ಬ್ರೇಕಿಂಗ್ ನ್ಯೂಸ್
01-06-26 07:05 pm HK News Staffer ಕರಾವಳಿ
ಉಡುಪಿ, ಜೂನ್ 1: ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಚಿವ ಸಂಪುಟದಲ್ಲಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಕೆಥೋಲಿಕ್ ಸಭಾ ಉಡುಪಿ ಪ್ರದೇಶ್ ಕಮಿಟಿಯ ಆಗ್ರಹದ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧ ಚರ್ಚೆಗಳು ತೀವ್ರಗೊಂಡಿವೆ. ಜಾಲತಾಣದಲ್ಲಿ ಐವನ್ ಡಿಸೋಜ ಅವರಿಗೆ ಸಚಿವ ಸ್ಥಾನ ನೀಡುವುದಕ್ಕೆ ಕೆಲವರು ಬೆಂಬಲ ಸೂಚಿಸಿದರೆ, ಇನ್ನೂ ಹಲವರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಕ್ರೈಸ್ತ ಸಮುದಾಯಕ್ಕೆ ಕೊಡುಗೆ ಏನು?
ಸಚಿವ ಸ್ಥಾನ ನೀಡುವ ಬೇಡಿಕೆಗೆ ವಿರೋಧ ವ್ಯಕ್ತಪಡಿಸಿದ ಹಲವರು, "ಇಷ್ಟು ವರ್ಷ ರಾಜಕೀಯದಲ್ಲಿರುವ ಐವನ್ ಡಿಸೋಜರಿಂದ ಕ್ರೈಸ್ತ ಸಮುದಾಯಕ್ಕೆ ಅವರ ಕೊಡುಗೆ ಏನು?" ಎಂದು ಪ್ರಶ್ನಿಸಿದ್ದಾರೆ. "ಇವರಿಂದ ಕ್ರೈಸ್ತರಿಗೆ ಒಂದು ರೂಪಾಯಿ ಉಪಯೋಗವೂ ಆಗಿಲ್ಲ. ಮಂಗಳೂರು ಮತ್ತು ಉಡುಪಿ ಭಾಗಕ್ಕೆ ಮಾತ್ರ ಸೀಮಿತವಾಗಿದ್ದಾರೆ. ಯಾರಿಗಾದರೂ ಸಚಿವ ಸ್ಥಾನ ಕೊಡಲಿ ಆದರೆ ಇವರಿಗೆ ಮಾತ್ರ ಕೊಡಬಾರದು" ಎಂದು ಕೆಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮತ್ತೊಬ್ಬರು, "ಎಂಎಲ್ಸಿ ಸ್ಥಾನವೇ ಬುದ್ಧಿವಂತರಿಗೆ ಮೀಸಲಾದ ಹುದ್ದೆ. ನೇರ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲ್ಲುವ ಸಾಮರ್ಥ್ಯ ಇಲ್ಲದವರು ಹೇಗೆ ಜನಪ್ರತಿನಿಧಿಯಾಗುತ್ತಾರೆ?" ಎಂದು ಪ್ರಶ್ನಿಸಿದ್ದಾರೆ. ಕೆಲವರು ಐವನ್ ಡಿಸೋಜ ಅವರ ರಾಜಕೀಯ ಪಯಣವನ್ನು ಪ್ರಶ್ನಿಸಿ, "ಇಷ್ಟು ವರ್ಷಗಳಲ್ಲಿ ಕ್ರೈಸ್ತ ಸಮುದಾಯದಿಂದ ಒಬ್ಬ ಹೊಸ ನಾಯಕನನ್ನಾದರೂ ಬೆಳೆಸಿದ್ದಾರಾ? ಅವರ ನಂತರ ಸಮುದಾಯವನ್ನು ಮುನ್ನಡೆಸುವ ನಾಯಕ ಯಾರು ಎಂಬುದರ ಬಗ್ಗೆ ಯೋಚನೆ ಮಾಡಿದ್ದಾರಾ?" ಎಂದು ಪ್ರಶ್ನಿಸಿದ್ದಾರೆ.


ಇದೇ ವೇಳೆ, ಐವನ್ ಡಿಸೋಜ ಪರವಾಗಿಯೂ ಹಲವರು ಧ್ವನಿ ಎತ್ತಿದ್ದಾರೆ. "ವಿಧಾನಸೌಧ ಮತ್ತು ವಿಧಾನ ಪರಿಷತ್ತಿನಲ್ಲಿ ಕ್ರೈಸ್ತ ಸಮುದಾಯದ ಹಕ್ಕುಗಳಿಗಾಗಿ ಹಲವು ಬಾರಿ ಧ್ವನಿ ಎತ್ತಿದ್ದಾರೆ. ಸಮುದಾಯದ ಸಮಸ್ಯೆಗಳಿಗೆ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಕೆಲಸ ಮಾಡಿದ್ದಾರೆ" ಎಂದು ಬೆಂಬಲಿಗರು ಅಭಿಪ್ರಾಯ ಪಟ್ಟಿದ್ದಾರೆ. ಕೆಲವರು, "ಕ್ರೈಸ್ತ ಸಮುದಾಯಕ್ಕೆ ಪ್ರಾತಿನಿಧ್ಯ ದೊರಕಬೇಕು. ಕರಾವಳಿಯಿಂದ ಒಬ್ಬರಿಗೆ ಸಚಿವ ಸ್ಥಾನ ನೀಡುವುದು ನ್ಯಾಯಸಮ್ಮತ" ಎಂದು ಹೇಳಿದ್ದಾರೆ.
ಕೆಲವರು ಆಂಧ್ರ ಪ್ರದೇಶ ಕಾಂಗ್ರೆಸ್ ಅಧ್ಯಕ್ಷೆ ವೈ.ಎಸ್. ಶರ್ಮಿಳಾ ರೆಡ್ಡಿ ಅವರಿಗೆ ರಾಜ್ಯಸಭೆ ಅವಕಾಶ ದೊರೆತಿರುವುದನ್ನು ಉಲ್ಲೇಖಿಸಿ, "ಈಗಾಗಲೇ ಕ್ರೈಸ್ತ ಸಮುದಾಯಕ್ಕೆ ರಾಷ್ಟ್ರೀಯ ಮಟ್ಟದಲ್ಲಿ ಅವಕಾಶ ದೊರೆತಿದೆ. ಸಚಿವ ಸ್ಥಾನಕ್ಕಾಗಿ ಒತ್ತಡ ಹೇರುವುದು ಅಗತ್ಯವಿಲ್ಲ" ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.


ಕರಾವಳಿ ರಾಜಕೀಯದಲ್ಲಿ ಹೊಸ ಚರ್ಚೆ
ಕೆಥೋಲಿಕ್ ಸಭಾ ಬೇಡಿಕೆ ಕರಾವಳಿ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದ್ದು, ಕ್ರೈಸ್ತ ಸಮುದಾಯದ ರಾಜಕೀಯ ಪ್ರಾತಿನಿಧ್ಯ, ಸಮುದಾಯ ನಾಯಕರ ಪಾತ್ರ ಮತ್ತು ಕಾಂಗ್ರೆಸ್ ಪಕ್ಷದಲ್ಲಿನ ಅವಕಾಶಗಳ ಕುರಿತಂತೆ ವ್ಯಾಪಕ ಚರ್ಚೆ ನಡೆಯುತ್ತಿದೆ. ಸಚಿವ ಸಂಪುಟ ರಚನೆಗೆ ಸಂಬಂಧಿಸಿದ ಅಂತಿಮ ನಿರ್ಧಾರ ಪ್ರಕಟವಾಗದಿದ್ದರೂ, ಐವನ್ ಡಿಸೋಜ ಹೆಸರು ಸುತ್ತ ನಡೆಯುತ್ತಿರುವ ಪರ-ವಿರೋಧ ಚರ್ಚೆಗಳು ಕರಾವಳಿ ರಾಜಕೀಯದಲ್ಲಿ ಗಮನ ಸೆಳೆಯುತ್ತಿವೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm