ಬ್ರೇಕಿಂಗ್ ನ್ಯೂಸ್
22-05-26 08:10 pm HK News Staffer ಕರಾವಳಿ
ಮಂಗಳೂರು, ಮೇ 22 : ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬೈಕಂಪಾಡಿಯಿಂದ KIOCL ಜಂಕ್ಷನ್ ವರೆಗೆ ಒಟ್ಟು 414.16 ಕೋಟಿ ರೂ. ವೆಚ್ಚದಲ್ಲಿ ಎಲಿವೇಟೆಡ್ ಫ್ಲೈಓವರ್ ಮತ್ತು ಸರ್ವಿಸ್ ರಸ್ತೆ ನಿರ್ಮಾಣಕ್ಕಾಗಿ ಕೇಂದ್ರ ಸರ್ಕಾರದಿಂದ ಅನುಮೋದನೆ ದೊರಕಿದ್ದು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಟೆಂಡರ್ ಪ್ರಕ್ರಿಯೆ ಆರಂಭಿಸಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ.
ನವ ಮಂಗಳೂರು ಬಂದರಿಗೆ ನೇರ ಸಂಪರ್ಕ ಸುಧಾರಿಸುವ ಒಟ್ಟು 3.075 ಕಿ.ಮೀ. ಉದ್ದದ ರಸ್ತೆ ಅಭಿವೃದ್ದಿ ಯೋಜನೆ ಇದಾಗಿದ್ದು, ಈ ಪೈಕಿ 1.520 ಮೀ. ಉದ್ದದ ಅತ್ಯಾಧುನಿಕ 6 ಪಥದ ಎಲಿವೇಟೆಡ್ ಫ್ಲೈಓವರ್ ನಿರ್ಮಾಣಗೊಳ್ಳಲಿದೆ. ಈ ಬೃಹತ್ ಯೋಜನೆಯನ್ನು ಇಪಿಸಿ ಮಾದರಿಯಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. ಇದರೊಂದಿಗೆ ಹೆದ್ದಾರಿಯ ಇಕ್ಕೆಲಗಳಲ್ಲಿ ಒಟ್ಟು 5.825 ಕಿ.ಮೀ. ಉದ್ದದ ಸರ್ವಿಸ್ ರಸ್ತೆ ನಿರ್ಮಿಸಲಾಗುವುದು. ಈ ಯೋಜನೆಯ ಯಶಸ್ವಿ ಅನುಷ್ಠಾನಕ್ಕಾಗಿ ನವ ಮಂಗಳೂರು ಬಂದರು ಪ್ರಾಧಿಕಾರವು ಅಗತ್ಯವಿರುವ ಹೆಚ್ಚುವರಿ ಭೂಮಿ ಹಾಗೂ ಆರ್ಥಿಕ ಧನ ಸಹಾಯವನ್ನು ಹೆದ್ದಾರಿ ಪ್ರಾಧಿಕಾರಕ್ಕೆ ಒದಗಿಸಲಿದೆ.
ರಾ.ಹೆ. 66ರಲ್ಲಿ ಈ ಭಾಗದ ರಸ್ತೆ ನವ ಮಂಗಳೂರು ಬಂದರಿಗೆ ನೇರ ಸಂಪರ್ಕ ಕಲ್ಪಿಸುವಲ್ಲಿ ಹಾಗೂ ರಫ್ತು- ಆಮದು ಸರಕುಗಳ ಸಾಗಣೆಗೆ ಅತ್ಯಂತ ನಿರ್ಣಾಯಕ ಕಾರಿಡಾರ್ ಆಗಿ ಕಾರ್ಯ ನಿರ್ವಹಿಸುತ್ತಿದೆ. ಈ ನೂತನ ಯೋಜನೆಯು ಹೆದ್ದಾರಿ ಸಂಚಾರ ಹಾಗೂ ಸ್ಥಳೀಯ ವಾಹನಗಳ ನಡುವಿನ ಓಡಾಟ ಪ್ರತ್ಯೇಕಿಸಿ, ಸುಗಮ ಸಂಚಾರ ಹಾಗೂ ರಸ್ತೆ ಸುರಕ್ಷತೆ ಅನುಕೂಲ ಕಲ್ಪಿಸಲಿದೆ ಎಂದು ಸಂಸದರು ತಿಳಿಸಿದ್ದಾರೆ.
ಬೈಕಂಪಾಡಿ ಕೈಗಾರಿಕಾ ಪ್ರದೇಶ ಮತ್ತು KIOCL ವಲಯದ ರಸ್ತೆ ಅಭಿವೃದ್ದಿ ಯೋಜನೆ ಜಿಲ್ಲೆಯ ಕೈಗಾರಿಕಾ ಮತ್ತು ಆರ್ಥಿಕ ಬೆಳವಣಿಗೆಗೆ ಪ್ರಮುಖ ಪ್ರೇರಕ ಶಕ್ತಿಯಾಗಲಿದೆ. ಕರಾವಳಿ ಭಾಗದ ಒಟ್ಟಾರೆ ರಸ್ತೆ ಸಂಪರ್ಕ ವ್ಯವಸ್ಥೆಯನ್ನು ಸುಧಾರಿಸುವುದರೊಂದಿಗೆ, ಭವಿಷ್ಯದ ವಾಹನ ದಟ್ಟಣೆಯ ಅಗತ್ಯತೆಗಳನ್ನು ಪೂರೈಸಲು ಮತ್ತು ದೀರ್ಘಕಾಲೀನ ಮೂಲಸೌಕರ್ಯ ಪ್ರಯೋಜನಗಳನ್ನು ಒದಗಿಸಲು ಇದು ಸಹಕಾರಿಯಾಗಲಿದೆ.
ದಕ್ಷಿಣ ಕನ್ನಡ ಹಾಗೂ ಕರಾವಳಿ ಭಾಗದ ಆರ್ಥಿಕ ನಾಡಿಮಿಡಿತವಾಗಿರುವ ಈ ರಸ್ತೆಯ ಮೇಲ್ದರ್ಜೆಗೇರಿಸಲು ಅನುಮೋದನೆ ನೀಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ, ಕೇಂದ್ರ ಬಂದರು ಹಡಗು ಮತ್ತು ಜಲಮಾರ್ಗಗಳ ಸಚಿವ ಸರ್ಬಾನಂದ ಸೋನೋವಾಲ್ ಹಾಗೂ ಯೋಜನೆಗೆ ಕೈಜೋಡಿಸಿರುವ ನವ ಮಂಗಳೂರು ಬಂದರು ಪ್ರಾಧಿಕಾರಕ್ಕೆ ಜಿಲ್ಲೆಯ ಜನತೆಯ ಪರವಾಗಿ ಸಂಸದ ಕ್ಯಾ. ಬ್ರಿಜೇಶ್ ಚೌಟ ಕೃತಜ್ಞತೆ ಸಲ್ಲಿಸಿದ್ದಾರೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm