ಬ್ರೇಕಿಂಗ್ ನ್ಯೂಸ್
12-06-26 04:31 pm HK News Staffer ಕರಾವಳಿ
ಉಡುಪಿ, ಜೂನ್ 12: ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಕೊಲ್ಲೂರು ಮೂಕಾಂಬಿಕೆಯ ದರ್ಶನ ಮಾಡಿ ವಿಶೇಷ ಪೂಜೆ ನೆರವೇರಿಸಿದ್ದಾರೆ. ಈ ವೇಳೆ, ಒಂದು ಕೇಜಿ 600 ಗ್ರಾಮ್ ತೂಕದ ಬೆಳ್ಳಿ ಕಡಗವನ್ನು ದೇವಿಗೆ ಅರ್ಪಿಸಿದ್ದಾರೆ.
ಮಧ್ಯಾಹ್ನ 3.30ರ ವೇಳೆಗೆ ಮಂಗಳೂರು ವಿಮಾನ ನಿಲ್ದಾಣದಿಂದ ರಸ್ತೆ ಮೂಲಕ ಉಡುಪಿ ಜಿಲ್ಲೆಯ ಕೊಲ್ಲೂರಿಗೆ ಆಗಮಿಸಿದ ವಿಜಯ್ ಶರ್ಟ್, ಬನಿಯಾನ್ ಕಳಚಿ ಕೇವಲ ಲುಂಗಿ ಮತ್ತು ಶಲ್ಯವನ್ನು ಮೈಗೆ ಸುತ್ತಿಕೊಂಡು ದೇವರ ದರ್ಶನ ಮಾಡಿದ್ದಾರೆ. ದೇವರಿಗೆ ಸಂಕಲ್ಪ ಪೂಜೆ ಮಾಡಿ ಕೇವಲ 20 ನಿಮಿಷ ಮಾತ್ರ ದೇವಸ್ಥಾನದಲ್ಲಿ ಕಳೆದಿದ್ದಾರೆ.

ದೇವರ ದರ್ಶನ ಸಂದರ್ಭದಲ್ಲಿ ವಿಜಯ್ ಅವರು 1 ಕೇಜಿ 600 ಗ್ರಾಮ್ ತೂಕದ ಬೆಳ್ಳಿ ಕಡಗವನ್ನು ಅರ್ಪಿಸಿದ್ದಾರೆಂದು ಕೊಲ್ಲೂರು ದೇಗುಲದ ಆಡಳಿತ ಸಮಿತಿ ಅಧ್ಯಕ್ಷ ಬಾಬು ಹೆಗ್ಡೆ ಮಾಧ್ಯಮಕ್ಕೆ ತಿಳಿಸಿದ್ದಾರೆ. ಕೊಲ್ಲೂರು ದೇಗುಲ ದೇಶದ ಪ್ರಖ್ಯಾತ ಶಕ್ತಿಪೀಠಗಳಲ್ಲಿ ಒಂದಾಗಿದ್ದು ತಮಿಳುನಾಡು ಮತ್ತು ಕೇರಳದ ಅಸಂಖ್ಯಾತ ಭಕ್ತರು ಆಗಮಿಸುತ್ತಾರೆ. ಹಿಂದೆ ತಮಿಳುನಾಡು ಸಿಎಂ ಆಗಿದ್ದ ಎಂಜಿಆರ್, ಜಯಲಲಿತಾ ಕೂಡ ಹಲವು ಬಾರಿ ಕೊಲ್ಲೂರಿಗೆ ಭೇಟಿ ನೀಡಿದ್ದರು. ಎಂಜಿಆರ್ ಅವರು ಒಂದು ಕೇಜಿಯ ಚಿನ್ನದ ಖಡ್ಗವನ್ನು ದೇವಿಗೆ ಅರ್ಪಿಸಿದ್ದರು.
ಈ ಬಾರಿ ಜೋಸೆಫ್ ವಿಜಯ್ ಸಿಎಂ ಹುದ್ದೆಗೇರಿ ಒಂದು ತಿಂಗಳು ಭರ್ತಿ ಆಗುತ್ತಲೇ ದಿಢೀರ್ ಆಗಿ ಕೊಲ್ಲೂರಿಗೆ ಆಗಮಿಸಿ ದೇವಿಯ ದರ್ಶನ ಪಡೆದಿದ್ದು ವಿಶೇಷ. ವಿಜಯ್ ಹೆತ್ತವರು ಚುನಾವಣೆಗೂ ಮುನ್ನ ಹರಕೆ ಹೊತ್ತಿದ್ದು ಪ್ರಾರ್ಥನೆ ಫಲಿಸಿದ ಹಿನ್ನೆಲೆಯಲ್ಲಿ ವಿಜಯ್ ಈಗ ದೇಗುಲಕ್ಕೆ ಬಂದಿದ್ದಾರೆ ಎನ್ನಲಾಗುತ್ತಿದೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm