ಬ್ರೇಕಿಂಗ್ ನ್ಯೂಸ್
18-05-26 10:47 pm HK News Desk ಕರಾವಳಿ
ಮಂಗಳೂರು, ಮೇ 18 : ಮಂಗಳೂರು ನಗರ ಹೊರವಲಯದ ಪ್ರಮುಖ ಹೆದ್ದಾರಿ ಜಂಕ್ಷನ್ಗಳಾದ ಬೈಕಂಪಾಡಿ ಮತ್ತು ಕೂಳೂರು ಬಳಿ ಸುಗಮ ಸಂಚಾರ ಹಾಗೂ ಅಪಘಾತ ಮುಕ್ತ ವಲಯ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ಕಾಮಗಾರಿಗಳಿಗೆ ಅನುಮೋದನೆ ನೀಡಿ ಅನುದಾನ ಮಂಜೂರು ಮಾಡಿದೆ ಎಂದು ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ.
ರಾ. ಹೆ. 66ರಲ್ಲಿ ಬರುವ ಈ ಎರಡು ಪ್ರಮುಖ ಜಂಕ್ಷನ್ನಲ್ಲಿ ವಾಹನಗಳ ಸುಗಮ ಸಂಚಾರಕ್ಕಾಗಿ ಅಂಡರ್ ಪಾಸ್ ನಿರ್ಮಾಣಕ್ಕೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಒಟ್ಟು 11.63 ಕೋಟಿ ರೂ. ಅಧಿಕ ಅನುದಾನ ಬಿಡುಗಡೆ ಮಾಡಿದೆ.
ಬೈಕಂಪಾಡಿ ಜಂಕ್ಷನ್ನಲ್ಲಿ ಅಂಡರ್ಪಾಸ್
ಬ್ಲ್ಯಾಕ್ ಸ್ಪಾಟ್ ಆಗಿ ಮಾರ್ಪಟ್ಟಿದ್ದ ಬೈಕಂಪಾಡಿ ಜಂಕ್ಷನ್ ಸುಗಮ ಹಾಗೂ ಸುರಕ್ಷಿತ ವಾಹನ ಸಂಚಾರಕ್ಕಾಗಿ ಅಂಡರ್ ಪಾಸ್ ಆಗಬೇಕೆಂದು ಸಾರ್ವಜನಿಕರಿಂದ ಬೇಡಿಕೆ ಕೇಳಿಬಂದಿತ್ತು. ಬೈಕಂಪಾಡಿ ಕೈಗಾರಿಕಾ ಪ್ರದೇಶಕ್ಕೆ ತೆರಳುವ ವಾಹನಗಳ ಅನುಕೂಲಕ್ಕಾಗಿ ಬೈಕಂಪಾಡಿ ಜಂಕ್ಷನ್ನಲ್ಲಿ 7.09 ಕೋಟಿ ರೂ. ವೆಚ್ಚದಲ್ಲಿ ಅಂಡರ್ ಪಾಸ್ (LVUP) ನಿರ್ಮಾಣಕ್ಕೆ ಹೆದ್ದಾರಿ ಸಚಿವಾಲಯವು ಅನುಮೋದನೆ ನೀಡಿದೆ. ಈ ಅಂಡರ್ಪಾಸ್ ನಿರ್ಮಾಣದಿಂದಾಗಿ ವಾಹನಗಳು ಹೆದ್ದಾರಿಯಲ್ಲಿ ತಿರುವು ಪಡೆಯುವ ಬದಲು ಅಂಡರ್ಪಾಸ್ ಮೂಲಕವೇ ಕೈಗಾರಿಕಾ ಪ್ರದೇಶದ ಕಡೆಗೆ ಚಲಿಸಬಹುದಾಗಿದೆ. ಜತೆಗೆ ಹೆದ್ದಾರಿಯಲ್ಲಿಯೂ ಬೈಕಂಪಾಡಿ ಬಳಿ ಸುಗಮವಾಗಿ ಉಡುಪಿ ಕಡೆಗೆ ವಾಹನಗಳು ಸಂಚರಿಸುವುದಕ್ಕೆ ಅನುಕೂಲವಾಗಲಿದೆ.
ಕೂಳೂರು ಸೇತುವೆ ಬಳಿ ಅಂಡರ್ಪಾಸ್
ರಾಷ್ಟ್ರೀಯ ಹೆದ್ದಾರಿ 66ರ ಕೆ.ಐ.ಒ.ಸಿ.ಎಲ್ (KIOCL) ಜಂಕ್ಷನ್ ಮತ್ತು ಕೂಳೂರು ಸೇತುವೆ ಬಳಿ 4.54 ಕೋಟಿ ರೂ. ವೆಚ್ಚದಲ್ಲಿ ಅಂಡರ್ ಪಾಸ್ ಕಾಮಗಾರಿಗೆ ಅನುಮೋದನೆ ಸಿಕ್ಕಿದೆ. ಈ ಭಾಗದಲ್ಲಿ ಅಂಡರ್ಪಾಸ್ ನಿರ್ಮಿಸುವುದರಿಂದ ತಣ್ಣೀರುಬಾವಿ ಬೀಚ್ ಹಾಗೂ ಎಂ.ಎಸ್.ಇ.ಝೆಡ್ (MSEZ/SCZ) ಕಡೆಗೆ ಚಲಿಸುವ ವಾಹನಗಳ ದಟ್ಟಣೆಯನ್ನು ನಿವಾರಿಸಲು ಮತ್ತು ಸುಗಮ ಸಂಚಾರ ಕಲ್ಪಿಸಲು ಈ ಯೋಜನೆ ಸಹಕಾರಿಯಾಗಲಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಹೆದ್ದಾರಿ ಮೂಲಸೌಕರ್ಯದ ದೀರ್ಘ ಕಾಲದ ಬೇಡಿಕೆಯನ್ನು ಈಡೇರಿಸಿ, ಮಹತ್ವದ ಕಾಮಗಾರಿಗಳಿಗೆ ಅನುದಾನ ಒದಗಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಹಾಗೂ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಜನತೆಯ ಪರವಾಗಿ ಸಂಸದ ಕ್ಯಾ. ಬ್ರಿಜೇಶ್ ಚೌಟ ಧನ್ಯವಾದ ಸಲ್ಲಿದ್ದಾರೆ.
ಎನ್ಎಂಪಿಟಿ ಭಾಗದ ರಸ್ತೆಯು ಇದಕ್ಕೂ ಮೊದಲು ರಾಷ್ಟ್ರೀಯ ಹೆದ್ದಾರಿ ಸರಕು ಸಾಗಣೆ ನಿರ್ವಹಣೆ ಲಿಮಿಟೆಡ್ ವ್ಯಾಪ್ತಿಯಲ್ಲಿದ್ದು ನಿರ್ದಿಷ್ಟ ಏಜೆನ್ಸಿ ಇಲ್ಲದಿರುವುದು ಹಾಗೂ ನಿಧಿಯ ಕೊರತೆಯಿಂದ ಹೆದ್ದಾರಿ ಅಭಿವೃದ್ಧಿಗೆ ತೀವ್ರ ಸವಾಲು ಎದುರಾಗಿತ್ತು. ಈ ಬಗ್ಗೆ ಸತತ ಪ್ರಯತ್ನ ನಡೆಸಿ, ಪೋರ್ಟ್ ವ್ಯಾಪ್ತಿಯ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಹಸ್ತಾಂತರಿಸುವಲ್ಲಿ ಯಶಸ್ವಿಯಾಗಿದ್ದು, ಇದೀಗ ಕೂಳೂರು ಸೇತುವೆ ಬಳಿ ಮತ್ತು ಬೈಕಂಪಾಡಿ ಜಂಕ್ಷನ್ ಬಳಿ ಕೆಳಸೇತುವೆ ನಿರ್ಮಾಣದಿಂದ ಮಂಗಳೂರು-ಉಡುಪಿ ನಡುವೆ ಸಂಚರಿಸುವ ಸಾರ್ವಜನಿಕರಿಗೆ ಸುಗಮ ಸಂಚಾರ ಸಾಧ್ಯವಾಗಲಿದೆ. ಜೊತೆಗೆ ಬೈಕಂಪಾಡಿ ಕೈಗಾರಿಕಾ ವಲಯ ಹಾಗೂ ಎಂ.ಎಸ್.ಇ.ಝೆಡ್ ಭಾಗಕ್ಕೆ ಸಂಚರಿಸುವವರಿಗೂ ಹೆಚ್ಚಿನ ಅನುಕೂಲ ಕಲ್ಪಿಸಲಿದೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm