ಬ್ರೇಕಿಂಗ್ ನ್ಯೂಸ್
12-06-26 04:31 pm HK News Staffer ಕರಾವಳಿ
ಉಡುಪಿ, ಜೂನ್ 12: ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಕೊಲ್ಲೂರು ಮೂಕಾಂಬಿಕೆಯ ದರ್ಶನ ಮಾಡಿ ವಿಶೇಷ ಪೂಜೆ ನೆರವೇರಿಸಿದ್ದಾರೆ. ಈ ವೇಳೆ, ಒಂದು ಕೇಜಿ 600 ಗ್ರಾಮ್ ತೂಕದ ಬೆಳ್ಳಿ ಕಡಗವನ್ನು ದೇವಿಗೆ ಅರ್ಪಿಸಿದ್ದಾರೆ.
ಮಧ್ಯಾಹ್ನ 3.30ರ ವೇಳೆಗೆ ಮಂಗಳೂರು ವಿಮಾನ ನಿಲ್ದಾಣದಿಂದ ರಸ್ತೆ ಮೂಲಕ ಉಡುಪಿ ಜಿಲ್ಲೆಯ ಕೊಲ್ಲೂರಿಗೆ ಆಗಮಿಸಿದ ವಿಜಯ್ ಶರ್ಟ್, ಬನಿಯಾನ್ ಕಳಚಿ ಕೇವಲ ಲುಂಗಿ ಮತ್ತು ಶಲ್ಯವನ್ನು ಮೈಗೆ ಸುತ್ತಿಕೊಂಡು ದೇವರ ದರ್ಶನ ಮಾಡಿದ್ದಾರೆ. ದೇವರಿಗೆ ಸಂಕಲ್ಪ ಪೂಜೆ ಮಾಡಿ ಕೇವಲ 20 ನಿಮಿಷ ಮಾತ್ರ ದೇವಸ್ಥಾನದಲ್ಲಿ ಕಳೆದಿದ್ದಾರೆ.

ದೇವರ ದರ್ಶನ ಸಂದರ್ಭದಲ್ಲಿ ವಿಜಯ್ ಅವರು 1 ಕೇಜಿ 600 ಗ್ರಾಮ್ ತೂಕದ ಬೆಳ್ಳಿ ಕಡಗವನ್ನು ಅರ್ಪಿಸಿದ್ದಾರೆಂದು ಕೊಲ್ಲೂರು ದೇಗುಲದ ಆಡಳಿತ ಸಮಿತಿ ಅಧ್ಯಕ್ಷ ಬಾಬು ಹೆಗ್ಡೆ ಮಾಧ್ಯಮಕ್ಕೆ ತಿಳಿಸಿದ್ದಾರೆ. ಕೊಲ್ಲೂರು ದೇಗುಲ ದೇಶದ ಪ್ರಖ್ಯಾತ ಶಕ್ತಿಪೀಠಗಳಲ್ಲಿ ಒಂದಾಗಿದ್ದು ತಮಿಳುನಾಡು ಮತ್ತು ಕೇರಳದ ಅಸಂಖ್ಯಾತ ಭಕ್ತರು ಆಗಮಿಸುತ್ತಾರೆ. ಹಿಂದೆ ತಮಿಳುನಾಡು ಸಿಎಂ ಆಗಿದ್ದ ಎಂಜಿಆರ್, ಜಯಲಲಿತಾ ಕೂಡ ಹಲವು ಬಾರಿ ಕೊಲ್ಲೂರಿಗೆ ಭೇಟಿ ನೀಡಿದ್ದರು. ಎಂಜಿಆರ್ ಅವರು ಒಂದು ಕೇಜಿಯ ಚಿನ್ನದ ಖಡ್ಗವನ್ನು ದೇವಿಗೆ ಅರ್ಪಿಸಿದ್ದರು.
ಈ ಬಾರಿ ಜೋಸೆಫ್ ವಿಜಯ್ ಸಿಎಂ ಹುದ್ದೆಗೇರಿ ಒಂದು ತಿಂಗಳು ಭರ್ತಿ ಆಗುತ್ತಲೇ ದಿಢೀರ್ ಆಗಿ ಕೊಲ್ಲೂರಿಗೆ ಆಗಮಿಸಿ ದೇವಿಯ ದರ್ಶನ ಪಡೆದಿದ್ದು ವಿಶೇಷ. ವಿಜಯ್ ಹೆತ್ತವರು ಚುನಾವಣೆಗೂ ಮುನ್ನ ಹರಕೆ ಹೊತ್ತಿದ್ದು ಪ್ರಾರ್ಥನೆ ಫಲಿಸಿದ ಹಿನ್ನೆಲೆಯಲ್ಲಿ ವಿಜಯ್ ಈಗ ದೇಗುಲಕ್ಕೆ ಬಂದಿದ್ದಾರೆ ಎನ್ನಲಾಗುತ್ತಿದೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm