ಬ್ರೇಕಿಂಗ್ ನ್ಯೂಸ್
12-06-26 10:48 pm HK News Desk ಕರಾವಳಿ
ಬಂಟ್ವಾಳ, ಜೂನ್ 12: ರಾತ್ರಿ ಗಸ್ತಿನಲ್ಲಿದ್ದ ಇಬ್ಬರು ಪೊಲೀಸ್ ಸಿಬ್ಬಂದಿ ಎದೆನೋವಿನಿಂದ ಅಸ್ವಸ್ಥರಾದ ವ್ಯಕ್ತಿಯೊಬ್ಬರಿಗೆ ಸ್ಥಳದಲ್ಲೇ ಸಿಪಿಆರ್ ಪ್ರಾಥಮಿಕ ಚಿಕಿತ್ಸೆ ನೀಡುವ ಮೂಲಕ ಪ್ರಾಣ ಉಳಿಸಿದ ಅಪರೂಪದ ಪ್ರಸಂಗ ಬಂಟ್ವಾಳ ನಗರ ಠಾಣೆ ವ್ಯಾಪ್ತಿಯ ಗೂಡಿನಬಳಿ ಎಂಬಲ್ಲಿ ನಡೆದಿದೆ.
ಬಂಟ್ವಾಳ ನಗರ ಠಾಣೆಯ ಸಿಪಿಸಿ ವಿನೋದ್ ನಾಯ್ಕ್ ಮತ್ತು ಹೋಮ್ ಗಾರ್ಡ್ ಜಯಗಣೇಶ್ ಜೂನ್ 11ರ ಮಧ್ಯರಾತ್ರಿ ಬಿಸಿ ರೋಡ್ ಬಳಿಯ ಗೂಡಿನಬಳಿ, ನಂದಾವರ ಭಾಗದಲ್ಲಿ ಕರ್ತವ್ಯದಲ್ಲಿದ್ದರು. ಮಧ್ಯರಾತ್ರಿ ಕರ್ತವ್ಯ ನಿರತರಾಗಿದ್ದ ವೇಳೆ ಮನೆಯೊಂದರಲ್ಲಿ ಎದೆನೋವಿನಿಂದ ವ್ಯಕ್ತಿ ಅಸ್ವಸ್ಥರಾದ ಹಿನ್ನೆಲೆಯಲ್ಲಿ ಏನು ಮಾಡುವುದೆಂದು ತೋಚದೆ ಮನೆಯವರು ಬೊಬ್ಬೆ ಹಾಕತೊಡಗಿದ್ದರು.

ವಿಷಯ ತಿಳಿದು ಮನೆಯ ಒಳಕ್ಕೆ ತೆರಳಿದ ಇಬ್ಬರು ಪೊಲೀಸರು ಹೃದಯಾಘಾತದಿಂದ ಕುಸಿದು ಬಿದ್ದಿದ್ದ ವ್ಯಕ್ತಿಯನ್ನು ಉಪಚರಿಸಿ, ತತ್ಕಾಲಕ್ಕೆ ಉಸಿರಿನ ಸಮಸ್ಯೆ ಆಗದಂತೆ ನೋಡಿಕೊಂಡು ತುರ್ತು ಆಂಬುಲೆನ್ಸ್ ತರಿಸಿ ಆಸ್ಪತ್ರೆಗೆ ಸಾಗಿಸುವ ವ್ಯವಸ್ಥೆ ಮಾಡಿದ್ದಾರೆ. 50 ವರ್ಷದ ವ್ಯಕ್ತಿಗೆ ಹೃದಯಾಘಾತ ಆದರೂ ತುರ್ತು ಚಿಕಿತ್ಸೆ ಕೊಡಿಸಿದ್ದರಿಂದ ಅವರ ಪ್ರಾಣ ಉಳಿದಿದೆ. ಪೊಲೀಸ್ ಸಿಬಂದಿಯ ಸಕಾಲಿಕ ಕೆಲಸಕ್ಕೆ ಸಾರ್ವಜನಿಕರ ಕಡೆಯಿಂದ ಪ್ರಶಂಸೆ ವ್ಯಕ್ತವಾಗಿದೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm