ಬ್ರೇಕಿಂಗ್ ನ್ಯೂಸ್
14-06-26 02:37 pm HK News Staffer ಕರಾವಳಿ
ಮಂಗಳೂರು, ಜೂನ್ 14 : ಕೇಂದ್ರ ಸರ್ಕಾರವು, ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶಗಳ ಸಂಪರ್ಕ ರಸ್ತೆಗಳ ಸುಧಾರಣೆಗೆ ಆಡಳಿತಾತ್ಮಕ ಅನುಮೋದನೆ ನೀಡಿದ್ದು ಕೇಂದ್ರ ರಸ್ತೆ ಮತ್ತು ಮೂಲಸೌಕರ್ಯ ನಿಧಿ (CRIF) ಅಡಿಯಲ್ಲಿ ಒಟ್ಟು 57 ಕೋ.ರೂ. ವೆಚ್ಚದ ಅಭಿವೃದ್ಧಿ ಯೋಜನೆಗೆ ಮಂಜೂರು ಮಾಡಿದೆ ಎಂದು ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ.
ಈ ಯೋಜನೆಯಡಿ ಜಿಲ್ಲೆಯಾದ್ಯಂತ ಒಟ್ಟು 14 ಪ್ರಮುಖ ಕಾಮಗಾರಿ ಮೂಲಕ ವಿವಿಧೆಡೆ ಒಟ್ಟು 82.94 ಕಿ. ಮೀ. ಉದ್ದದ ರಸ್ತೆ ಅಭಿವೃದ್ಧಿ ಪಡಿಸಲಾಗುವುದು. ಜಿಲ್ಲೆಯ ಪ್ರಮುಖ ರಾಜ್ಯ ಹೆದ್ದಾರಿ ಮತ್ತು ಜಿಲ್ಲಾ ರಸ್ತೆ ಈ ಅನುದಾನದ ಮೂಲಕ ಮೇಲ್ದರ್ಜೆಗೇರಿಸಲಾಗುವುದು. ಮಂಗಳೂರು, ಉಳ್ಳಾಲ, ಮೂಡುಬಿದ್ರೆ, ಪುತ್ತೂರು ಬಂಟ್ವಾಳ ಸೇರಿದಂತೆ ಎಲ್ಲಾ ತಾಲೂಕುಗಳಲ್ಲಿಯೂ ನಿಗದಿತ ರಸ್ತೆಗಳ ಅಭಿವೃದ್ದಿ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು ಎಂದು ಸಂಸದರು ಮಾಹಿತಿ ನೀಡಿದ್ದಾರೆ.
ರಸ್ತೆಗಳ ಅಭಿವೃದ್ಧಿ ಕಾಮಗಾರಿ
ರಸ್ತೆ ನವೀಕರಣ ಮತ್ತು ಅಗಲೀಕರಣ ಕಾಮಗಾರಿ
ಎಕ್ಸಲೆಂಟ್ ಕಾಲೇಜಿನಿಂದ ಮೂಡಬಿದ್ರೆ ಪೊಲೀಸ್ ಸ್ಟೇಷನ್ ರಸ್ತೆಯ ವರೆಗಿನ ಬೆಳ್ತಂಗಡಿ- ಮೂಡಬಿದಿರೆ- ಮುಲ್ಕಿ ರಾಜ್ಯ ಹೆದ್ದಾರಿ ನವೀಕರಣ (5 ಕಿ.ಮೀ) ರೂ. 5 ಕೋಟಿ.
ಸೋಮಂತಡ್ಕದಿಂದ ಹೆಡ್ಯ ವರೆಗಿನ (NH-275 ರಿಂದ SH-276 ಸಂಪರ್ಕಿಸುವ) ಹೆದ್ದಾರಿ ಅಭಿವೃದ್ಧಿ (5.50 ಕಿ.ಮೀ)– ರೂ. 5 ಕೋಟಿ. ಬಂಟ್ವಾಳದ ಅನಂತಾಡಿ- ಮಂಗಿಲಪದವು- ಕೊಡಪದವು ಜಿಲ್ಲಾ ಮುಖ್ಯ ರಸ್ತೆಯ ಅಗಲೀಕರಣ ಮತ್ತು ಅಭಿವೃದ್ಧಿ (3 ಕಿ.ಮೀ) – ರೂ. 5.00 ಕೋಟಿ.
ಒಟ್ಟಾರೆ ಈ ಯೋಜನೆಯಡಿ ಜಿಲ್ಲೆಯ ಪ್ರಮುಖ ಸಂಪರ್ಕ ರಸ್ತೆಗಳ ಬಲವರ್ಧನೆ, ಸುಗಮ ಸಂಚಾರ ಹಾಗೂ ಆರ್ಥಿಕ ಚಟುವಟಿಕೆಗಳಿಗೆ ವೇಗ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಈ ಬೃಹತ್ ಅನುದಾನ ಮಂಜೂರು ಮಾಡಿದೆ. ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾಗಿರುವ ಈ ಯೋಜನೆಗೆ ಅನುದಾನ ಮಂಜೂರು ಮಾಡಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ, ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರಿಗೆ ಜಿಲ್ಲೆಯ ಜನತೆಯ ಪರವಾಗಿ ಹೃತ್ಪೂರ್ವಕ ಧನ್ಯವಾದಗಳು. ಪ್ರಮುಖ ರಸ್ತೆಗಳ ಸುಧಾರಣೆ ಕಾಮಗಾರಿ ಪೂರ್ಣಗೊಂಡ ಬಳಿಕ ಜಿಲ್ಲೆಯ ಆರ್ಥಿಕ, ಶೈಕ್ಷಣಿಕ ಮತ್ತು ಪ್ರವಾಸೋದ್ಯಮ ಚಟುವಟಿಕೆಗಳಿಗೆ ಮತ್ತಷ್ಟು ವೇಗ ಸಿಗಲಿದೆ ಎಂದು ಸಂಸದ ಕ್ಯಾ.ಚೌಟ ವಿವರಿದ್ದಾರೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm