ಬ್ರೇಕಿಂಗ್ ನ್ಯೂಸ್
22-05-26 08:10 pm HK News Staffer ಕರಾವಳಿ
ಮಂಗಳೂರು, ಮೇ 22 : ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬೈಕಂಪಾಡಿಯಿಂದ KIOCL ಜಂಕ್ಷನ್ ವರೆಗೆ ಒಟ್ಟು 414.16 ಕೋಟಿ ರೂ. ವೆಚ್ಚದಲ್ಲಿ ಎಲಿವೇಟೆಡ್ ಫ್ಲೈಓವರ್ ಮತ್ತು ಸರ್ವಿಸ್ ರಸ್ತೆ ನಿರ್ಮಾಣಕ್ಕಾಗಿ ಕೇಂದ್ರ ಸರ್ಕಾರದಿಂದ ಅನುಮೋದನೆ ದೊರಕಿದ್ದು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಟೆಂಡರ್ ಪ್ರಕ್ರಿಯೆ ಆರಂಭಿಸಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ.
ನವ ಮಂಗಳೂರು ಬಂದರಿಗೆ ನೇರ ಸಂಪರ್ಕ ಸುಧಾರಿಸುವ ಒಟ್ಟು 3.075 ಕಿ.ಮೀ. ಉದ್ದದ ರಸ್ತೆ ಅಭಿವೃದ್ದಿ ಯೋಜನೆ ಇದಾಗಿದ್ದು, ಈ ಪೈಕಿ 1.520 ಮೀ. ಉದ್ದದ ಅತ್ಯಾಧುನಿಕ 6 ಪಥದ ಎಲಿವೇಟೆಡ್ ಫ್ಲೈಓವರ್ ನಿರ್ಮಾಣಗೊಳ್ಳಲಿದೆ. ಈ ಬೃಹತ್ ಯೋಜನೆಯನ್ನು ಇಪಿಸಿ ಮಾದರಿಯಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. ಇದರೊಂದಿಗೆ ಹೆದ್ದಾರಿಯ ಇಕ್ಕೆಲಗಳಲ್ಲಿ ಒಟ್ಟು 5.825 ಕಿ.ಮೀ. ಉದ್ದದ ಸರ್ವಿಸ್ ರಸ್ತೆ ನಿರ್ಮಿಸಲಾಗುವುದು. ಈ ಯೋಜನೆಯ ಯಶಸ್ವಿ ಅನುಷ್ಠಾನಕ್ಕಾಗಿ ನವ ಮಂಗಳೂರು ಬಂದರು ಪ್ರಾಧಿಕಾರವು ಅಗತ್ಯವಿರುವ ಹೆಚ್ಚುವರಿ ಭೂಮಿ ಹಾಗೂ ಆರ್ಥಿಕ ಧನ ಸಹಾಯವನ್ನು ಹೆದ್ದಾರಿ ಪ್ರಾಧಿಕಾರಕ್ಕೆ ಒದಗಿಸಲಿದೆ.
ರಾ.ಹೆ. 66ರಲ್ಲಿ ಈ ಭಾಗದ ರಸ್ತೆ ನವ ಮಂಗಳೂರು ಬಂದರಿಗೆ ನೇರ ಸಂಪರ್ಕ ಕಲ್ಪಿಸುವಲ್ಲಿ ಹಾಗೂ ರಫ್ತು- ಆಮದು ಸರಕುಗಳ ಸಾಗಣೆಗೆ ಅತ್ಯಂತ ನಿರ್ಣಾಯಕ ಕಾರಿಡಾರ್ ಆಗಿ ಕಾರ್ಯ ನಿರ್ವಹಿಸುತ್ತಿದೆ. ಈ ನೂತನ ಯೋಜನೆಯು ಹೆದ್ದಾರಿ ಸಂಚಾರ ಹಾಗೂ ಸ್ಥಳೀಯ ವಾಹನಗಳ ನಡುವಿನ ಓಡಾಟ ಪ್ರತ್ಯೇಕಿಸಿ, ಸುಗಮ ಸಂಚಾರ ಹಾಗೂ ರಸ್ತೆ ಸುರಕ್ಷತೆ ಅನುಕೂಲ ಕಲ್ಪಿಸಲಿದೆ ಎಂದು ಸಂಸದರು ತಿಳಿಸಿದ್ದಾರೆ.
ಬೈಕಂಪಾಡಿ ಕೈಗಾರಿಕಾ ಪ್ರದೇಶ ಮತ್ತು KIOCL ವಲಯದ ರಸ್ತೆ ಅಭಿವೃದ್ದಿ ಯೋಜನೆ ಜಿಲ್ಲೆಯ ಕೈಗಾರಿಕಾ ಮತ್ತು ಆರ್ಥಿಕ ಬೆಳವಣಿಗೆಗೆ ಪ್ರಮುಖ ಪ್ರೇರಕ ಶಕ್ತಿಯಾಗಲಿದೆ. ಕರಾವಳಿ ಭಾಗದ ಒಟ್ಟಾರೆ ರಸ್ತೆ ಸಂಪರ್ಕ ವ್ಯವಸ್ಥೆಯನ್ನು ಸುಧಾರಿಸುವುದರೊಂದಿಗೆ, ಭವಿಷ್ಯದ ವಾಹನ ದಟ್ಟಣೆಯ ಅಗತ್ಯತೆಗಳನ್ನು ಪೂರೈಸಲು ಮತ್ತು ದೀರ್ಘಕಾಲೀನ ಮೂಲಸೌಕರ್ಯ ಪ್ರಯೋಜನಗಳನ್ನು ಒದಗಿಸಲು ಇದು ಸಹಕಾರಿಯಾಗಲಿದೆ.
ದಕ್ಷಿಣ ಕನ್ನಡ ಹಾಗೂ ಕರಾವಳಿ ಭಾಗದ ಆರ್ಥಿಕ ನಾಡಿಮಿಡಿತವಾಗಿರುವ ಈ ರಸ್ತೆಯ ಮೇಲ್ದರ್ಜೆಗೇರಿಸಲು ಅನುಮೋದನೆ ನೀಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ, ಕೇಂದ್ರ ಬಂದರು ಹಡಗು ಮತ್ತು ಜಲಮಾರ್ಗಗಳ ಸಚಿವ ಸರ್ಬಾನಂದ ಸೋನೋವಾಲ್ ಹಾಗೂ ಯೋಜನೆಗೆ ಕೈಜೋಡಿಸಿರುವ ನವ ಮಂಗಳೂರು ಬಂದರು ಪ್ರಾಧಿಕಾರಕ್ಕೆ ಜಿಲ್ಲೆಯ ಜನತೆಯ ಪರವಾಗಿ ಸಂಸದ ಕ್ಯಾ. ಬ್ರಿಜೇಶ್ ಚೌಟ ಕೃತಜ್ಞತೆ ಸಲ್ಲಿಸಿದ್ದಾರೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am