ಬ್ರೇಕಿಂಗ್ ನ್ಯೂಸ್
06-01-21 10:34 pm Mangaluru Correspondent ಕರಾವಳಿ
ಕೊಣಾಜೆ, ಜ .6: ಮುಡಿಪು ಸಮೀಪದ ಬಾಳೆಪುಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಂಡಿಕಟ್ಟ ಗಣಿಗಾರಿಕೆ ಚಟುವಟಿಕೆ ಪ್ರದೇಶಕ್ಕೆ ಗಣಿ ಮತ್ತು ಭೂ ವಿಜ್ಞಾನ ಸಚಿವರಾದ ಸಿ.ಸಿ. ಪಾಟೀಲ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸಚಿವರು ಗಣಿಗಾರಿಕೆ ಹಾಗೂ ಅಕ್ರಮ ಮಣ್ಣು ಸಾಗಾಟ ಆರೋಪ ವಿಷಯಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕುಮಾರ್ ಅವರಿಂದ ಮಾಹಿತಿ ಪಡೆದುಕೊಂಡರು.
ಈ ಸಂದರ್ಭದಲ್ಲಿ ಗಣಿಗಾರಿಕೆ ಪ್ರದೇಶದ ಕುರಿತು ವಿವರಿಸಿದ ಜಿಲ್ಲಾಧಿಕಾರಿಯವರು, ಇದು ಗ್ರಾಮೀಣ ಪ್ರದೇಶವಾಗಿದ್ದು, ಈಗಾಗಲೇ ಈ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆ ನಿಲ್ಲಿಸಲಾಗಿದೆ. ನೆಲ ಸಮತಟ್ಟು ಮಾಡಲು ಪರವಾನಿಗೆ ಪಡೆದುಕೊಂಡು ಅದಕ್ಕಿಂತ ವಿಸ್ತಾರವಾದ ಜಾಗದಲ್ಲಿ ಸಮತಟ್ಟು ಮಾಡಿ, ಮಣ್ಣು ಸಾಗಾಟ ಮಾಡಿದ ಆರೋಪ ಕೇಳಿಬಂದಿದೆ. ಅದಕ್ಕಾಗಿ ಕಾನೂನು ಕ್ರಮ ತೆಗೆದುಕೊಂಡು ತನಿಖೆ ನಡೆಸಲಾಗುತ್ತಿದೆ ಎಂದರು.
ಬಳಿಕ ಈ ಬಗ್ಗೆ ಮಾತನಾಡಿದ ಸಚಿವ ಸಿ.ಸಿ.ಪಾಟೀಲ, ಉತ್ತರ ಕನ್ನಡ, ಬೀದರ್ ಉಡುಪಿ, ದಕ್ಷಿಣ ಕನ್ನಡದಲ್ಲಿ ಇಂತಹ ಗಣಿಗಾರಿಕೆ ವಿಷಯಕ್ಕೆ ಸಂಬಂಧಿಸಿದಂತೆ ಸಮಸ್ಯೆಗಳು ಹೆಚ್ಚಿವೆ. ಗಣಿಗಾರಿಕೆ ವಿವಾದ, ಸಮಸ್ಯೆಗಳಿಗೆ ಸಂಬಂಧಿಸಿದಂತೆ ನ್ಯಾಯಯುತವಾಗಿ ಕ್ರಮ ತೆಗೆದುಕೊಂಡು ಮುನ್ನಡೆಯಬೇಕಿದೆ ಎಂದರು.
ಈ ಸಂದರ್ಭದಲ್ಲಿ ಮಂಗಳೂರು ಉಪ ವಿಭಾಗಾಧಿಕಾರಿ ಮದನ್ ಮೋಹನ್, ತಹಶಿಲ್ದಾರ್ ಗುರುಪ್ರಸಾದ್, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಪ್ರಭಾರ ಉಪನಿರ್ದೇಶಕ ನಿರಂಜನ್, ಭೂ ಹಾಗೂ ಗಣಿ ಇಲಾಖೆಯ ಎಂಜಿನಿಯರ್ ಸುಷ್ಮಾ, ಬಾಳೆಪುಣಿ ಗ್ರಾಮ ಪಂಚಾಯಿತಿ ಪಿಡಿಒ ಸುನೀಲ್, ಕೊಣಾಜೆ ಠಾಣೆಯ ಪಿಎಸ್ಐ ಯೋಗೀಶ್ವರನ್ ಮೊದಲಾದವರು ಉಪಸ್ಥಿತರಿದ್ದರು.
Minister of Mines and Geology C C Patil visited mining centres in Mudipu, Konaje in Mangalore.
09-05-26 10:41 pm
HK News Desk
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
09-05-26 12:06 pm
HK News Staffer
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am