ಬ್ರೇಕಿಂಗ್ ನ್ಯೂಸ್
01-06-26 02:22 pm HK News Staffer ಕರಾವಳಿ
ಮಂಗಳೂರು, ಜೂ 01: ಬಹುನಿರೀಕ್ಷಿತ ಬೆಂಗಳೂರು–ಮಂಗಳೂರು ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನ ಪ್ರಾಯೋಗಿಕ ಸಂಚಾರ (ಟ್ರಯಲ್ ರನ್) ಜೂನ್ 3ರಂದು ನಡೆಸಲು ನಿಗದಿಯಾಗಿದ್ದರೂ, ದಕ್ಷಿಣ ಪಶ್ಚಿಮ ರೈಲ್ವೆ ಇಲಾಖೆ ಅದನ್ನು ರದ್ದುಗೊಳಿಸಿದೆ. ಈ ನಿರ್ಧಾರದಿಂದ ಕರಾವಳಿ ಕರ್ನಾಟಕ ಹಾಗೂ ರಾಜಧಾನಿ ನಡುವಿನ ವೇಗದ ರೈಲು ಸೇವೆಯ ನಿರೀಕ್ಷೆಗೆ ಮತ್ತೊಮ್ಮೆ ತಾತ್ಕಾಲಿಕ ವಿಳಂಬ ಉಂಟಾಗಿದೆ.
ದಕ್ಷಿಣ ಪಶ್ಚಿಮ ರೈಲ್ವೆಯ ಮುಖ್ಯ ಪ್ರಯಾಣಿಕ ಸಂಚಾರ ವ್ಯವಸ್ಥಾಪಕರ ಕಚೇರಿಯಿಂದ ಅಧಿಕೃತ ಆದೇಶ ಹೊರಬಂದಿದ್ದು, ಯಶವಂತಪುರ- ಮಂಗಳೂರು- ಯಶವಂತಪುರ ಮಾರ್ಗದಲ್ಲಿ ನಡೆಯಬೇಕಿದ್ದ ಟ್ರಯಲ್ ರನ್ ಸೇರಿದಂತೆ ಎಲ್ಲಾ ಕಾರ್ಯಾಚರಣೆಗಳನ್ನು ಹಿಂತೆಗೆದುಕೊಳ್ಳಲಾಗಿದೆ. ಜೊತೆಗೆ ನಿಗದಿಯಾಗಿದ್ದ ನಿಲ್ದಾಣ ವ್ಯವಸ್ಥೆಗಳು ಮತ್ತು ತಾಂತ್ರಿಕ ಸಿದ್ಧತೆಗಳನ್ನೂ ರದ್ದುಪಡಿಸಲಾಗಿದೆ.
ಈ ಹಿಂದೆ 8 ಬೋಗಿಗಳ ವಂದೇ ಭಾರತ್ ರೈಲು ಮೂಲಕ ಶಿರಾಡಿ ಘಾಟ್ ಮಾರ್ಗದಲ್ಲಿ ವೇಗ, ಸುರಂಗಗಳು, ಸೇತುವೆಗಳು ಹಾಗೂ ತೀಕ್ಷ್ಣ ತಿರುವುಗಳ ತಾಂತ್ರಿಕ ಕಾರ್ಯಕ್ಷಮತೆಯನ್ನು ಪರೀಕ್ಷಿಸುವ ಮಹತ್ವದ ಯೋಜನೆ ರೂಪಿಸಲಾಗಿತ್ತು. ಈ ಪ್ರಯೋಗವು ವಿಶೇಷವಾಗಿ ಘಾಟ್ ವಿಭಾಗದ ಸುರಕ್ಷತೆ ಮತ್ತು ಕಾರ್ಯಾಚರಣಾ ಸಾಮರ್ಥ್ಯವನ್ನು ಮೌಲ್ಯಮಾಪನ ಮಾಡುವ ದೃಷ್ಟಿಯಿಂದ ಅತ್ಯಂತ ಪ್ರಮುಖವಾಗಿತ್ತು. ಆದರೆ ಇದೀಗ ಟ್ರಯಲ್ ರನ್ ಅನಿರೀಕ್ಷಿತವಾಗಿ ಮುಂದೂಡಲ್ಪಟ್ಟಿದೆ. ರೈಲ್ವೆ ಇಲಾಖೆ ಈ ನಿರ್ಧಾರದ ನಿಖರ ಕಾರಣವನ್ನು ಅಧಿಕೃತವಾಗಿ ಬಹಿರಂಗಪಡಿಸದಿದ್ದರೂ, ಮೂಲಗಳ ಪ್ರಕಾರ ಕಾರ್ಯಾಚರಣಾ ಆದ್ಯತೆಗಳು ಹಾಗೂ ತಾಂತ್ರಿಕ ಸಿದ್ಧತೆಗಳ ಪೂರ್ಣತೆ ಕೊರತೆ ಕಾರಣವಾಗಿರಬಹುದು ಎಂದು ಅಂದಾಜಿಸಲಾಗಿದೆ.
ಶಿರಾಡಿ ಘಾಟ್ ಮಾರ್ಗದಲ್ಲಿ ಈಗಾಗಲೇ ಸರಕು ರೈಲುಗಳ ಸಂಚಾರ ನಿರಂತರವಾಗಿದ್ದು, ಹಳಿ ಮತ್ತು ಮೂಲಸೌಕರ್ಯದಲ್ಲಿ ಯಾವುದೇ ಪ್ರಮುಖ ಅಡಚಣೆಗಳಿಲ್ಲದಿದ್ದರೂ, ವಂದೇ ಭಾರತ್ಗಾಗಿ ಅಗತ್ಯವಿರುವ ವಿಶೇಷ ತಾಂತ್ರಿಕ ಸಿದ್ಧತೆಗಳು ಪೂರ್ಣಗೊಂಡಿಲ್ಲ ಎಂಬ ಮಾತುಗಳು ಕೇಳಿಬರುತ್ತಿವೆ.
ಬೆಂಗಳೂರು–ಮಂಗಳೂರು ನಡುವಿನ ವಂದೇ ಭಾರತ್ ರೈಲು ಸೇವೆ ಕರಾವಳಿ ಭಾಗದ ಜನರಲ್ಲಿ ಭಾರೀ ನಿರೀಕ್ಷೆ ಹುಟ್ಟಿಸಿದ್ದು, ಪ್ರಯಾಣ ಸಮಯವನ್ನು ಗಣನೀಯವಾಗಿ ಕಡಿಮೆ ಮಾಡುವ ಜೊತೆಗೆ ಪ್ರವಾಸೋದ್ಯಮ, ವ್ಯಾಪಾರ ಮತ್ತು ದೈನಂದಿನ ಸಂಪರ್ಕಕ್ಕೆ ಹೊಸ ವೇಗ ನೀಡಲಿದೆ ಎಂಬ ನಿರೀಕ್ಷೆ ಇದೆ.
ಪ್ರಸ್ತುತ ಟ್ರಯಲ್ ರನ್ಗೆ ಹೊಸ ದಿನಾಂಕವನ್ನು ರೈಲ್ವೆ ಇಲಾಖೆ ಇನ್ನೂ ಪ್ರಕಟಿಸಿಲ್ಲ. ಮುಂದಿನ ಹಂತದ ಅಧಿಕೃತ ವೇಳಾಪಟ್ಟಿ ಮತ್ತು ಪರಿಷ್ಕೃತ ಯೋಜನೆ ಶೀಘ್ರದಲ್ಲೇ ಹೊರಬರುವ ನಿರೀಕ್ಷೆಯಿದೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am