ಬ್ರೇಕಿಂಗ್ ನ್ಯೂಸ್
12-06-26 10:48 pm HK News Desk ಕರಾವಳಿ
ಬಂಟ್ವಾಳ, ಜೂನ್ 12: ರಾತ್ರಿ ಗಸ್ತಿನಲ್ಲಿದ್ದ ಇಬ್ಬರು ಪೊಲೀಸ್ ಸಿಬ್ಬಂದಿ ಎದೆನೋವಿನಿಂದ ಅಸ್ವಸ್ಥರಾದ ವ್ಯಕ್ತಿಯೊಬ್ಬರಿಗೆ ಸ್ಥಳದಲ್ಲೇ ಸಿಪಿಆರ್ ಪ್ರಾಥಮಿಕ ಚಿಕಿತ್ಸೆ ನೀಡುವ ಮೂಲಕ ಪ್ರಾಣ ಉಳಿಸಿದ ಅಪರೂಪದ ಪ್ರಸಂಗ ಬಂಟ್ವಾಳ ನಗರ ಠಾಣೆ ವ್ಯಾಪ್ತಿಯ ಗೂಡಿನಬಳಿ ಎಂಬಲ್ಲಿ ನಡೆದಿದೆ.
ಬಂಟ್ವಾಳ ನಗರ ಠಾಣೆಯ ಸಿಪಿಸಿ ವಿನೋದ್ ನಾಯ್ಕ್ ಮತ್ತು ಹೋಮ್ ಗಾರ್ಡ್ ಜಯಗಣೇಶ್ ಜೂನ್ 11ರ ಮಧ್ಯರಾತ್ರಿ ಬಿಸಿ ರೋಡ್ ಬಳಿಯ ಗೂಡಿನಬಳಿ, ನಂದಾವರ ಭಾಗದಲ್ಲಿ ಕರ್ತವ್ಯದಲ್ಲಿದ್ದರು. ಮಧ್ಯರಾತ್ರಿ ಕರ್ತವ್ಯ ನಿರತರಾಗಿದ್ದ ವೇಳೆ ಮನೆಯೊಂದರಲ್ಲಿ ಎದೆನೋವಿನಿಂದ ವ್ಯಕ್ತಿ ಅಸ್ವಸ್ಥರಾದ ಹಿನ್ನೆಲೆಯಲ್ಲಿ ಏನು ಮಾಡುವುದೆಂದು ತೋಚದೆ ಮನೆಯವರು ಬೊಬ್ಬೆ ಹಾಕತೊಡಗಿದ್ದರು.

ವಿಷಯ ತಿಳಿದು ಮನೆಯ ಒಳಕ್ಕೆ ತೆರಳಿದ ಇಬ್ಬರು ಪೊಲೀಸರು ಹೃದಯಾಘಾತದಿಂದ ಕುಸಿದು ಬಿದ್ದಿದ್ದ ವ್ಯಕ್ತಿಯನ್ನು ಉಪಚರಿಸಿ, ತತ್ಕಾಲಕ್ಕೆ ಉಸಿರಿನ ಸಮಸ್ಯೆ ಆಗದಂತೆ ನೋಡಿಕೊಂಡು ತುರ್ತು ಆಂಬುಲೆನ್ಸ್ ತರಿಸಿ ಆಸ್ಪತ್ರೆಗೆ ಸಾಗಿಸುವ ವ್ಯವಸ್ಥೆ ಮಾಡಿದ್ದಾರೆ. 50 ವರ್ಷದ ವ್ಯಕ್ತಿಗೆ ಹೃದಯಾಘಾತ ಆದರೂ ತುರ್ತು ಚಿಕಿತ್ಸೆ ಕೊಡಿಸಿದ್ದರಿಂದ ಅವರ ಪ್ರಾಣ ಉಳಿದಿದೆ. ಪೊಲೀಸ್ ಸಿಬಂದಿಯ ಸಕಾಲಿಕ ಕೆಲಸಕ್ಕೆ ಸಾರ್ವಜನಿಕರ ಕಡೆಯಿಂದ ಪ್ರಶಂಸೆ ವ್ಯಕ್ತವಾಗಿದೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm