ಬ್ರೇಕಿಂಗ್ ನ್ಯೂಸ್
16-05-26 09:16 pm HK News Staffer ಕರಾವಳಿ
ಉಡುಪಿ, ಮೇ 16: ವಿಕಲಚೇತನ ಮಕ್ಕಳ ಬೆಳವಣಿಗೆ, ಮನರಂಜನೆ ಹಾಗೂ ಅವರ ಸಾಮರ್ಥ್ಯ ವೃದ್ಧಿಸುವ ನಿಟ್ಟಿನಲ್ಲಿ ದೇಶದಲ್ಲೇ ಮೊದಲ ಬಾರಿಗೆ ಉಡುಪಿ ನಗರದ ಬ್ರಹ್ಮಗಿರಿಯ ಬಾಲಭವನದಲ್ಲಿ “ವಿಶೇಷ ಮಕ್ಕಳಿಗಾಗಿ ಸಾಮರ್ಥ್ಯ ವನ ಪಾರ್ಕ್” ನಿರ್ಮಾಣ ಮಾಡಲಾಗುತ್ತಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಿಕಲಚೇತನರ ಸಬಲೀಕರಣ ಇಲಾಖೆ ಹಾಗೂ ಉಡುಪಿ ಜಿಪಂ ವತಿಯಿಂದ ಪಾರ್ಕ್ ನಿರ್ಮಿಸಲಾಗುತ್ತಿದ್ದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಇಂದು ಪಾರ್ಕ್ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿದರು.
ವಿಕಲಚೇತನರಿಗೆ ಸಮಗ್ರ ಪುನರ್ವಸತಿ, ಚಿಕಿತ್ಸಕ ಸೇವೆಗಳು, ಉದ್ಯೋಗವಕಾಶ ಮತ್ತು ಸ್ವತಂತ್ರ ಜೀವನಕ್ಕೆ ಸಾಮರ್ಥ್ಯ ವೃದ್ಧಿಸುವ ನಿಟ್ಟಿನಲ್ಲಿ ವಿಶಿಷ್ಟ ರೀತಿಯ ಪಾರ್ಕ್ ನಿರ್ಮಾಣಕ್ಕೆ ಉದ್ದೇಶಿಸಲಾಗಿದೆ. ಇದಕ್ಕಾಗಿ ಜಿಪಂ ಸಿಇಓ ಅಧ್ಯಕ್ಷತೆಯಲ್ಲಿ ಇತರ ಅಧಿಕಾರಿಗಳನ್ನು ಒಳಗೊಂಡ ಪ್ರತ್ಯೇಕ ಸಾಮರ್ಥ್ಯ ಟ್ರಸ್ಟ್ ರಚಿಸಲಾಗಿದೆ. ಒಂದೂವರೆ ಕೋಟಿ ಸರ್ಕಾರಿ ಅನುದಾನ ಮತ್ತು ಇತರ ಸಂಘ- ಸಂಸ್ಥೆಗಳ ನೆರವಿನಲ್ಲಿ ಒಟ್ಟು 4.90 ಕೋಟಿ ವೆಚ್ಚದಲ್ಲಿ ವಿಶಿಷ್ಟ ರೀತಿಯ ಪಾರ್ಕ್ ನಿರ್ಮಾಣವಾಗಲಿದೆ.
ಉಡುಪಿ ಜಿಲ್ಲೆಯಲ್ಲಿ 15 ವರ್ಷ ಒಳಗಿನ 1228 ವಿಕಲ ಚೇತನ ಮಕ್ಕಳಿದ್ದು ಇವರು ತಮ್ಮ ಕುಟುಂಬ ಸದಸ್ಯರೊಂದಿಗೆ ಕಾಲ ಕಳೆಯಲು ಪಾರ್ಕ್ ಅನುಕೂಲವಾಗಲಿದೆ. ಇದಲ್ಲದೆ, ಇದರಲ್ಲಿ ಥೆರಪಿ ಸ್ವಿಂಗ್ಸ್ ಗಳು, ಬ್ಯಾಲನ್ಸ್ ಬೀಮ್ಸ್ ಗಳು, ಸಂಗೀತ ವಾದ್ಯಗಳು, ಸ್ಪರ್ಶ ಸಂವೇದನಾ ಮಾರ್ಗಗಳು, ಮರಳು ಮತ್ತು ನೀರಿನ ಆಟದ ವಲಯಗಳು ಇರಲಿದೆ. ಹೂಗಳ ಸುವಾಸನೆ ವೈವಿಧ್ಯ ಅರಿಯಲು ಸೆನ್ಸೇಶನ್ ಸೆನ್ಸರಿ ಪಾರ್ಕ್ ಕೂಡ ಬರಲಿದೆ.


ಪಾರ್ಕ್ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಇದೊಂದು ಇಡೀ ರಾಜ್ಯ, ದೇಶಕ್ಕೆ ಮಾದರಿ ಆಗಬಲ್ಲ ಪಾರ್ಕ್ ಆಗಲಿದೆ. ಇದನ್ನು ನಾಲ್ಕು ವರ್ಷದಲ್ಲಿ ಪೂರ್ಣಗೊಳಿಸಲು ಯೋಜನೆ ಹಾಕಿದ್ದಾರೆ. ಆದರೆ ಎರಡೇ ವರ್ಷದಲ್ಲಿ ಕಾಮಗಾರಿ ಪೂರ್ತಿಗೊಳಿಸಿ ನಮ್ಮ ಅವಧಿಯಲ್ಲೇ ಉದ್ಘಾಟನೆ ಮಾಡುವಂತಾಗಬೇಕು. ನಮ್ಮ ಇಲಾಖೆಯಿಂದಲೂ ಶೀಘ್ರ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು.
ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಜಿಲ್ಲಾ ಪಂಚಾಯತ್ ಸಿಇಒ ಪ್ರತೀಕ್ ಬಯಾಲ್, ಪೋಲಿಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ರುದ್ರಣ್ಣ, ಶ್ರೀಮತಿ ರತ್ನ, ಖ್ಯಾತ ಮನೋವೈದ್ಯ ಡಾ. ಪಿ.ವಿ. ಭಂಡಾರಿ, ಜೈ ವಿಠ್ಠಲ್, ಹರಿಪ್ರಸಾದ ರಾಯ್ ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am