ಬ್ರೇಕಿಂಗ್ ನ್ಯೂಸ್
08-06-26 09:21 pm HK News Staffer ಕರಾವಳಿ
ಮಂಗಳೂರು, ಜೂನ್ 8 : ಮಳೆಗಾಲದಲ್ಲಿ ಎದುರಾಗುವ ಯಾವುದೇ ವಿಪತ್ತುಗಳನ್ನು ಎದುರಿಸಲು ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ನಿರ್ವಹಿಸಬೇಕು. ರಸ್ತೆ ಗುಂಡಿಗಳಿಗೆ ಬಿದ್ದು ಮೃತಪಟ್ಟರೆ ಅದಕ್ಕೆ ಇಂಜಿನಿಯರ್ ಗಳನ್ನೇ ಹೊಣೆ ಮಾಡಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ ಖಾದರ್ ಎಚ್ಚರಿಸಿದ್ದಾರೆ.
ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಳೆಗಾಲದ ಸಿದ್ಧತೆಗಳ ಕುರಿತು ಅವರು ಅಧಿಕಾರಿಗಳ ಸಭೆ ನಡೆಸಿದರು. ಮುಖ್ಯವಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ಲೋಕೋಪಯೋಗಿ ಇಲಾಖೆಗಳು ರಸ್ತೆಯಲ್ಲಿ ನೀರು ನಿಲ್ಲುವ ಪ್ರಕರಣಗಳನ್ನು ಸಮನ್ವಯದಿಂದ ನಿರ್ವಹಿಸಬೇಕು. ತುರ್ತು ಸಂದರ್ಭಗಳಲ್ಲಿ ಸಾರ್ವಜನಿಕ ಹಿತಾಸಕ್ತಿಯಿಂದ ವ್ಯಾಪ್ತಿ ಮೀರಿ ಕ್ರಮ ಕೈಗೊಳ್ಳಬೇಕು ಎಂದರು.
ಮಳೆಗಾಲದಲ್ಲಿ ರಸ್ತೆ ಹೊಂಡದಲ್ಲಿ ನೀರು ನಿಂತು ಅಪಘಾತಗಳಾಗಿ ಪ್ರಾಣ ಹಾನಿ ಸಂಭವಿಸಿದರೆ ಸಂಬಂಧಿಸಿದ ಇಂಜಿನಿಯರ್ ಗಳನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಸಿದ ಸಚಿವರು, ಪದೇ ಪದೇ ಹೊಂಡ ಮುಚ್ಚುವ ಕೆಲಸದ ಬದಲು ಶಾಶ್ವತ ಕಾಮಗಾರಿಗೆ ಒತ್ತು ನೀಡಲು ತಿಳಿಸಿದರು. ಮೆಸ್ಕಾಂ ವ್ಯಾಪ್ತಿಯಲ್ಲಿ ಮಳೆಗಾಲದಲ್ಲಿ ವಿದ್ಯುತ್ ಸಂಪರ್ಕ ನಿರ್ವಹಣೆಗೆ ಹೆಚ್ಚುವರಿ ಲೈನ್ ಮ್ಯಾನ್ ಮತ್ತು ವಾಹನಗಳನ್ನು ಒದಗಿಸಬೇಕು. ವಿದ್ಯುತ್ ಸಂಪರ್ಕ ಮರುಸ್ಥಾಪನೆಗೆ ತ್ವರಿತ ಕ್ರಮ ಕೈಗೊಳ್ಳಬೇಕು ಎಂದು ಸಚಿವರು ಮೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು.
ಮಳೆಗಾಲದಲ್ಲಿ ಮಾನವ ನಿರ್ಮಿತ ಸಮಸ್ಯೆಗಳನ್ನು ತಗ್ಗಿಸಲು ಗಮನಹರಿಸಬೇಕು. ನೆರೆಯಿಂದ ರಸ್ತೆ ತಡೆಗಳನ್ನು ಆಯಾ ಸ್ಥಳೀಯ ಸಂಸ್ಥೆಗಳು ವಿಳಂಬಿಸದೆ ತೆರವುಗೊಳಿಸಬೇಕು. ಪರಿಹಾರ ಕ್ರಮಗಳನ್ನು ಕೈಗೊಳ್ಳುವಾಗ ಸ್ಥಳೀಯ ಸಂಘ ಸಂಸ್ಥೆಗಳು ಮತ್ತು ಸಾರ್ವಜನಿಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದು ಯು ಟಿ ಖಾದರ್ ಸೂಚಿಸಿದರು. ತುರ್ತು ಸಂದರ್ಭಕ್ಕೆ ಟಾಸ್ಕ್ ಫೋರ್ಸ್ ಗಳನ್ನು ಸಕ್ರಿಯಗೊಳಿಸಬೇಕು. ಪ್ರತಿ ಗ್ರಾಮ ಪಂಚಾಯತ್ ಗಳಿಗೆ ನೋಡಲ್ ಅಧಿಕಾರಿಗಳನ್ನು ನೇಮಿಸಬೇಕು ಎಂದವರು ತಿಳಿಸಿದರು.
ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ ಅವರು ಮಳೆಗಾಲ ನಿರ್ವಹಣೆಗೆ ಕೈಗೊಳ್ಳಲಾಗಿರುವ ಸಿದ್ಧತೆಗಳನ್ನು ಸಭೆಗೆ ವಿವರಿಸಿದರು. ಸಭೆಯಲ್ಲಿ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ, ಪೊಲೀಸ್ ಅಧೀಕ್ಷಕ ಅರುಣ್, ಡಿಸಿಎಫ್ ರವಿಶಂಕರ್, ಉಪ ವಿಭಾಗಾಧಿಕಾರಿ ಮೀನಾಕ್ಷಿ ಆರ್ಯ ಮತ್ತಿತರರು ಇದ್ದರು.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm