ಬ್ರೇಕಿಂಗ್ ನ್ಯೂಸ್
12-06-26 04:31 pm HK News Staffer ಕರಾವಳಿ
ಉಡುಪಿ, ಜೂನ್ 12: ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಕೊಲ್ಲೂರು ಮೂಕಾಂಬಿಕೆಯ ದರ್ಶನ ಮಾಡಿ ವಿಶೇಷ ಪೂಜೆ ನೆರವೇರಿಸಿದ್ದಾರೆ. ಈ ವೇಳೆ, ಒಂದು ಕೇಜಿ 600 ಗ್ರಾಮ್ ತೂಕದ ಬೆಳ್ಳಿ ಕಡಗವನ್ನು ದೇವಿಗೆ ಅರ್ಪಿಸಿದ್ದಾರೆ.
ಮಧ್ಯಾಹ್ನ 3.30ರ ವೇಳೆಗೆ ಮಂಗಳೂರು ವಿಮಾನ ನಿಲ್ದಾಣದಿಂದ ರಸ್ತೆ ಮೂಲಕ ಉಡುಪಿ ಜಿಲ್ಲೆಯ ಕೊಲ್ಲೂರಿಗೆ ಆಗಮಿಸಿದ ವಿಜಯ್ ಶರ್ಟ್, ಬನಿಯಾನ್ ಕಳಚಿ ಕೇವಲ ಲುಂಗಿ ಮತ್ತು ಶಲ್ಯವನ್ನು ಮೈಗೆ ಸುತ್ತಿಕೊಂಡು ದೇವರ ದರ್ಶನ ಮಾಡಿದ್ದಾರೆ. ದೇವರಿಗೆ ಸಂಕಲ್ಪ ಪೂಜೆ ಮಾಡಿ ಕೇವಲ 20 ನಿಮಿಷ ಮಾತ್ರ ದೇವಸ್ಥಾನದಲ್ಲಿ ಕಳೆದಿದ್ದಾರೆ.

ದೇವರ ದರ್ಶನ ಸಂದರ್ಭದಲ್ಲಿ ವಿಜಯ್ ಅವರು 1 ಕೇಜಿ 600 ಗ್ರಾಮ್ ತೂಕದ ಬೆಳ್ಳಿ ಕಡಗವನ್ನು ಅರ್ಪಿಸಿದ್ದಾರೆಂದು ಕೊಲ್ಲೂರು ದೇಗುಲದ ಆಡಳಿತ ಸಮಿತಿ ಅಧ್ಯಕ್ಷ ಬಾಬು ಹೆಗ್ಡೆ ಮಾಧ್ಯಮಕ್ಕೆ ತಿಳಿಸಿದ್ದಾರೆ. ಕೊಲ್ಲೂರು ದೇಗುಲ ದೇಶದ ಪ್ರಖ್ಯಾತ ಶಕ್ತಿಪೀಠಗಳಲ್ಲಿ ಒಂದಾಗಿದ್ದು ತಮಿಳುನಾಡು ಮತ್ತು ಕೇರಳದ ಅಸಂಖ್ಯಾತ ಭಕ್ತರು ಆಗಮಿಸುತ್ತಾರೆ. ಹಿಂದೆ ತಮಿಳುನಾಡು ಸಿಎಂ ಆಗಿದ್ದ ಎಂಜಿಆರ್, ಜಯಲಲಿತಾ ಕೂಡ ಹಲವು ಬಾರಿ ಕೊಲ್ಲೂರಿಗೆ ಭೇಟಿ ನೀಡಿದ್ದರು. ಎಂಜಿಆರ್ ಅವರು ಒಂದು ಕೇಜಿಯ ಚಿನ್ನದ ಖಡ್ಗವನ್ನು ದೇವಿಗೆ ಅರ್ಪಿಸಿದ್ದರು.
ಈ ಬಾರಿ ಜೋಸೆಫ್ ವಿಜಯ್ ಸಿಎಂ ಹುದ್ದೆಗೇರಿ ಒಂದು ತಿಂಗಳು ಭರ್ತಿ ಆಗುತ್ತಲೇ ದಿಢೀರ್ ಆಗಿ ಕೊಲ್ಲೂರಿಗೆ ಆಗಮಿಸಿ ದೇವಿಯ ದರ್ಶನ ಪಡೆದಿದ್ದು ವಿಶೇಷ. ವಿಜಯ್ ಹೆತ್ತವರು ಚುನಾವಣೆಗೂ ಮುನ್ನ ಹರಕೆ ಹೊತ್ತಿದ್ದು ಪ್ರಾರ್ಥನೆ ಫಲಿಸಿದ ಹಿನ್ನೆಲೆಯಲ್ಲಿ ವಿಜಯ್ ಈಗ ದೇಗುಲಕ್ಕೆ ಬಂದಿದ್ದಾರೆ ಎನ್ನಲಾಗುತ್ತಿದೆ.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 10:48 pm
HK News Desk
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm