ಬ್ರೇಕಿಂಗ್ ನ್ಯೂಸ್
14-06-26 02:37 pm HK News Staffer ಕರಾವಳಿ
ಮಂಗಳೂರು, ಜೂನ್ 14 : ಕೇಂದ್ರ ಸರ್ಕಾರವು, ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶಗಳ ಸಂಪರ್ಕ ರಸ್ತೆಗಳ ಸುಧಾರಣೆಗೆ ಆಡಳಿತಾತ್ಮಕ ಅನುಮೋದನೆ ನೀಡಿದ್ದು ಕೇಂದ್ರ ರಸ್ತೆ ಮತ್ತು ಮೂಲಸೌಕರ್ಯ ನಿಧಿ (CRIF) ಅಡಿಯಲ್ಲಿ ಒಟ್ಟು 57 ಕೋ.ರೂ. ವೆಚ್ಚದ ಅಭಿವೃದ್ಧಿ ಯೋಜನೆಗೆ ಮಂಜೂರು ಮಾಡಿದೆ ಎಂದು ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ.
ಈ ಯೋಜನೆಯಡಿ ಜಿಲ್ಲೆಯಾದ್ಯಂತ ಒಟ್ಟು 14 ಪ್ರಮುಖ ಕಾಮಗಾರಿ ಮೂಲಕ ವಿವಿಧೆಡೆ ಒಟ್ಟು 82.94 ಕಿ. ಮೀ. ಉದ್ದದ ರಸ್ತೆ ಅಭಿವೃದ್ಧಿ ಪಡಿಸಲಾಗುವುದು. ಜಿಲ್ಲೆಯ ಪ್ರಮುಖ ರಾಜ್ಯ ಹೆದ್ದಾರಿ ಮತ್ತು ಜಿಲ್ಲಾ ರಸ್ತೆ ಈ ಅನುದಾನದ ಮೂಲಕ ಮೇಲ್ದರ್ಜೆಗೇರಿಸಲಾಗುವುದು. ಮಂಗಳೂರು, ಉಳ್ಳಾಲ, ಮೂಡುಬಿದ್ರೆ, ಪುತ್ತೂರು ಬಂಟ್ವಾಳ ಸೇರಿದಂತೆ ಎಲ್ಲಾ ತಾಲೂಕುಗಳಲ್ಲಿಯೂ ನಿಗದಿತ ರಸ್ತೆಗಳ ಅಭಿವೃದ್ದಿ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು ಎಂದು ಸಂಸದರು ಮಾಹಿತಿ ನೀಡಿದ್ದಾರೆ.
ರಸ್ತೆಗಳ ಅಭಿವೃದ್ಧಿ ಕಾಮಗಾರಿ
ರಸ್ತೆ ನವೀಕರಣ ಮತ್ತು ಅಗಲೀಕರಣ ಕಾಮಗಾರಿ
ಎಕ್ಸಲೆಂಟ್ ಕಾಲೇಜಿನಿಂದ ಮೂಡಬಿದ್ರೆ ಪೊಲೀಸ್ ಸ್ಟೇಷನ್ ರಸ್ತೆಯ ವರೆಗಿನ ಬೆಳ್ತಂಗಡಿ- ಮೂಡಬಿದಿರೆ- ಮುಲ್ಕಿ ರಾಜ್ಯ ಹೆದ್ದಾರಿ ನವೀಕರಣ (5 ಕಿ.ಮೀ) ರೂ. 5 ಕೋಟಿ.
ಸೋಮಂತಡ್ಕದಿಂದ ಹೆಡ್ಯ ವರೆಗಿನ (NH-275 ರಿಂದ SH-276 ಸಂಪರ್ಕಿಸುವ) ಹೆದ್ದಾರಿ ಅಭಿವೃದ್ಧಿ (5.50 ಕಿ.ಮೀ)– ರೂ. 5 ಕೋಟಿ. ಬಂಟ್ವಾಳದ ಅನಂತಾಡಿ- ಮಂಗಿಲಪದವು- ಕೊಡಪದವು ಜಿಲ್ಲಾ ಮುಖ್ಯ ರಸ್ತೆಯ ಅಗಲೀಕರಣ ಮತ್ತು ಅಭಿವೃದ್ಧಿ (3 ಕಿ.ಮೀ) – ರೂ. 5.00 ಕೋಟಿ.
ಒಟ್ಟಾರೆ ಈ ಯೋಜನೆಯಡಿ ಜಿಲ್ಲೆಯ ಪ್ರಮುಖ ಸಂಪರ್ಕ ರಸ್ತೆಗಳ ಬಲವರ್ಧನೆ, ಸುಗಮ ಸಂಚಾರ ಹಾಗೂ ಆರ್ಥಿಕ ಚಟುವಟಿಕೆಗಳಿಗೆ ವೇಗ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಈ ಬೃಹತ್ ಅನುದಾನ ಮಂಜೂರು ಮಾಡಿದೆ. ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾಗಿರುವ ಈ ಯೋಜನೆಗೆ ಅನುದಾನ ಮಂಜೂರು ಮಾಡಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ, ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರಿಗೆ ಜಿಲ್ಲೆಯ ಜನತೆಯ ಪರವಾಗಿ ಹೃತ್ಪೂರ್ವಕ ಧನ್ಯವಾದಗಳು. ಪ್ರಮುಖ ರಸ್ತೆಗಳ ಸುಧಾರಣೆ ಕಾಮಗಾರಿ ಪೂರ್ಣಗೊಂಡ ಬಳಿಕ ಜಿಲ್ಲೆಯ ಆರ್ಥಿಕ, ಶೈಕ್ಷಣಿಕ ಮತ್ತು ಪ್ರವಾಸೋದ್ಯಮ ಚಟುವಟಿಕೆಗಳಿಗೆ ಮತ್ತಷ್ಟು ವೇಗ ಸಿಗಲಿದೆ ಎಂದು ಸಂಸದ ಕ್ಯಾ.ಚೌಟ ವಿವರಿದ್ದಾರೆ.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
14-06-26 01:08 pm
HK News Staffer
ದಿನಕ್ಕೆ ಒಂದು ವಾಹನಕ್ಕೆ 200 ಲೀಟರ್ ಡೀಸೆಲ್ ಮಾತ್ರ...
13-06-26 03:01 pm
4,399 ದಿನಗಳ ಸುದೀರ್ಘ ಆಡಳಿತ, ಭಾರತದ ಇತಿಹಾಸದಲ್ಲೇ...
10-06-26 06:42 pm
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
14-06-26 02:37 pm
HK News Staffer
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
13-06-26 09:17 pm
HK News Staffer
ಬೆಂಗಳೂರಿನ ನ್ಯಾಯಮಿತ್ರ ಸಹಕಾರಿ ಬ್ಯಾಂಕ್ ನಲ್ಲಿ ಅನ್...
13-06-26 08:43 pm
ಕಾಲೇಜು ಫೀಸ್ಗೆ ಕೊಟ್ಟ 10 ಸಾವಿರವೇ ಜೀವ ತೆಗೆಯಿತು!...
13-06-26 06:14 pm
ಪತ್ನಿ ಹತ್ಯೆಗೆ ಜೈಲಿನಿಂದಲೇ ಸುಪಾರಿ ; ಬುರ್ಖಾ ಧರಿಸ...
12-06-26 11:58 am
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm