ಬ್ರೇಕಿಂಗ್ ನ್ಯೂಸ್
06-01-21 11:24 am Mangalore Correspondent ಕರಾವಳಿ
ವಿಟ್ಲ, ಜ.5: ಮನೆಗೆ ನುಗ್ಗಿದ ದುಷ್ಕರ್ಮಿಗಳು ಕಟ್ಟಿ ಹಾಕಿ ದರೋಡೆ ನಡೆಸಿದ್ದ ಕುರಿತ ಪ್ರಕರಣವನ್ನು ಬೇಧಿಸುವಲ್ಲಿ ವಿಟ್ಲ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ.
ಆಟೋ ಚಾಲಕ ರಫೀಕ್ ಹಾಗೂ ಆತನ ಪುತ್ರ ಮಧ್ಯಾಹ್ನ ನಮಾಜಿಗೆ ತೆರಳಿದ್ದ ಸಂದರ್ಭದಲ್ಲಿ ಮನೆಯೊಳಗೆ ನುಗ್ಗಿದ ಅಪರಿಚಿತ ವ್ಯಕ್ತಿ ಪತ್ನಿ ಜೈನಾಬಿಯನ್ನು ಕಟ್ಟಿ ಹಾಕಿ, ಮೈಮೇಲಿದ್ದ ಕಿವಿಯೋಲೆ, ಉಂಗುರ ಹಾಗೂ ಚೈನ್ ಕಿತ್ತುಕೊಂಡು ಹಿಂಬದಿ ಬಾಗಿಲಿನಿಂದ ಪರಾರಿಯಾಗಿದ್ದನೆಂದು ದೂರು ನೀಡಲಾಗಿತ್ತು.
ಪೊಲೀಸರು ತನಿಖೆ ನಡೆಸಿದಾಗ, ಮಹಿಳೆಯೇ ಚಿನ್ನವನ್ನು ಬೇರೆಡೆಗೆ ಸಾಗಿಸಿದ್ದು ಬೆಳಕಿಗೆ ಬಂದಿದೆ. ಮನೆಯ ಪಕ್ಕದಲ್ಲಿ ವಾಸವಿರುವ ವ್ಯಕ್ತಿಯೊಬ್ಬನ ಕಾಟಕ್ಕೆ ಬೇಸತ್ತು ಬಾಡಿಗೆ ಮನೆ ಬದಲಿಸಲು ನಿರ್ಧರಿಸಿದ್ದರು. ಆದರೆ, ಪತ್ನಿ ಇದಕ್ಕೆ ಒಪ್ಪಿರಲಿಲ್ಲ. ಮನೆ ಬದಲಿಸುವ ಸಂದರ್ಭದಲ್ಲೇ ಪತ್ನಿ ದರೋಡೆಯ ನಾಟಕಕ್ಕೆ ಮುಂದಾಗಿದ್ದಾಳೆ ಎನ್ನಲಾಗಿದೆ.

ವಿಟ್ಲ ಠಾಣಾ ಉಪನಿರೀಕ್ಷಕ ವಿನೋದ್ ರೆಡ್ಡಿ, ಸಿಬ್ಬಂದಿಗಳಾದ ಪ್ರಸನ್ನ, ಜಯಕುಮಾರ್, ಪ್ರತ್ತಾಪ, ವಿನಾಯಕ, ಹೇಮರಾಜ್ ಅವರ ತಂಡ ಕಾರ್ಯಚರಣೆ ನಡೆಸಿದ್ದು, ಮಹಿಳೆ ಬೇರೆಡೆಗೆ ಸಾಗಿಸಿಟ್ಟಿದ್ದ ಬಂಗಾರವನ್ನು ವಶಕ್ಕೆ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ.
ಪೊಲೀಸ್ ತನಿಖೆ ತೀವ್ರಗೊಳ್ಳುತ್ತಿದ್ದಂತೆ ಭಯಗೊಂಡ ಮಹಿಳೆ ಅದನ್ನು ಬೇರೆಡೆಗೆ ತೆಗೆದುಕೊಂಡು ಹೋಗಿ ಮುಚ್ಚಿಟ್ಟಿದ್ದಳು. ಈ ಬಗ್ಗೆ ಪಕ್ಕದ ಮನೆಯ ವ್ಯಕ್ತಿಯನ್ನು ತನಿಖೆ ನಡೆಸಿದ ಸಂದರ್ಭ ಒಟ್ಟು ಪ್ರಕರಣ ಬೆಳಕಿಗೆ ಬಂದಿದ್ದು, ಭಾಗಶಃ ಬಂಗಾರವನ್ನು ಆತನ ಸಹಕಾರದಲ್ಲಿ ವಶಕ್ಕೆ ಪಡೆಯಲಾಗಿದೆ. ಆತನ ಸಹಕಾರದಲ್ಲೇ ದರೋಡೆ ನಾಟಕ ನಡೆದಿತ್ತಾ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ಕೊಕ್ಕಡ ಮಾದರಿಯಲ್ಲೇ ಮತ್ತೊಂದು ದರೋಡೆ ; ಮಹಿಳೆಗೆ ಹಲ್ಲೆಗೈದು ಚಿನ್ನ ಲೂಟಿ
Robbers whob tied a women and looted Jewellery at Vitla the police have found that it was the women herself who gave this idea.
09-05-26 10:41 pm
HK News Desk
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
09-05-26 12:06 pm
HK News Staffer
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am