ಬ್ರೇಕಿಂಗ್ ನ್ಯೂಸ್
16-05-26 01:13 pm HK News Staffer ಕರಾವಳಿ
ಮಂಗಳೂರು, ಮೇ 16: ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿನ ಕೈದಿಗಳಿಗೆ ಹಾಗೂ ಅವರ ಕುಟುಂಬಗಳಿಗೆ ಉಚಿತ ಕಾನೂನು ನೆರವು ಒದಗಿಸುವ ಉದ್ದೇಶದಿಂದ ‘ಕಾನೂನು ನೆರವು ಸಹಾಯ ಕೇಂದ್ರ’ ಆರಂಭಿಸಲಾಗಿದೆ.
‘ಲೀಗಲ್ ಏಡ್ ಹೆಲ್ಪ್ ಡೆಸ್ಕ್’ ಕೇಂದ್ರವನ್ನು ಉದ್ಘಾಟಿಸಿದ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಬಸವರಾಜ್ ಮಾತನಾಡಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಈಗಾಗಲೇ ಉಚಿತ ಕಾನೂನು ನೆರವು ನೀಡುತ್ತಿದ್ದರೂ, ಕಾರಾಗೃಹದ ಆವರಣದಲ್ಲೇ ಈ ವ್ಯವಸ್ಥೆ ಆರಂಭಿಸಿರುವುದರಿಂದ ಕೈದಿಗಳಿಗೆ ಹಾಗೂ ಅವರ ಕುಟುಂಬಗಳಿಗೆ ಕಾನೂನು ಮಾರ್ಗದರ್ಶನ ಇನ್ನಷ್ಟು ಸುಲಭವಾಗಲಿದೆ ಎಂದು ಹೇಳಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಝೈಬುನ್ನಿಸಾ ಮಾತನಾಡಿ, ಕಾನೂನು ತಾಂತ್ರಿಕತೆಗಳ ಕಾರಣದಿಂದಾಗಿ ಹಲವಾರು ಬಾರಿ ಕುಟುಂಬ ಸದಸ್ಯರು ಕೈದಿಗಳನ್ನು ಭೇಟಿಯಾಗಲು ಹಾಗೂ ಜಾಮೀನು ಪ್ರಕ್ರಿಯೆಗಳನ್ನು ಮುಂದುವರಿಸಲು ಕಷ್ಟ ಅನುಭವಿಸುತ್ತಾರೆ. ಇಂತಹ ಸಮಸ್ಯೆಗಳನ್ನು ಪರಿಹರಿಸಲು ಈ ಸಹಾಯ ಕೇಂದ್ರ ನೆರವಾಗಲಿದೆ ಎಂದು ತಿಳಿಸಿದರು.
ಈ ಹೊಸ ವ್ಯವಸ್ಥೆಯ ಮೂಲಕ ಕೈದಿಗಳ ಕುಟುಂಬಗಳು ವಾರಕ್ಕೆ ಎರಡು ಬಾರಿ ಕೇಂದ್ರದ ಮೂಲಕ ಕೈದಿಗಳೊಂದಿಗೆ ಸಂವಹನ ನಡೆಸುವ ಅವಕಾಶವೂ ದೊರೆಯಲಿದೆ ಎಂದು ಅವರು ಹೇಳಿದರು.
ಬೆಳಿಗ್ಗೆ 11ರಿಂದ ಮಧ್ಯಾಹ್ನ 1 ಗಂಟೆ ಯವರೆಗೆ ಸಂಜೆ 4ರಿಂದ 5.30ವರೆಗೆ ಈ ನೆರವು ಕೇಂದ್ರ ತೆರೆದಿರುತ್ತದೆ. ಮೂವರು ವಕೀಲರನ್ನು ಈ ಕೇಂದ್ರಕ್ಕೆ ನಿಯೋಜಿಸಲಾಗಿದ್ದು, ಅವರು ಆರೋಪಿಗಳ ಕುಟುಂಬಿಕರಿಗೆ ಕಾನೂನು ಸಲಹೆ, ಮಾರ್ಗದರ್ಶನ ನೀಡಲಿದ್ದಾರೆ. ಇಂತಹ ಕಾನೂನು ನೆರವು ನೀಡುವ ನಿಟ್ಟಿನಲ್ಲಿ ಪ್ರಾಧಿಕಾರದಿಂದ 10 ಮಂದಿ ಕಾನೂನು ಅಭಿರಕ್ಷಕರನ್ನು ನೇಮಿಸಲಾಗಿದೆ. ಕೊಲೆ, ಪೊಕ್ಸೊ, ದೊಡ್ಡ ಪ್ರಮಾಣದ ಎನ್ಡಿಪಿಎಸ್, ಅತ್ಯಾಚಾರ ಪ್ರಕರಣಗಳ ಆರೋಪಿಗಳನ್ನು ಹೊರತುಪಡಿಸಿ ಇತರ ಪ್ರಕರಣಗಳ ಆರೋಪಿಗಳಿಗೆ ಈ ಕೇಂದ್ರದಿಂದ ನೆರವು ಸಿಗುತ್ತದೆ ಎಂದರು.
ಆದರೆ ಕೊಲೆ, ಪೋಕ್ಸೊ, ಪ್ರಮುಖ ಎನ್ಡಿಪಿಎಸ್ ಮತ್ತು ಅತ್ಯಾಚಾರ ಪ್ರಕರಣಗಳಲ್ಲಿ ಆರೋಪಿಗಳಿಗೆ ಈ ಸೇವೆ ಲಭ್ಯವಿರುವುದಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಈ ಸಂದರ್ಭದಲ್ಲಿ ಕಾರಾಗೃಹ ಅಧೀಕ್ಷಕ ಶರಣ ಬಸಪ್ಪ, ವಕೀಲ ರವಿರಾಜ್, ಕೆಎಸ್ಐಎಸ್ಎಫ್ ಇನ್ಸ್ಪೆಕ್ಟರ್ ಸುಭಾಷ್ ಹಾಗೂ ಕೇಂದ್ರ ಸಲಹೆಗಾರ ಡೆನಿಸ್ ಡಿಸೋಜಾ ಉಪಸ್ಥಿತರಿದ್ದರು.
ಮಂಗಳೂರು ಕಾರಾಗೃಹದ ಅಧೀಕ್ಷಕ ಶರಣಬಸಪ್ಪ, ವಕೀಲರಾದ ರವಿರಾಜ್, ಕೆಎಸ್ಐಎಸ್ಎಫ್ ನಿರೀಕ್ಷಕ ಸುಭಾಷ್, ಕೇಂದ್ರದ ಸಲಹೆಗಾರಡೆನ್ನಿಸ್ ಡಿಸೋಜಾ ಉಪಸ್ಥಿತರಿದ್ದರು. ಪ್ರೇಮಿ ಫರ್ನಾಂಡೀಸ್ ಕಾಯಕ್ರಮ ನಿರೂಪಿಸಿದರು. ಹರ್ಷಿತಾ ವಂದಿಸಿದರು.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm