ಬ್ರೇಕಿಂಗ್ ನ್ಯೂಸ್
25-05-26 09:57 pm HK News Staffer ಕರಾವಳಿ
ಮಂಗಳೂರು, ಮೇ 25: ಎಮ್ ಆರ್ ಪಿ ಎಲ್ ನ ಉದ್ದೇಶಿತ ಹಸಿರು ವಲಯಕ್ಕಾಗಿ ಗುರುತಿಸಿರುವ 27 ಎಕರೆ ಜಮೀನು ಸ್ವಾಧೀನ ತಕ್ಷಣ ಆರಂಭಿಸಬೇಕು, ಪುನರ್ವಸತಿ ವಾಗ್ದಾನವನ್ನು ನಿಗದಿತ ಕಾಲಾವಧಿಯಲ್ಲಿ ಪೂರ್ಣಗೊಳಿಸಬೇಕು ಎಂಬ ಬೇಡಿಕೆ ಮುಂದಿಟ್ಟು ಜೋಕಟ್ಟೆ, ಕಳವಾರು, ಕೆಂಜಾರು ಗ್ರಾಮದ ಕೋಕ್ ಸಲ್ಫರ್ ಘಟಕದ ಮಾಲಿನ್ಯದಿಂದ ಸಂತ್ರಸ್ತರು "ನಾಗರಿಕ ಹೋರಾಟ ಸಮಿತಿ" ನೇತೃತ್ವದಲ್ಲಿ ಎಂಟು ದಿನಗಳಿಂದ ನಡೆಸುತ್ತಿದ್ದ ಹಗಲು ರಾತ್ರಿ ಧರಣಿಯನ್ನು ಜಿಲ್ಲಾಧಿಕಾರಿ ಭರವಸೆಯೊಂದಿಗೆ ಮುಕ್ತಾಯಗೊಳಿಸಿದ್ದಾರೆ.
ಜಿಲ್ಲಾಧಿಕಾರಿ ಎಚ್.ವಿ ದರ್ಶನ್ ಅಧ್ಯಕ್ಷತೆಯ ಸಭೆಯಲ್ಲಿ ಸಂಸದ ಬ್ರಿಜೇಶ್ ಚೌಟ, ಮೂಡುಬಿದಿರೆ ಶಾಸಕ ಉಮಾನಾಥ ಕೋಟ್ಯಾನ್, ಎಂಆರ್ ಪಿಎಲ್ ಎಂಡಿ ಕಾಮತ್ ಸಹಿತ ಜಿಲ್ಲಾ ಮಟ್ಟದ ಅಧಿಕಾರಿಗಳು, ಹೋರಾಟ ಸಮಿತಿ ಸಂಚಾಲಕ ಮುನೀರ್ ಕಾಟಿಪಳ್ಳ ಸಹಿತ ಹಲವು ಪದಾಧಿಕಾರಿಗಳು ಉಪಸ್ಥಿತರಿದ್ದರು.


ಹಸಿರು ವಲಯಕ್ಕೆ ಗುರುತು ಮಾಡಲಾದ 27 ಎಕರೆ ಜಮೀನನ್ನು ಕಂಪೆನಿ ನೇರ ಖರೀದಿಸುವುದು, ಜಿಲ್ಲಾಧಿಕಾರಿ ಅಧೀನದ ಸಮಿತಿಯಿಂದ ಭೂಸ್ವಾಧೀನಗೊಳಿಸುವುದು, ಕೆಐಡಿಬಿಯಿಂದ ಸ್ವಾಧೀನ ಮಾಡುವುದು ಈ ಮೂರು ಬೇಡಿಕೆಗಳನ್ನು ಜಿಲ್ಲಾಧಿಕಾರಿಗಳು ಸಭೆಯ ಮುಂದೆ ತೆರದಿಟ್ಟರು. ಈ ಅಂಶಗಳ ಮೇಲೆ ಹೋರಾಟ ಸಮಿತಿಯ ಪ್ರತಿನಿಧಿಗಳು, ಜನಪ್ರತಿನಿಧಿಗಳು ಚರ್ಚಿಸಿದರು. ಕೆಐಎಡಿಬಿಯಿಂದ ಭೂಸ್ವಾಧೀನದ ಕಾನೂನು ಪ್ರಕ್ರಿಯೆಯನ್ನು ಆರು ತಿಂಗಳಲ್ಲಿ ಪೂರ್ಣಗೊಳಿಸಿ, ಭೂಸ್ವಾಧೀನ ಪ್ರಕ್ರಿಯೆ ಆರಂಭಿಸುವುದಾಗಿ ಜಿಲ್ಲಾಡಳಿತ ಸ್ಪಷ್ಟ ಭರವಸೆ ನೀಡಿದ ಹಿನ್ನಲೆಯಲ್ಲಿ ಹೋರಾಟ ಸಮಿತಿ ಪ್ರತಿನಿಧಿಗಳು ಕೆಐಎಡಿಬಿ ಮೂಲಕ ಭೂಸ್ವಾಧೀನಕ್ಕೆ ಒಪ್ಪಿಗೆ ಸೂಚಿಸಿದರು. ಭೂಸ್ವಾಧೀನ ಆರಂಭಿಸುವುದು ಯಾವುದೇ ಕಾರಣಕ್ಕೂ ಆರು ತಿಂಗಳು ಮೀರಬಾರದು ಎಂದು ಖಾತರಿ ಪಡಿಸಬೇಕು ಎಂದು ಸಂಚಾಲಕ ಮುನೀರ್ ಕಾಟಿಪಳ್ಳ ಹೇಳಿದರು. ಜಿಲ್ಲಾಡಳಿತ, ಕೆಐಎಡಿಬಿ ಅಧಿಕಾರಿಗಳು ಇದಕ್ಕೆ ಒಪ್ಪಿಗೆ ಸೂಚಿಸಿದರು.
ನೇರ ಖರೀದಿಯೊಂದಿಗೆ ಏಕಗಂಟಿನ ಪರಿಹಾರಕ್ಕೆ ಸಂತ್ರಸ್ತರು ಒಪ್ಪಿಗೆ ಸೂಚಿಸಿದ್ದಾರೆ. ಅಲ್ಲದೆ, ಎಂಆರ್ ಪಿಎಲ್ ನ ನಾಲ್ಕನೇ ಹಂತದ ಭೂಸ್ವಾಧೀನಕ್ಕೆ ಪೆರ್ಮುದೆ ಗ್ರಾಮಸ್ಥರಿಗೆ ಸಿಗುವ ಪುನರ್ವಸತಿ ಪ್ಯಾಕೇಜ್ ನಲ್ಲಿರುವ ಎಲ್ಲಾ ಅಂಶಗಳನ್ನು ಜೋಕಟ್ಟೆ ಸಂತ್ರಸ್ತರಿಗೂ ಒದಗಿಸಬೇಕು ಎಂದು ಮುನೀರ್ ಕಾಟಿಪಳ್ಳ ಇದೇ ವೇಳೆ ಆಗ್ರಹಿಸಿದರು. ನಾಲ್ಕನೇ ಹಂತದ ಭೂಸ್ವಾಧೀನ ಪ್ಯಾಕೇಜ್ ನಲ್ಲಿ ಇರುವ 18 ತಿಂಗಳ ಮನೆ ಬಾಡಿಗೆಯನ್ನು ಜೋಕಟ್ಟೆಯವರಿಗೆ ಒದಗಿಸಬೇಕು, ಕುಸಿಯವ ಹಂತದಲ್ಲಿ ಇರುವ ಮನೆಗಳ ನಿವಾಸಿಗಳಿಗೆ ಸೂಕ್ತ ರಕ್ಷಣೆ ಒದಗಿಸಬೇಕು ಎಂದು ಒತ್ತಾಯಿಸಿದರು.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am