ಬ್ರೇಕಿಂಗ್ ನ್ಯೂಸ್
14-05-26 05:39 pm HK News Staffer ಕರಾವಳಿ
ಮಂಗಳೂರು, ಮೇ 14: ಮಂಗಳೂರಿನ ರಿಯಲ್ ಎಸ್ಟೇಟ್ ಉದ್ಯಮಿ ಹಾಗೂ ‘ಲ್ಯಾನ್ಸಿ ಕನ್ಸ್ಟ್ರಕ್ಷನ್ಸ್’ ಸಂಸ್ಥೆಯ ಸ್ಥಾಪಕ ಲ್ಯಾನ್ಸಿ ಜೋಸೆಫ್ ಮಸ್ಕರೇನಸ್ (77) ಅಲ್ಪಕಾಲದ ಅಸೌಖ್ಯದ ಬಳಿಕ ಬುಧವಾರ ನಿಧನರಾದರು. ಮೃತರು ಪತ್ನಿ , ಮೂವರು ಪುತ್ರಿಯರನ್ನು ಅಗಲಿದ್ದಾರೆ.
1973ರಲ್ಲಿ ಪರವಾನಗಿ ಪಡೆದ ಪ್ಲಂಬರ್ ಆಗಿ ವೃತ್ತಿಜೀವನ ಆರಂಭಿಸಿದ ಅವರು, ಹಂತ ಹಂತವಾಗಿ ಸಿವಿಲ್ ಕಾಂಟ್ರಾಕ್ಟರ್ ಆಗಿ ಬೆಳೆದಿದ್ದರು. 1982 ರಲ್ಲಿ ಹಂಪನಕಟ್ಟೆಯ ‘ಧನ್ಯವಾದ್’ , 1984 ರಲ್ಲಿ ‘ಪಾಂಪೆ ಶೇಡ್ ಅಪಾರ್ಟ್ಮೆಂಟ್’ ನಿರ್ಮಿಸಿದ್ದರು. ಮುಂದೆ ಎಲ್ಜೆನ್ ಪ್ರಮೋಟರ್ಸ್, ನಿಶಾಲ್ ಅಸೋಸಿಯೇಟ್ಸ್ ಸೇರಿದಂತೆ ಹಲವು ಸಂಸ್ಥೆಗಳ ಮೂಲಕ ಸಾವಿರಾರು ಜನರಿಗೆ ಉದ್ಯೋಗ ನೀಡುವ ಬೃಹತ್ ಉದ್ಯಮ ಸಾಮ್ರಾಜ್ಯವನ್ನು ಕಟ್ಟಿದರು.
ಜಿಲ್ಲೆಯಲ್ಲಿ ಎಲ್ಲ ಸಮುದಾಯದವರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು. ಬಜ್ಪೆ ಚರ್ಚ್, ಬಿಕರ್ನಕಟ್ಟೆಯ ಇನ್ಫೆಂಟ್ ಜೀಸಸ್ ಚರ್ಚ್ ಸೇರಿದಂತೆ 25ಕ್ಕೂ ಹೆಚ್ಚು ಚರ್ಚ್ಗಳು, 4 ಮಸೀದಿಗಳು ಮತ್ತು 3 ದೇವಾಲಯ ಕಟ್ಟಡಗಳನ್ನು ನಿರ್ಮಿಸಿದ್ದಾರೆ. ಆರೆಸ್ಸೆಸ್ ಸಂಘ ನಿಕೇತನದ ಬಹುಮಹಡಿ ಸಭಾಂಗಣ ಸಂಕೀರ್ಣವನ್ನು ಇವರೇ ನಿರ್ಮಿಸಿದ್ದರು.
ಸೈಂಟ್ ಅಲೋಶಿಯಸ್ ಕಾಲೇಜಿನ ಆಡಳಿತ ಮಂಡಳಿ ಬ್ಲಾಕ್, ಸೈಂಟ್ ಜೋಸೆಫ್ ಇಂಜಿನಿಯರಿಂಗ್ ಕಾಲೇಜು ಮತ್ತು ಯುನಿಟಿ ಹೆಲ್ತ್ ಕಾಂಪ್ಲೆಕ್ಸ್ನ ನರ್ಸಿಂಗ್ ಸ್ಕೂಲ್ ಇವರ ಸಂಸ್ಥೆಯ ಮೂಲಕ ನಿರ್ಮಾಣಗೊಂಡಿದೆ. ಇವರ ಉದ್ಯಮಶೀಲತೆ ಮತ್ತು ವೃತ್ತಿಪರತೆಯನ್ನು ಗುರುತಿಸಿ 2006 ರಲ್ಲಿ ‘ರಚನಾ ವರ್ಷದ ಉದ್ಯಮಿ’ ಪ್ರಶಸ್ತಿ, 2012 ರಲ್ಲಿ ‘ಎಫ್ಕೆಸಿಎ ವೃತ್ತಿಪರ ಶ್ರೇಷ್ಠತಾ ಪ್ರಶಸ್ತಿ’ ನೀಡಿ ಗೌರವಿಸಲಾಗಿತ್ತು.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm