ಬ್ರೇಕಿಂಗ್ ನ್ಯೂಸ್
18-06-26 12:33 pm HK News Staffer ಕರಾವಳಿ
ಮಂಗಳೂರು, ಜೂನ್ 18: ನಗರದ ಬಿಜೈ ನ್ಯೂರೋಡ್, ಬಟ್ಟಗುಡ್ಡೆ, ಕದ್ರಿ, ಚಿಲಿಂಬಿ ಸೇರಿದಂತೆ ಕೆಲವು ಭಾಗಗಳಲ್ಲಿ ಕುಡಿಯಲು ಯೋಗ್ಯವಲ್ಲದ ನೀರು ಸರಬರಾಜು ಆಗಿದ್ದರಿಂದ ಹಲವು ಸಾರ್ವಜನಿಕರ ಆರೋಗ್ಯದಲ್ಲಿ ಸಮಸ್ಯೆ ಕಂಡು ಬಂದಿದ್ದು ಶಾಸಕ ವೇದವ್ಯಾಸ ಕಾಮತ್ ಅವರು ರಾಜ್ಯ ಕಾಂಗ್ರೆಸ್ ನೇತೃತ್ವದ ಪಾಲಿಕೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಈ ಪ್ರದೇಶಗಳ ಬಹುತೇಕ ಮನೆ ಹಾಗೂ ಅಪಾರ್ಟ್ಮೆಂಟ್ ಗಳಿಗೆ, ನೀಲಿ ಬಣ್ಣದಿಂದ ಕೂಡಿದ ವಾಸನೆ ಮಿಶ್ರಿತ ನೀರು ಸರಬರಾಜಾಗಿದೆ ಎಂದು ಸ್ಥಳೀಯ ನಿವಾಸಿಗಳು ದೂರಿದ್ದಾರೆ. ಈ ನೀರನ್ನು ಕುಡಿದ ಅವರಲ್ಲಿ ವಾಂತಿ, ಜ್ವರ, ಭೇದಿ, ಸಹಿಸಲು ಆಗದ ಸುಸ್ತು ಸೇರಿದಂತೆ ಆರೋಗ್ಯದಲ್ಲಿ ತೀವ್ರ ಸಮಸ್ಯೆಯಾಗಿದೆ. ಪಂಪ್ವೆಲ್ ಬಯೋಟೆಕ್ ಲ್ಯಾಬೋರೇಟರಿ ಹಾಗೂ ಬಿಜೈ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಾಡಿದ ಪರೀಕ್ಷೆಯ ನಂತರ ಈ ನೀರು ಕುಡಿಯಲು ಯೋಗ್ಯ ಅಲ್ಲವೇ ಅಲ್ಲ ಎಂಬ ವರದಿ ಬಂದಿರುವುದು ಮತ್ತಷ್ಟು ಜನರ ಆತಂಕಕ್ಕೆ ಕಾರಣವಾಗಿದೆ. ಅಲ್ಲದೇ ಯಾವುದೇ ಕಾರಣಕ್ಕೂ ಮಾಧ್ಯಮಗಳಿಗೆ ಈ ಬಗ್ಗೆ ಮಾಹಿತಿ ಸಿಗದಂತೆ ಅಧಿಕಾರಿಗಳು ಪ್ರಯತ್ನಿಸಿದ್ದು ಯಾಕೆ ಎಂದು ಶಾಸಕರು ಕಳವಳ ವ್ಯಕ್ತಪಡಿಸಿದರು.
ರಾಜ್ಯದ ಆರೋಗ್ಯ ಸಚಿವರು ನಮ್ಮದೇ ಜಿಲ್ಲೆಯವರಾಗಿದ್ದರೂ ಕೂಡಾ ನಮ್ಮ ಜನರಿಗೆ ಆರೋಗ್ಯದ ಬಗ್ಗೆ ಗ್ಯಾರಂಟಿ ಒದಗಿಸಲು ಸಾಧ್ಯವಾಗಿಲ್ಲದಿರುವುದು ದುರಂತ. ಸದ್ಯ ಪಾಲಿಕೆಯಲ್ಲಿ ಯಾವುದೇ ಜನಪ್ರತಿನಿಧಿಗಳು ಇಲ್ಲದೇ ಆಡಳಿತಾಧಿಕಾರಿ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರವೇ ಆಡಳಿತ ನಡೆಸುತ್ತಿದೆ. ಹಾಗಿರುವಾಗ ಜನರ ಸಮಸ್ಯೆ ಕೇಳುವವರೇ ಇಲ್ಲವಾಗಿದೆ. ಸರ್ಕಾರದ, ಪಾಲಿಕೆಯ ಬೇಜವಾಬ್ದಾರಿಗೆ ಜನರು ತೊಂದರೆ ಅನುಭವಿಸುವುದನ್ನು ಯಾವುದೇ ಕಾರಣಕ್ಕೂ ಒಪ್ಪಲು ಸಾಧ್ಯವಿಲ್ಲ. ಕೂಡಲೇ ಇದರ ಹಿಂದಿನ ಕಾರಣ ಪತ್ತೆ ಹಚ್ಚಿ ಸೂಕ್ತ ಕ್ರಮ ಕೈಗೊಳ್ಳಬೇಕು. ಜನರು ಈಗಾಗಲೇ ತಮ್ಮ ಮನೆಯ, ಅಪಾರ್ಟ್ಮೆಂಟ್ ಗಳ ಟಾಂಕಿಯಲ್ಲಿನ ಕಲುಷಿತ ನೀರನ್ನು ಚೆಲ್ಲಿದ್ದು, ಕೂಡಲೇ ಅವರಿಗೆ ಶುದ್ಧ ನೀರು ಪೂರೈಕೆಗೆ ಕ್ರಮ ಕೈಗೊಳ್ಳಬೇಕು ಎಂದು ಇದೇ ವೇಳೆ ಶಾಸಕರು ಆಗ್ರಹಿಸಿದರು.
06-08-26 03:49 pm
HK News Staffer
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅಸಮರ್ಥ, ಛಲವಾದಿ...
04-08-26 09:12 pm
ಸಿದ್ದರಾಮಯ್ಯ ಆಪ್ತ ಎಂಬ ಕಾರಣಕ್ಕೆ ನನಗೆ ಅನ್ಯಾಯ ಆಗಿ...
04-08-26 09:10 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
06-08-26 11:03 pm
Mangaluru Staffer
ಅಯೋಧ್ಯೆ ಕಾಣಿಕೆ ಹಣ ಕಳವು ತೀವ್ರ ಆಘಾತಕಾರಿ, ಯಾವುದೇ...
06-08-26 10:22 pm
ಹಿಂದೂ ದೇವಸ್ಥಾನಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ...
06-08-26 09:33 pm
ಹೆದ್ದಾರಿ ಬದಿ ವ್ಯಾಪಾರಿಗಳ ವಿರುದ್ಧ ಕಾರ್ಯಾಚರಣೆಗಿಳ...
06-08-26 08:09 pm
ಸುರತ್ಕಲ್ ಎನ್ಐಟಿಕೆ ಕಾಲೇಜು ಹಾಸ್ಟೆಲ್ನಲ್ಲಿ ಸ್ವಯ...
05-08-26 08:08 pm
06-08-26 09:31 pm
HK News Staffer
ಲವ್ - ಸೆಕ್ಸ್ ದೋಖಾ ; ಬಳ್ಳಾರಿಯಲ್ಲಿ ಬೆಚ್ಚಿಬೀಳಿಸಿ...
06-08-26 09:31 pm
ಬೆಂಗಳೂರು ; ಒಂದು ತಿಂಗಳ ಹಿಂದೆ ನೇಪಾಳದಿಂದ ಕೆಲಸಕ್ಕ...
06-08-26 06:13 pm
7 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ...
06-08-26 11:48 am
Surathkal Student Death: ಸುರತ್ಕಲ್ ; ವಾಲಿಬಾಲ್...
06-08-26 11:47 am