ಬ್ರೇಕಿಂಗ್ ನ್ಯೂಸ್
19-06-26 12:24 pm HK News Staffer ಕರಾವಳಿ
ಮಂಗಳೂರು, ಜೂನ್ 19: ಅಸ್ಸಾಂ, ಬಿಹಾರ ಮೂಲದ ಕಾರ್ಮಿಕರ ಪೂರ್ವಾಪರ ತಿಳಿದುಕೊಳ್ಳದೆ, ಹಿರಿಯ ಅಧಿಕಾರಿಗಳ ಅನುಮತಿ ಇಲ್ಲದೆ 30ಕ್ಕೂ ಹೆಚ್ಚು ಮಂದಿಗೆ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿಕೇಟ್ ನೀಡಿರುವ ಆರೋಪದಲ್ಲಿ ಬಜ್ಪೆ ಠಾಣೆಯ ಇಬ್ಬರು ಪೊಲೀಸ್ ಸಿಬಂದಿಯನ್ನು ಕಮಿಷನರ್ ಸುಧೀರ್ ರೆಡ್ಡಿ ಅಮಾನತು ಮಾಡಿದ್ದಾರೆ.
ಮಂಗಳೂರಿನ ಬಜಪೆ ಠಾಣೆಯ ಮಹಿಳಾ ಸಿಬ್ಬಂದಿ ಆಶಾ ಮತ್ತು ಹೆಡ್ ಕಾನ್ಸ್ ಟೇಬಲ್ ಮಂಜುನಾಥ್ ಅಮಾನತು ಆದವರು. ಇವರು ಕಳೆದೊಂದು ವರ್ಷದಲ್ಲಿ 31 ಮಂದಿಗೆ PCC (ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿಕೇಟ್) ನೀಡಿದ್ದಾರೆಂಬ ಆರೋಪ ಕೇಳಿಬಂದಿದೆ. ಉನ್ನತ ಮಟ್ಟದ ತನಿಖಾ ಏಜನ್ಸಿಯಿಂದ ಈ ರೀತಿಯ ದುರುಪಯೋಗ ಆಗಿರುವ ಬಗ್ಗೆ ಮಾಹಿತಿ ಪಡೆದ ಮಂಗಳೂರಿನ ಪೊಲೀಸ್ ಅಧಿಕಾರಿಗಳು ಪ್ರಾಥಮಿಕ ತನಿಖೆ ನಡೆಸಿ ಇಬ್ಬರು ಸಿಬಂದಿಯನ್ನು ಸಸ್ಪೆಂಡ್ ಮಾಡಿದ್ದಾರೆ.
ಕ್ರಿಮಿನಲ್ ಹಿನ್ನೆಲೆ, ದೇಶ ವಿರೋಧಿ ಕೃತ್ಯಗಳಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಅಸ್ಸಾಂ ಮೂಲದ ಕೆಲವು ಕಾರ್ಮಿಕ ಯುವಕರಿಗೆ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿಕೇಟ್ ನೀಡಿದ್ದಾರೆಂಬ ವಿಚಾರಗಳಿದ್ದು ಇಲಾಖೆಯ ಘೋರ ವೈಫಲ್ಯದ ಬಗ್ಗೆ ಚರ್ಚೆಗೀಡಾಗಿದೆ. ಇದರ ಬಗ್ಗೆ ಪೊಲೀಸ್ ಕಮಿಷನರ್ ತನಿಖೆಯ ಹೊಣೆಯನ್ನು ಮಂಗಳೂರು ಉತ್ತರ ಎಸಿಪಿ ಶ್ರೀಕಾಂತ್ ಅವರಿಗೆ ವಹಿಸಿದ್ದಾರೆ. ತನಿಖೆಯ ಬಳಿಕ ಖಚಿತ ಮಾಹಿತಿಯನ್ನು ನೀಡುವುದಾಗಿ ಕಮಿಷನರ್ ಸುಧೀರ್ ರೆಡ್ಡಿ ತಿಳಿಸಿದ್ದಾರೆ. ಎಂಆರ್ ಪಿಎಲ್ ಸಂಸ್ಥೆಯಲ್ಲಿ ಗುತ್ತಿಗೆ ಕಾರ್ಮಿಕರಾಗಿ ಬಂದು ತಾತ್ಕಾಲಿಕ ವಿಳಾಸ ಹೊಂದಿದ್ದವರು, ಪಾಸ್ ಪೋರ್ಟ್ ಮಾಡಿಸುವ ಉದ್ದೇಶದಿಂದ ಮಧ್ಯವರ್ತಿಗಳನ್ನು ಬಳಸಿಕೊಂಡು ಬಜಪೆ ಠಾಣೆಯಿಂದ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿಕೇಟ್ ಪಡೆದಿದ್ದರು ಎನ್ನಲಾಗಿದೆ. ಆದರೆ ಈ ರೀತಿ ಸರ್ಟಿಫಿಕೇಟ್ ಪಡೆದಿರುವ 31 ಮಂದಿಯಲ್ಲಿ ಕ್ರಿಮಿನಲ್ ಹಾಗು ದೇಶ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾವರಿದ್ದಾರೆಂಬ ಮಾಹಿತಿಗಳಿದ್ದು ಕೇಂದ್ರ ತನಿಖಾ ಏಜನ್ಸಿಯೊಂದು ಇಲಾಖೆಯ ಲೋಪದ ಬಗ್ಗೆ ಮಂಗಳೂರು ಪೊಲೀಸರನ್ನು ಪ್ರಶ್ನೆ ಮಾಡಿತ್ತು.
ಇಲಾಖಾ ತನಿಖೆ ಸಂದರ್ಭದಲ್ಲಿ ಬಜ್ಪೆ ಠಾಣಾಧಿಕಾರಿಗೆ ತಿಳಿಸದೆ, ಅವರ ಪಾಸ್ವರ್ಡ್ ದುರುಪಯೋಗ ಪಡಿಸಿ ಸಿಬ್ಬಂದಿಗಳೇ ಕ್ಲಿಯರೆನ್ಸ್ ನೀಡಿದ್ದಾರೆ ಎನ್ನುವ ಮಾಹಿತಿ ತಿಳಿದುಬಂದಿದೆ. ಇದಕ್ಕಾಗಿ ಇಬ್ಬರು ಪೊಲೀಸರು ಮಧ್ಯವರ್ತಿ ಭರತ್ ಎಕ್ಕಾರ್ ಹಾಗು ಮಮತಾ ಎಂಬವರಿಂದ ಹಣ ಪಡೆದಿದ್ದಾರೆಂಬ ಮಾಹಿತಿಯಿದೆ. ಪ್ರಕರಣಕ್ಕೆ ಸಂಬಂಧಿಸಿ ಭರತ್ ಹಾಗು ಮಮತಾ ಅವರನ್ನು ಬಜ್ಪೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನೆ ಬಗ್ಗೆ BNS ಕಲಂ 336(2),(3), 340(2), 316(5),318(4) ಅಡಿ ಪ್ರಕರಣ ದಾಖಲಾಗಿದೆ.
06-08-26 03:49 pm
HK News Staffer
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅಸಮರ್ಥ, ಛಲವಾದಿ...
04-08-26 09:12 pm
ಸಿದ್ದರಾಮಯ್ಯ ಆಪ್ತ ಎಂಬ ಕಾರಣಕ್ಕೆ ನನಗೆ ಅನ್ಯಾಯ ಆಗಿ...
04-08-26 09:10 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
06-08-26 11:03 pm
Mangaluru Staffer
ಅಯೋಧ್ಯೆ ಕಾಣಿಕೆ ಹಣ ಕಳವು ತೀವ್ರ ಆಘಾತಕಾರಿ, ಯಾವುದೇ...
06-08-26 10:22 pm
ಹಿಂದೂ ದೇವಸ್ಥಾನಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ...
06-08-26 09:33 pm
ಹೆದ್ದಾರಿ ಬದಿ ವ್ಯಾಪಾರಿಗಳ ವಿರುದ್ಧ ಕಾರ್ಯಾಚರಣೆಗಿಳ...
06-08-26 08:09 pm
ಸುರತ್ಕಲ್ ಎನ್ಐಟಿಕೆ ಕಾಲೇಜು ಹಾಸ್ಟೆಲ್ನಲ್ಲಿ ಸ್ವಯ...
05-08-26 08:08 pm
06-08-26 09:31 pm
HK News Staffer
ಲವ್ - ಸೆಕ್ಸ್ ದೋಖಾ ; ಬಳ್ಳಾರಿಯಲ್ಲಿ ಬೆಚ್ಚಿಬೀಳಿಸಿ...
06-08-26 09:31 pm
ಬೆಂಗಳೂರು ; ಒಂದು ತಿಂಗಳ ಹಿಂದೆ ನೇಪಾಳದಿಂದ ಕೆಲಸಕ್ಕ...
06-08-26 06:13 pm
7 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ...
06-08-26 11:48 am
Surathkal Student Death: ಸುರತ್ಕಲ್ ; ವಾಲಿಬಾಲ್...
06-08-26 11:47 am