ಬ್ರೇಕಿಂಗ್ ನ್ಯೂಸ್
18-06-26 12:33 pm HK News Staffer ಕರಾವಳಿ
ಮಂಗಳೂರು, ಜೂನ್ 18: ನಗರದ ಬಿಜೈ ನ್ಯೂರೋಡ್, ಬಟ್ಟಗುಡ್ಡೆ, ಕದ್ರಿ, ಚಿಲಿಂಬಿ ಸೇರಿದಂತೆ ಕೆಲವು ಭಾಗಗಳಲ್ಲಿ ಕುಡಿಯಲು ಯೋಗ್ಯವಲ್ಲದ ನೀರು ಸರಬರಾಜು ಆಗಿದ್ದರಿಂದ ಹಲವು ಸಾರ್ವಜನಿಕರ ಆರೋಗ್ಯದಲ್ಲಿ ಸಮಸ್ಯೆ ಕಂಡು ಬಂದಿದ್ದು ಶಾಸಕ ವೇದವ್ಯಾಸ ಕಾಮತ್ ಅವರು ರಾಜ್ಯ ಕಾಂಗ್ರೆಸ್ ನೇತೃತ್ವದ ಪಾಲಿಕೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಈ ಪ್ರದೇಶಗಳ ಬಹುತೇಕ ಮನೆ ಹಾಗೂ ಅಪಾರ್ಟ್ಮೆಂಟ್ ಗಳಿಗೆ, ನೀಲಿ ಬಣ್ಣದಿಂದ ಕೂಡಿದ ವಾಸನೆ ಮಿಶ್ರಿತ ನೀರು ಸರಬರಾಜಾಗಿದೆ ಎಂದು ಸ್ಥಳೀಯ ನಿವಾಸಿಗಳು ದೂರಿದ್ದಾರೆ. ಈ ನೀರನ್ನು ಕುಡಿದ ಅವರಲ್ಲಿ ವಾಂತಿ, ಜ್ವರ, ಭೇದಿ, ಸಹಿಸಲು ಆಗದ ಸುಸ್ತು ಸೇರಿದಂತೆ ಆರೋಗ್ಯದಲ್ಲಿ ತೀವ್ರ ಸಮಸ್ಯೆಯಾಗಿದೆ. ಪಂಪ್ವೆಲ್ ಬಯೋಟೆಕ್ ಲ್ಯಾಬೋರೇಟರಿ ಹಾಗೂ ಬಿಜೈ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಾಡಿದ ಪರೀಕ್ಷೆಯ ನಂತರ ಈ ನೀರು ಕುಡಿಯಲು ಯೋಗ್ಯ ಅಲ್ಲವೇ ಅಲ್ಲ ಎಂಬ ವರದಿ ಬಂದಿರುವುದು ಮತ್ತಷ್ಟು ಜನರ ಆತಂಕಕ್ಕೆ ಕಾರಣವಾಗಿದೆ. ಅಲ್ಲದೇ ಯಾವುದೇ ಕಾರಣಕ್ಕೂ ಮಾಧ್ಯಮಗಳಿಗೆ ಈ ಬಗ್ಗೆ ಮಾಹಿತಿ ಸಿಗದಂತೆ ಅಧಿಕಾರಿಗಳು ಪ್ರಯತ್ನಿಸಿದ್ದು ಯಾಕೆ ಎಂದು ಶಾಸಕರು ಕಳವಳ ವ್ಯಕ್ತಪಡಿಸಿದರು.
ರಾಜ್ಯದ ಆರೋಗ್ಯ ಸಚಿವರು ನಮ್ಮದೇ ಜಿಲ್ಲೆಯವರಾಗಿದ್ದರೂ ಕೂಡಾ ನಮ್ಮ ಜನರಿಗೆ ಆರೋಗ್ಯದ ಬಗ್ಗೆ ಗ್ಯಾರಂಟಿ ಒದಗಿಸಲು ಸಾಧ್ಯವಾಗಿಲ್ಲದಿರುವುದು ದುರಂತ. ಸದ್ಯ ಪಾಲಿಕೆಯಲ್ಲಿ ಯಾವುದೇ ಜನಪ್ರತಿನಿಧಿಗಳು ಇಲ್ಲದೇ ಆಡಳಿತಾಧಿಕಾರಿ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರವೇ ಆಡಳಿತ ನಡೆಸುತ್ತಿದೆ. ಹಾಗಿರುವಾಗ ಜನರ ಸಮಸ್ಯೆ ಕೇಳುವವರೇ ಇಲ್ಲವಾಗಿದೆ. ಸರ್ಕಾರದ, ಪಾಲಿಕೆಯ ಬೇಜವಾಬ್ದಾರಿಗೆ ಜನರು ತೊಂದರೆ ಅನುಭವಿಸುವುದನ್ನು ಯಾವುದೇ ಕಾರಣಕ್ಕೂ ಒಪ್ಪಲು ಸಾಧ್ಯವಿಲ್ಲ. ಕೂಡಲೇ ಇದರ ಹಿಂದಿನ ಕಾರಣ ಪತ್ತೆ ಹಚ್ಚಿ ಸೂಕ್ತ ಕ್ರಮ ಕೈಗೊಳ್ಳಬೇಕು. ಜನರು ಈಗಾಗಲೇ ತಮ್ಮ ಮನೆಯ, ಅಪಾರ್ಟ್ಮೆಂಟ್ ಗಳ ಟಾಂಕಿಯಲ್ಲಿನ ಕಲುಷಿತ ನೀರನ್ನು ಚೆಲ್ಲಿದ್ದು, ಕೂಡಲೇ ಅವರಿಗೆ ಶುದ್ಧ ನೀರು ಪೂರೈಕೆಗೆ ಕ್ರಮ ಕೈಗೊಳ್ಳಬೇಕು ಎಂದು ಇದೇ ವೇಳೆ ಶಾಸಕರು ಆಗ್ರಹಿಸಿದರು.
18-06-26 01:25 pm
HK News Staffer
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
18-06-26 01:23 pm
HK News Staffer
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm