ಬ್ರೇಕಿಂಗ್ ನ್ಯೂಸ್
11-06-26 06:37 pm HK News Staffer ಕರಾವಳಿ
ಉಡುಪಿ, ಜೂನ್ 11: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಜೂನ್ 12ರಂದು ಪ್ರಸಿದ್ಧ ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಭಕ್ತರಿಗೆ ಮಧ್ಯಾಹ್ನ 12 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ದರ್ಶನಕ್ಕೆ ತಾತ್ಕಾಲಿಕ ನಿರ್ಬಂಧ ವಿಧಿಸಲಾಗಿದೆ. ಮುಖ್ಯಮಂತ್ರಿ ಭೇಟಿ ಹಿನ್ನೆಲೆಯಲ್ಲಿ ದೇವಸ್ಥಾನ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ ಕಲ್ಪಿಸಿದೆ.
ಸಿಎಂ ವಿಜಯ್ ಅವರು ಶುಕ್ರವಾರ ಮಧ್ಯಾಹ್ನ ಕೊಲ್ಲೂರು ಶ್ರೀ ಮೂಕಾಂಬಿಕೆ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಸಂಚರಿಸುವ ಮಾರ್ಗ, ದೇವಸ್ಥಾನದ ಪ್ರವೇಶ ದ್ವಾರ ಹಾಗೂ ದೇವಾಲಯದ ಆವರಣದಾದ್ಯಂತ ಬಿಗಿ ಬಂದೋಬಸ್ತು ಏರ್ಪಡಿಸಲಾಗಿದೆ. ಭದ್ರತಾ ಕಾರಣಗಳಿಂದಾಗಿ ಸಾಮಾನ್ಯ ಭಕ್ತರ ಪ್ರವೇಶ ಹಾಗೂ ದರ್ಶನ ವ್ಯವಸ್ಥೆಯಲ್ಲಿ ತಾತ್ಕಾಲಿಕ ಬದಲಾವಣೆ ಮಾಡಲಾಗಿದೆ.
ಮುಖ್ಯಮಂತ್ರಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಬಳಿಕ ತಕ್ಷಣವೇ ಹಿಂತಿರುಗಲಿದ್ದು, ಯಾವುದೇ ಸಾರ್ವಜನಿಕ ಸಭೆ, ಅಭಿಮಾನಿಗಳ ಭೇಟಿ ಅಥವಾ ವಿಶೇಷ ಕಾರ್ಯಕ್ರಮಗಳಿಲ್ಲ ಎಂದು ಪೊಲೀಸ್ ಇಲಾಖೆ ಸ್ಪಷ್ಟಪಡಿಸಿದೆ. ಭದ್ರತಾ ದೃಷ್ಟಿಯಿಂದ ವಾಹನಗಳ ಕಾನ್ವಾಯ್ ಸಾಗುವ ಮಾರ್ಗದಲ್ಲಿ ಹಾಗೂ ದೇವಸ್ಥಾನದ ಸುತ್ತಮುತ್ತ ಸಾರ್ವಜನಿಕರು ಗುಂಪುಗೂಡದಂತೆ ಸೂಚಿಸಲಾಗಿದೆ.
ವಿಶೇಷ ಭದ್ರತಾ ಕ್ರಮಗಳ ಕಾರಣ ಮಧ್ಯಾಹ್ನ 12ರಿಂದ ಸಂಜೆ 5 ಗಂಟೆಯವರೆಗೆ ದರ್ಶನಕ್ಕೆ ಬರುವ ಭಕ್ತರು ಅನಾನುಕೂಲ ಎದುರಿಸುವ ಸಾಧ್ಯತೆ ಇದ್ದು, ಸಾಧ್ಯವಾದರೆ ಆ ಸಮಯವನ್ನು ತಪ್ಪಿಸಿ ದೇವಸ್ಥಾನಕ್ಕೆ ಭೇಟಿ ನೀಡುವಂತೆ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ಮನವಿ ಮಾಡಿದೆ.
ಸಿಎಂ ವಿಜಯ್ ಅವರ ಮೊದಲ ಕೊಲ್ಲೂರು ಭೇಟಿ ಹಿನ್ನೆಲೆಯಲ್ಲಿ ದೇವಸ್ಥಾನ ಪರಿಸರದಲ್ಲಿ ಕಟ್ಟುನಿಟ್ಟಿನ ಭದ್ರತಾ ವಲಯ ನಿರ್ಮಾಣವಾಗಿದ್ದು, ಭಕ್ತರು ಹಾಗೂ ಸಾರ್ವಜನಿಕರು ಅಧಿಕಾರಿಗಳ ಸೂಚನೆಗಳನ್ನು ಪಾಲಿಸಿ ಸಹಕರಿಸುವಂತೆ ಮನವಿ ಮಾಡಲಾಗಿದೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm