ಬ್ರೇಕಿಂಗ್ ನ್ಯೂಸ್
06-01-21 04:09 pm Mangalore Correspondent ಕರಾವಳಿ
ಮಂಗಳೂರು, ಜ. 6: ಡ್ರಗ್ಸ್ ಸೇವನೆ ಮತ್ತು ಮಾರಾಟ ಪ್ರಕರಣಗಳಲ್ಲಿ ಆರೋಪಿಗಳಾಗಿರುವ ಮಂದಿಯನ್ನು ಕರೆದು ಪರೇಡ್ ನಡೆಸುವ ಮೂಲಕ ನೂತನ ಪೊಲೀಸ್ ಆಯುಕ್ತ ಎಂ. ಶಶಿ ಕುಮಾರ್ ಖಡಕ್ ವಾರ್ನ್ ಮಾಡಿದ್ದಾರೆ.
ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಕಮಿಷನರೇಟ್ ವ್ಯಾಪ್ತಿಯ ಆರೋಪಿಗಳ ಪರೇಡ್ ನಡೆಸಿದ್ದಾರೆ. ಡ್ರಗ್ಸ್ ಪ್ರಕರಣದಲ್ಲಿ ಪೊಲೀಸರು ಮನೆಗೆ ಬಂದು ವಿಚಾರಿಸುವುದು, ಇದರಿಂದ ಮನೆಯವರು ಕೋರ್ಟ್ ಕಚೇರಿ ಅಲೆದಾಡುವ ಸ್ಥಿತಿಗೆ ಅವಕಾಶ ನೀಡಬಾರದು. ವ್ಯಸನ ಮುಂದುವರಿಸಿದರೆ ಕಾನೂನಿನಲ್ಲಿ ಇರುವ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಸಮಾಜದಲ್ಲಿ ತಮ್ಮ ಸುತ್ತಮುತ್ತ ಇಂತಹ ದುಶ್ಚಟಗಳ ಬಗ್ಗೆ ಮಾಹಿತಿ ಇದ್ದಲ್ಲಿ, 112ಗೆ ದೂರು ನೀಡಿದರೆ ಕ್ರಮ ಕೈಗೊಳ್ಳಲಾಗುವುದು. ಪೊಲೀಸ್ ಅಧಿಕಾರಿಗಳು ಕೂಡ ತಮ್ಮ ಠಾಣೆ ವ್ಯಾಪ್ತಿಯಲ್ಲಿ ಈ ನಿಟ್ಟಿನಲ್ಲಿ ನಿಗಾ ವಹಿಸಿ ವ್ಯಾಪ್ತಿಯನ್ನು ಡ್ರಗ್ಸ್ ಮುಕ್ತವಾಗಿಸಲು ಪ್ರಯತ್ನಿಸಬೇಕು ಎಂದು ಆಯುಕ್ತರು ಹೇಳಿದರು.


ಡ್ರಗ್ಸ್ ಸೇವನೆ ಹಾಗೂ ಅಡ್ಡಾಗಳ ಮೇಲೆ ಅಧಿಕಾರಿಗಳು ನಿಗಾ ಇರಿಸಬೇಕು. ವ್ಯಸನಿಗಳು ಪತ್ತೆಯಾದಾಗ ಅವರ ಕುಟುಂಬದವನ್ನು ಸಂಪರ್ಕಿಸಿ ಮಾಹಿತಿಯನ್ನು ಕಲೆ ಹಾಕಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬಸ್ಸು ನಿಲ್ದಾಣ, ಮೈದಾನಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ರಾತ್ರಿ ಹೊತ್ತು ಕುಡಿಯುವುದು, ಸಾರ್ವಜನಿಕರಿಗೆ ತೊಂದರೆ ಕೊಡುವವರ ಮೇಲೆ ನಿರ್ದಾಕ್ಷಿಣ್ಯ ಕ್ರಮ ವಹಿಸಲಾಗುವುದು. ನಿನ್ನೆ ರಾತ್ರಿ ಮತ್ತೆ ಮದ್ಯಪಾನ ನಿರತರಾಗಿದ್ದ 6 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳಲ್ಲಿ ತಮ್ಮ ಕೆಟ್ಟ ಹವ್ಯಾಸವನ್ನು ಬಿಟ್ಟು ಉತ್ತಮವಾಗಿ ಬದುಕಲು, ಉದ್ಯೋಗಕ್ಕೆ ಮುಂದಾಗುವುದಿದ್ದಲ್ಲಿ ನಮಗೆ ತಿಳಿಸಿದರೆ ಕ್ರಮ ವಹಿಸಲಾಗುವುದು ಎಂದು ಮಿಷನರ್ ಶಶಿಕುಮಾರ್ ತಿಳಿಸಿದರು.


ಈ ಸಂಧರ್ಭ ಡಿಸಿಪಿ ವಿನಯ್ ಗಾಂವ್ಕರ್ ಹಾಗೂ ಎಸಿಪಿಗಳು ಸೇರಿದಂತೆ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.
ಪರೇಡ್ ಜತೆ ಮಾರ್ಚ್ ಫಾಸ್ಟ್...!
ಪರೇಡ್ ಬಳಿಕ ಮೈದಾನದಲ್ಲಿ ಠಾಣಾ ವ್ಯಾಪ್ತಿಯ ಆರೋಪಿಗಳನ್ನು ಮೈದಾನಕ್ಕೆ ಸುಮಾರು 3 ಸುತ್ತುಗಳ ಮಾರ್ಚ್ ಫಾಸ್ಟನ್ನು ಪೊಲೀಸ್ ಆಯುಕ್ತ ಶಶಿಕುಮಾರ್ ನಡೆಸಿದರು.
Video:
Police commissioner N Shashi Kumar on Wednesday January 6 issued stringent warning to offenders of Narcotic Drugs and Psychotropic Substances Act (NDPS) and asked them to refrain from illegal activities.
09-05-26 10:41 pm
HK News Desk
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
09-05-26 12:06 pm
HK News Staffer
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am