಭಾಗವಾಗಿರುವ "ಲಾಕ್ಸ್ ಹೌಸ್ ಬೀಟ್ ಸಿಸ್ಟಮ್' ಯೋಜನೆ ಮನೆಯನ್ನು ಕಳ್ಳತನದಿಂದ ರಕ್ಷಿಸಲು ಸಹಾಯ ಮಾಡಲಿದೆ. ಬೀಗ ಹಾಕಿರುವ ಮನೆಗಳ ಮೇಲೆ ನಿಯಮಿತ ನಿಗಾ ವಹಿಸುವ ಮೂಲಕ ಮನೆಯ ಮಾಲಕರು ವಾಪಾಸು ಬರುವವ ವರೆಗೆ ಸಂಪೂರ್ಣ ಸುರಕ್ಷತೆ ಮತ್ತು ಭದ್ರತೆಯನ್ನು ಒದಗಿಸಲಾಗಿತ್ತದೆ.
ಮನೆ ಮಾಲಕರು ಪ್ರವಾಸ, ಇತರ ಕಾರ್ಯಕ್ರಮಗಳಿಗಾಗಿ ಮನೆಗೆ ಬೀಗ ಹಾಕಿ ತಾತ್ಕಾಲಿಕವಾಗಿ ಹೊರಗೆ ಹೋಗುವ ಸಂದರ್ಭದಲ್ಲಿ ಪೊಲೀಸರಿಗೆ ಮಾಹಿತಿ ನೀಡುವುದರಿಂದ ಅಂತಹ ಮನೆಗಳ ಮೇಲೆ ಹೆಚ್ಚಿನ ನಿಗಾ ವಹಿಸಲು ಸಾಧ್ಯವಾಗಲಿದೆ. ಈ ಯೋಜನೆ ವೈಯಕ್ತಿಕ ಮನೆಗಳಿಗೆ ಮಾತ್ರ ಅನ್ವಯಿಸುತ್ತದೆ. ಅಪಾರ್ಟ್ ಮೆಂಟ್ ಅಥವಾ ವಾಣಿಜ್ಯ ಕಟ್ಟಡಗಳಿಗೆ ಅನ್ವಯಿಸುವುದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಮಾಹಿತಿ ನೀಡಿದವರ ಮನೆಯ ಪರಿಸರದಲ್ಲಿ ಪೊಲೀಸ್ ಬೀಟ್ ಹೆಚ್ಚಿಸಲಾಗುತ್ತದೆ. ರಾತ್ರಿಯ ಹೊತ್ತು ಪೊಲೀಸರು ಈ ಭಾಗದಲ್ಲಿ ಹೆಚ್ಚು ಓಡಾಟ ನಡೆಸುತ್ತಾರೆ. ಮನೆಯ ಸುತ್ತಮುತ್ತ ಅನುಮಾನಾಸ್ಪದ ವ್ಯಕ್ತಿಗಳು ಓಡಾಡುತ್ತಿದ್ದರೆ ಗಮನಹರಿಸಲಿದ್ದಾರೆ.
ಯೋಜನೆಯ ಉದ್ದೇಶಗಳು;
ಬೀಗ ಹಾಕಿರುವ ಮನೆಗಳಲ್ಲಿ ಕಳ್ಳತನ ತಡೆಗಟ್ಟುವುದು.
ರಾತ್ರಿ ಗಸ್ತನ್ನು ಹೆಚ್ಚು ಪರಿಣಾಮಕಾರಿ ಆಗಿಸುವುದು.
ಅಪರಾಧ ತಡೆಯಲ್ಲಿ ಸಾರ್ವಜನಿಕರ ಸಹಭಾಗಿತ್ವ ಹೆಚ್ಚಳ
ಸಾರ್ವಜನಿಕರು ಏನು ಮಾಡಬೇಕು ?
ಸಾರ್ವಜನಿಕರು ಮನೆಯನ್ನು ಕೆಲ ದಿನಗಳ ಮಟ್ಟಿಗೆ ಖಾಲಿ ಬಿಟ್ಟು ಹೋಗಲು ನಿರ್ಧರಿಸಿದ್ದರೆ ಅಂತಹ ಸಂದರ್ಭದಲ್ಲಿ ಪೊಲೀಸ್ ಕಂಟ್ರೋಲ್ ರೂಂ.ನ ವಾಟ್ಸ್ ಆ್ಯಪ್ ಸಂಖ್ಯೆಗೆ ಮಾಹಿತಿ ನೀಡಬಹುದು. ವಾಟ್ಸ್ ಆ್ಯಪ್ ನಲ್ಲಿ ಮನೆ ಮಾಲಕರ ಹೆಸರು, ಪೂರ್ಣ ವಿಳಾಸ, ಗೂಗಲ್ ಲೊಕೇಶನ್, ಮನೆಯಲ್ಲಿ ಇಲ್ಲದಿರುವ ದಿನಾಂಕ ಹಾಗೂ ಮನೆಯೊಂದಿಗೆ ಒಂದು ಸೆಲ್ಪಿಯನ್ನು ಕಳುಹಿಸಬೇಕು. ವಾಟ್ಸ್ ಆ್ಯಪ್ ಕಳುಹಿಸಬೇಕಾದ ಸಂಖ್ಯೆ 9480802321.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
14-05-26 12:36 pm
HK News Staffer
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
14-05-26 10:49 am
HK News Staffer
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm