ಬ್ರೇಕಿಂಗ್ ನ್ಯೂಸ್
25-05-26 01:08 pm HK News Staffer ಕರಾವಳಿ
ಮಂಗಳೂರು, ಮೇ 25: ಅಮೆರಿಕದಲ್ಲಿ ಚರ್ಚ್ ಧರ್ಮಗುರುವಾಗಿ ಹುಟ್ಟೂರು ಮಂಗಳೂರಿನ ಬಗ್ಗೆ ನಿಕಟ ಪ್ರೀತಿ ಇರಿಸಿಕೊಂಡಿದ್ದ, ಹಲವಾರು ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದ ಫಾ. ಮೊನ್ಸಿಜೆರ್ ಲೆಸ್ಲಿ ಶೆಣಯ್ (79) ಭಾನುವಾರ ಮೇ 24ರಂದು ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ನಿಧನರಾದರು.
ಮಂಗಳೂರಿನ ಉರ್ವಾ ಮೂಲದ ಶೆಣಯ್, 1976ರ ಮೇ 14ರಂದು ಧರ್ಮಗುರುಗಳಾಗಿ ದೀಕ್ಷೆ ಪಡೆದು, 1979ರಿಂದ ಅಮೆರಿಕದ ಫ್ರೆಸ್ನೋ ಧರ್ಮಪ್ರಾಂತ್ಯದಲ್ಲಿ ಸೇವೆ ಸಲ್ಲಿಸಿದ್ದರು. 1985ರಲ್ಲಿ ಅಮೆರಿಕದ ಪೌರತ್ವ ಪಡೆದಿದ್ದರೂ, ಹುಟ್ಟೂರಿನೊಂದಿಗೆ ನಿಕಟ ಸಂಪರ್ಕವನ್ನು ಉಳಿಸಿಕೊಂಡು, ಹಲವು ಮಾನವೀಯ ಹಾಗೂ ಶೈಕ್ಷಣಿಕ ಕಾರ್ಯಗಳಿಗೆ ಬೆಂಬಲ ನೀಡುತ್ತ ಬಂದಿದ್ದರು.
ಇವರ ಪ್ರಮುಖ ಕೊಡುಗೆಗಳಲ್ಲಿ “ಮೊ ಲೆಸ್ಲಿ ಎಫ್. ಶೆಣಯ್ ವಿದ್ಯಾರ್ಥಿವೇತನ” ಯೋಜನೆ ಪ್ರಮುಖವಾಗಿದ್ದು, ಕ್ಯಾಥೋಲಿಕ್ ಬೋರ್ಡ್ ಆಫ್ ಎಜುಕೇಷನ್ ಮೂಲಕ ಅರ್ಹ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಪಡೆಯಲು ಸಹಾಯ ಮಾಡಿದ್ದರು. ಅಲ್ಲದೆ, ಸೆಮಿನರಿ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡುವುದರ ಜೊತೆಗೆ, ಬಡ ಕುಟುಂಬಗಳಿಗೆ ಜೀವನೋಪಾಯಕ್ಕಾಗಿ ವಾಹನಗಳನ್ನು ದಾನ ಮಾಡಿದ್ದರು. 2025ರಲ್ಲಿ, ತಮ್ಮ ನಿವೃತ್ತಿ ಸಂಗ್ರಹದಿಂದ ಪುತ್ತೂರಿನಲ್ಲಿ ಹಿರಿಯ ನಾಗರಿಕರ ವಸತಿಗೃಹವನ್ನು ನಿರ್ಮಿಸಿ ದಾನವಾಗಿ ನೀಡಿದ್ದು, ವೃದ್ಧರಿಗೆ ಆಶ್ರಯ ಮತ್ತು ಆರೈಕೆ ಒದಗಿಸಿದ್ದರು. ಅವರ ಒಡನಾಟ ಇದ್ದವರು ಸರಳ, ಸ್ನೇಹಪರ ವ್ಯಕ್ತಿತ್ವ ಎಂದು ಸ್ಮರಿಸುತ್ತಿದ್ದಾರೆ.
ಮೃತರ ಸಾರ್ವಜನಿಕ ಅಂತಿಮ ದರ್ಶನವು ಮೇ 27ರ ಬುಧವಾರ ಮಧ್ಯಾಹ್ನ 2.30ರಿಂದ ನಡೆಯಲಿದ್ದು, ಮಧ್ಯಾಹ್ನ 3 ಗಂಟೆಗೆ ಉರ್ವಾ ಇಮ್ಯಾಕ್ಯುಲೇಟ್ ಕನ್ಸೆಪ್ಷನ್ ಚರ್ಚ್ನಲ್ಲಿ ಅಂತ್ಯಕ್ರಿಯೆ ನೆರವೇರಲಿದೆ. ಪ್ರಮುಖ ಗಣ್ಯರು ಅಗಲಿದ ಧರ್ಮಗುರುಗಳಿಗೆ ಶೋಕ ವ್ಯಕ್ತ ಪಡಿಸಿದ್ದಾರೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm