ಬ್ರೇಕಿಂಗ್ ನ್ಯೂಸ್
19-05-26 10:44 am HK News Staffer ಕರಾವಳಿ
ಮಂಗಳೂರು, ಮೇ 19: ಒಂದು ರೂಪಾಯಿಗೆ ಒಂದು ಶರ್ಟ್, 999 ರೂ.ಗೆ ಮೂರು ಬ್ಯಾಗಿ ಪ್ಯಾಂಟ್. ಬಜ್ಪೆ ಪೇಟೆಯಲ್ಲಿ ಬಟ್ಟೆ ಅಂಗಡಿ ಶುಭಾರಂಭಕ್ಕೆ ಹೀಗೊಂದು ಆಫರ್ ನೀಡಲಾಗಿತ್ತು. ಸೋಶಿಯಲ್ ಮೀಡಿಯಾದಲ್ಲಿ ಇಂಥದ್ದೊಂದು ಆಫರ್ ವಿಡಿಯೋ ವೈರಲ್ ಆಗುತ್ತಿದ್ದಂತೆ ಮೊನ್ನೆ ಮೇ 17ರ ಭಾನುವಾರ ಜನರು ಸಾಗರೋಪಾದಿಯಲ್ಲಿ ಮುಗಿಬಿದ್ದು ಜಾಮ್ ಟೈಟ್ ಆಗಿತ್ತು.
ಮಂಗಳೂರು ಹೊರವಲಯದ ಬಜ್ಪೆ ಪೇಟೆಯಲ್ಲಿ ಬಟ್ಟೆ ಅಂಗಡಿಯ ಉದ್ಘಾಟನೆಯನ್ನು ಮೇ 17ರ ಭಾನುವಾರ ಏರ್ಪಡಿಸಲಾಗಿತ್ತು. ಜನರನ್ನು ಆಕರ್ಷಿಸಲು ಎಂಬಂತೆ ಒಂದು ರೂ.ಗೆ ಒಂದು ಆಕರ್ಷಕ ಶರ್ಟ್ ಎನ್ನುವ ಆಫರ್ ಇರೋದಾಗಿ ವಿಡಿಯೋ ಹರಿಯಬಿಡಲಾಗಿತ್ತು. ವಿಡಿಯೋ ಇನ್ ಸ್ಟಾ ಗ್ರಾಮ್ ಪೇಜ್ ಗಳಲ್ಲಿ ವೈರಲ್ ಆಗಿದ್ದು ಯುವ ಜನರು ಭಾರೀ ಸಂಖ್ಯೆಯಲ್ಲಿ ಮುಗಿಬಿದ್ದಿದ್ದಾರೆ. ಎಷ್ಟರ ಮಟ್ಟಿಗೆ ಅಂದ್ರೆ, ಬಟ್ಟೆ ಅಂಗಡಿಯಲ್ಲಿ ಕಂಟ್ರೋಲ್ ಮಾಡಲಾಗದೆ ಜನರನ್ನು ಒಳಗೆ ಹೊರಗೆ ಕಳಿಸುವುದೇ ಅಸಾಧ್ಯ ಎನ್ನುವಂತಾಗಿತ್ತು.

ವಿಚಿತ್ರ ಅಂದರೆ, ಬಟ್ಟೆ ಅಂಗಡಿ ಉದ್ಘಾಟನೆಗೆಂದು ಬಂದಿದ್ದ ಶಾಸಕ ಉಮಾನಾಥ ಕೋಟ್ಯಾನ್ ಕೂಡ ಇವರ ಎಡೆಯಲ್ಲಿ ಸಿಕ್ಕಿಬೀಳುವಂತಾಗಿತ್ತು. ಜನರ ನಡುವೆ ಸಿಕ್ಕಿಬಿದ್ದು ಶಾಸಕರೇ ಅಪ್ಪಚ್ಚಿಯಾಗಿದ್ದು, ಅಲ್ಲಿಂದ ಹೊರಬರುವುದಕ್ಕೆ ಉಸ್ಸಪ್ಪಾ ಎನ್ನುವಂತಾಗಿತ್ತು. ಉಚಿತ ಕೊಡುತ್ತೇವೆ ಅಂದ್ರೆ ಎಷ್ಟೊಂದು ಜನ ಮುಗಿಬೀಳುತ್ತಾರೆ ಅನ್ನುವುದಕ್ಕೆ ಇಲ್ಲಿ ಸೇರಿದ್ದ ಜನರೇ ಸಾಕ್ಷಿಯಾಗಿದ್ದರು.
ಹೆಚ್ಚಿನ ಸಂಖ್ಯೆಯಲ್ಲಿ ಯುವಕರೇ ಬಂದು ಸೇರಿದ್ದು, ಬ್ಯಾಗಿ ಪ್ಯಾಂಟ್, ಕಂಪನಿ ಶರ್ಟ್ ಗಳನ್ನು ಕೊಳ್ಳಲು ಮುಂದಾಗಿದ್ದರು. ಒಂದೇ ದಿನ ಅಂಗಡಿ ಮಳಿಗೆ ಖಾಲಿಯಾಗುವಷ್ಟರ ಮಟ್ಟಿಗೆ ಜನ ಸೇರಿದ್ದರು. ಆದರೆ ಮೊದಲು ಬಂದ ನೂರು ಜನರಿಗೆ ಮಾತ್ರ ಒಂದು ರೂ. ಶರ್ಟ್ ಆಫರ್ ಇತ್ತು. ಆದರೆ ಅಲ್ಲಿ ಸಾವಿರಕ್ಕೂ ಹೆಚ್ಚು ಜನರು ಸೇರಿದ್ದು ತೀವ್ರ ನೂಕುನುಗ್ಗಲು ಉಂಟಾಗಿತ್ತು.
₹1 shirt offer creates chaos in #Bajpe, #Mangaluru! Huge crowd gathers at a clothing store after viral social media promo. Even #MLAUmanathKotian got caught in the rush during the inauguration. Only first 100 customers were eligible for the offer. #Mangaluru #Bajpe pic.twitter.com/Mkx29731db
— Headline Karnataka (@hknewsonline) May 19, 2026
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm