ಬ್ರೇಕಿಂಗ್ ನ್ಯೂಸ್
16-06-26 11:35 am HK News Staffer ಕರಾವಳಿ
ಮಂಗಳೂರು, ಜೂನ್ 15 : ಬಸ್ಗಾಗಿ ಕಾಯುತ್ತಿರುವ ಪ್ರಯಾಣಿಕರು ದೂರದಿಂದ ನೋಡಿದರೆ ನಿಜವಾಗಿಯೂ ಬಸ್ ನಿಂತಿದೆಯೇನೋ ಎಂದು ಭ್ರಮಿಸುವಂತಹ ವಿಶಿಷ್ಟ ಬಸ್ ತಂಗುದಾಣ ಮಂಗಳೂರು ಹೊರವಲಯದ ಗುರುಪುರ ಸಮೀಪದ ಬಂಡಸಾಲೆಯಲ್ಲಿ ನಿರ್ಮಾಣವಾಗಿದ್ದು, ಇದೀಗ ಸಾರ್ವಜನಿಕರ ಗಮನ ಸೆಳೆಯುತ್ತಿದೆ.
ಗುರುಪುರದ ವಿ2 ಗೈಸ್ ಯುವಕ ಸಂಘದ ಸದಸ್ಯರು ತಮ್ಮ ಸಾಮಾಜಿಕ ಕಾಳಜಿ ಹಾಗೂ ಸೃಜನಶೀಲತೆಯನ್ನು ಒಗ್ಗೂಡಿಸಿ, ನಿಜವಾದ ಬಸ್ ಮಾದರಿಯಲ್ಲೇ ಬಸ್ ತಂಗುದಾಣವನ್ನು ವಿನೂತನವಾಗಿ ನಿರ್ಮಿಸಿದ್ದಾರೆ. ವಿಶೇಷ ವಿನ್ಯಾಸ, ಆಕರ್ಷಕ ಬಣ್ಣಗಳ ಬಳಕೆ ಮತ್ತು ಬಸ್ನ ಪ್ರತಿರೂಪದಂತೆ ರೂಪುಗೊಂಡಿರುವ ಈ ತಂಗುದಾಣ ಸ್ಥಳೀಯರ ಮೆಚ್ಚುಗೆಗೆ ಪಾತ್ರವಾಗಿದೆ.
₹7 ಲಕ್ಷ ವೆಚ್ಚದಲ್ಲಿ ನಿರ್ಮಾಣ
ಬಸ್ ತಂಗುದಾಣವನ್ನು ಸುಮಾರು ₹7 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಈ ಹಿಂದೆ ಇದ್ದ ಬಸ್ ನಿಲ್ದಾಣ ಶಿಥಿಲಾವಸ್ಥೆಗೆ ತಲುಪಿದ್ದರಿಂದ, ಸಾರ್ವಜನಿಕರ ಅನುಕೂಲಕ್ಕಾಗಿ ಯುವಕರು ಸ್ವಯಂಪ್ರೇರಿತವಾಗಿ ಮುಂದಾಗಿ ಹೊಸ ತಂಗುದಾಣ ನಿರ್ಮಿಸುವ ಸಂಕಲ್ಪ ಕೈಗೊಂಡಿದ್ದರು. ಅದರ ಫಲವಾಗಿ ಇದೀಗ ಬಂಡಸಾಲೆಗೆ ವಿಶಿಷ್ಟ ಗುರುತನ್ನು ತಂದುಕೊಡುವ ಬಸ್ ಮಾದರಿಯ ತಂಗುದಾಣ ತಲೆ ಎತ್ತಿದೆ.



ಪ್ರಯಾಣಿಕರಿಗೆ ಆಶ್ರಯ, ಪ್ರವಾಸಿಗರಿಗೆ ಆಕರ್ಷಣೆ
ಕೇವಲ ಬಸ್ ಕಾಯುವ ಸ್ಥಳವಾಗಿ ಉಳಿಯದೆ, ಈ ಬಸ್ ತಂಗುದಾಣ ಈಗ ಸೆಲ್ಫಿ ಪ್ರಿಯರು ಹಾಗೂ ಪ್ರವಾಸಿಗರಿಗೂ ಹೊಸ ಆಕರ್ಷಣೆಯ ಕೇಂದ್ರವಾಗಿದೆ. ದೂರದಿಂದ ನೋಡಿದರೆ ರಸ್ತೆಯ ಬದಿಯಲ್ಲಿ ನಿಜವಾದ ಬಸ್ ನಿಂತಿರುವಂತೆ ಕಾಣುವ ಈ ವಿನ್ಯಾಸ ಎಲ್ಲರಲ್ಲೂ ಕುತೂಹಲ ಮೂಡಿಸುತ್ತಿದೆ.
ಯುವಕರ ಸಾಮಾಜಿಕ ಕಾಳಜಿಗೆ ಶ್ಲಾಘನೆ
ಸಾರ್ವಜನಿಕರ ಅಗತ್ಯವನ್ನು ಮನಗಂಡು, ಸ್ವಂತ ಸಂಪನ್ಮೂಲಗಳನ್ನು ಬಳಸಿ ಗ್ರಾಮಕ್ಕೆ ಉಪಯುಕ್ತವಾಗುವ ಶಾಶ್ವತ ಸೌಲಭ್ಯ ನಿರ್ಮಿಸಿರುವ ವಿ2 ಗೈಸ್ ಯುವಕ ಸಂಘದ ಕಾರ್ಯಕ್ಕೆ ಸ್ಥಳೀಯರು ವ್ಯಾಪಕ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಬಂಡಸಾಲೆಯ ಈ ವಿನೂತನ ಬಸ್ ತಂಗುದಾಣ ಈಗ ಗುರುಪುರ ಭಾಗದ ಹೊಸ ಲ್ಯಾಂಡ್ಮಾರ್ಕ್ ಆಗಿ ಗುರುತಿಸಿಕೊಂಡಿದೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm