ಬ್ರೇಕಿಂಗ್ ನ್ಯೂಸ್
28-05-26 02:28 pm HK News Staffer ಕರಾವಳಿ
ಮಂಗಳೂರು, ಮೇ 28: ರಾಜ್ಯದಲ್ಲಿ ರಾಜಕೀಯ ಬೆಳವಣಿಗೆ ಆಗುತ್ತಿರುವುದರಿಂದ ಹಾಲಿ ಸ್ಪೀಕರ್ ಯು.ಟಿ ಖಾದರ್ ಮುಂದಿನ ಸರ್ಕಾರದಲ್ಲಿ ಡಿಸಿಎಂ ಸ್ಥಾನ ಪಡೆಯಲಿದ್ದಾರೆ ಎಂಬ ಬಗೆಗಿನ ಚರ್ಚೆಗೆ ಸ್ವತಃ ಯು.ಟಿ ಖಾದರ್ ಪ್ರತಿಕ್ರಿಯಿಸಿದ್ದು ಈಗ ನಾನು ಸ್ಪೀಕರ್ ಆಗಿ ಇದ್ದೇನೆ. ಮುಂದೆ ಏನಾಗುತ್ತೆ ಎಂಬ ಮಾಹಿತಿ ನನಗೂ ಇಲ್ಲ. ಸಮಯ ಅದನ್ನು ನಿರ್ಧರಿಸುತ್ತದೆ ಎಂದು ಹೇಳಿದ್ದಾರೆ.
ಈಗ ನಾನು ಯಾವುದೇ ರಾಜಕೀಯ ಮಾತನಾಡಲ್ಲ. ಮಾಧ್ಯಮಗಳಲ್ಲಿ ಈ ಬಗ್ಗೆ ಚರ್ಚೆ ಆಗುತ್ತಿದೆ. ಸಮಯ ಬಂದಾಗ ಗೊತ್ತಾಗುತ್ತದೆ. ಸರ್ಕಾರ ಯಾವಾಗ ಅಧಿವೇಶನ ನಡೆಸಲು ತೀರ್ಮಾನಿಸುತ್ತೆ, ಆಗ ಸುಸೂತ್ರವಾಗಿ ಸದನ ನಡೆಸುತ್ತೇನೆ. ಯಾರು ಯಾರಿಗೆ ಮಂತ್ರಿ ಸ್ಥಾನ ನೀಡಬೇಕೆಂದು ಆಡಳಿತ ಪಕ್ಷದ ಪ್ರಮುಖರು ತೀರ್ಮಾನ ಮಾಡ್ತಾರೆ.
ನಾನು ಡಿಸಿಎಂ ಆಗಬೇಕೆಂಬ ಪೋಸ್ಟ್ ಅನ್ನು ಯಾರು ಸಹ ಸಾಮಾಜಿಕ ಜಾಲತಾಣದಲ್ಲಿ ಹಾಕಬೇಡಿ. ಈ ಎಲ್ಲಾ ವಿಚಾರಗಳು ಪಕ್ಷಕ್ಕೆ, ಮುಖಂಡರಿಗೆ ಬಿಟ್ಟಿದ್ದು. ಈ ಎಲ್ಲಾ ವಿಚಾರಗಳನ್ನು ನಾನು ಹೇಳಿದ್ರೆ ಗುಟ್ಟು ಉಳಿಯುತ್ತಾ.? ಏನು ಬರ್ತದೆ ಅಂತಾ ನೋಡೋಣ. ಇವತ್ತು ಸಂತೋಷದಿಂದ ಹಬ್ಬವನ್ನು ಆಚರಿಸೋಣ.
ನನಗೆ ನಿಮ್ಮ ಮೂಲಕವೇ ಸಿಹಿ ಸುದ್ದಿ ಬರೋದು. ಬೆಂಗಳೂರಿಗೆ ಹೋಗುವ ಬಗ್ಗೆ ತೀರ್ಮಾನಿಸಿಲ್ಲ. ಇವತ್ತು ಹಬ್ಬ ಇರೋದ್ರಿಂದ ಹಬ್ಬ ಆಚರಿಸೋದು ಇವತ್ತಿನ ನನ್ನ ಕೆಲಸ ಎಂದು ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಸುದ್ದಿಗೋಷ್ಟಿ ನಡೆಸಿದ ಸ್ಪೀಕರ್ ಯು.ಟಿ ಖಾದರ್, ಈ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ್ದಾರೆ.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm