ಬ್ರೇಕಿಂಗ್ ನ್ಯೂಸ್
06-01-21 08:27 pm Mangaluru Correspondent ಕರಾವಳಿ
ಮಂಗಳೂರು, ಜ.6: ನಗರದ ಪಾಂಡೇಶ್ವರದ ರೈಲ್ವೇ ಗೇಟಿನಲ್ಲಿ ರೈಲು ಬಂದಿರಲಿಲ್ಲ. ಬದಲಿಗೆ, ರೈಲಿನ ಮಾದರಿಯಲ್ಲೇ ಮತ್ತೊಂದು ರಸ್ತೆ ದಾಟುತ್ತಿತ್ತು. ಸ್ಥಳೀಯರು ಇದನ್ನು ಗಮನಿಸಿ, ರಸ್ತೆಯನ್ನು ಒಂದು ಕ್ಷಣ ಬಂದ್ ಮಾಡಿದರು.
ರಾತ್ರಿಯಾಗಿದ್ದರಿಂದ ರೈಲು ಬರದೆ ದಿಢೀರ್ ರಸ್ತೆ ಬಂದ್ ಮಾಡಿದ್ದು ವಾಹನ ಸವಾರರಿಗೆ ಕಿರಿಕಿರಿ ಮಾಡಿತ್ತು. ಸಂಜೆಯ ಧಾವಂತದಲ್ಲಿ ಕೆಲವರು ಹಾರ್ನ್ ಮೊಳಗಿಸಿದರು. ಕೆಲವರು ಏನೆಂದು ಮುಂದೆ ಬಂದು ಅಚ್ಚರಿಯಿಂದ ನೋಡುತ್ತಾ ನಿಂತರು. ನಿಂತವರು ಮಾತ್ರ ಅಚ್ಚರಿಗೊಂಡು ಅಲ್ಲಿಂದ ಕದಲಲಿಲ್ಲ !

ಹೌದು.. ಪಾಂಡೇಶ್ವರದ ರೈಲ್ವೇ ಗೇಟಿನಲ್ಲಿ ಬುಧವಾರ ಸಂಜೆ ಏಳು ಗಂಟೆ ಸುಮಾರಿಗೆ ಹೊಸ ಅತಿಥಿ ಬಂದಿತ್ತು. ನಗರದ ಜನರಿಗೆ ಅಪರೂಪದ ಅತಿಥಿ. ಬೃಹತ್ ಗಾತ್ರದ ಹೆಬ್ಬಾವು ರೈಲ್ವೇ ಗೇಟ್ ಮುಂಭಾಗದಲ್ಲೇ ರಸ್ತೆಯನ್ನು ದಾಟಿತ್ತು. ವಾಹನಗಳ ಭರಾಟೆಯ ಮಧ್ಯೆ ಹೆಬ್ಬಾವು ನಿಶ್ಚಿಂತೆಯಿಂದ ರಸ್ತೆ ದಾಟಿತ್ತು. ಇದನ್ನು ಗಮನಿಸಿದ ಕೆಲವರು ರಸ್ತೆ ತೆರವು ಮಾಡಿಕೊಟ್ಟು ಹಾವು ವಾಹನದ ಅಡಿಗೆ ಬೀಳದಂತೆ ನೋಡಿಕೊಂಡರು.
ಹೆಬ್ಬಾವು ನಿಧಾನಕ್ಕೆ ಗಜಗಾಂಭೀರ್ಯದಲ್ಲಿ ರಸ್ತೆ ದಾಟಿ, ಇನ್ನೊಂದು ಬದಿಗೆ ಸರಿಯಿತು. ಜನ ನೋಡುತ್ತಲೇ ಇದ್ದರು. ಹಿಂದೆ ಇದ್ದ ವಾಹನ ಸವಾರರಿಗೆ ವಿಚಾರ ಗೊತ್ತಾಗುವಾಗ ಹಾವು ಕತ್ತಲಲ್ಲಿ ಮರೆಯಾಗಿತ್ತು.
A Huge python snake was found crossing road near Pandeshwar Railway Track blocking road in Mangalore.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 11:28 am
HK News Staffer
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm