ಬ್ರೇಕಿಂಗ್ ನ್ಯೂಸ್
06-01-21 10:34 pm Mangaluru Correspondent ಕರಾವಳಿ
ಕೊಣಾಜೆ, ಜ .6: ಮುಡಿಪು ಸಮೀಪದ ಬಾಳೆಪುಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಂಡಿಕಟ್ಟ ಗಣಿಗಾರಿಕೆ ಚಟುವಟಿಕೆ ಪ್ರದೇಶಕ್ಕೆ ಗಣಿ ಮತ್ತು ಭೂ ವಿಜ್ಞಾನ ಸಚಿವರಾದ ಸಿ.ಸಿ. ಪಾಟೀಲ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸಚಿವರು ಗಣಿಗಾರಿಕೆ ಹಾಗೂ ಅಕ್ರಮ ಮಣ್ಣು ಸಾಗಾಟ ಆರೋಪ ವಿಷಯಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕುಮಾರ್ ಅವರಿಂದ ಮಾಹಿತಿ ಪಡೆದುಕೊಂಡರು.
ಈ ಸಂದರ್ಭದಲ್ಲಿ ಗಣಿಗಾರಿಕೆ ಪ್ರದೇಶದ ಕುರಿತು ವಿವರಿಸಿದ ಜಿಲ್ಲಾಧಿಕಾರಿಯವರು, ಇದು ಗ್ರಾಮೀಣ ಪ್ರದೇಶವಾಗಿದ್ದು, ಈಗಾಗಲೇ ಈ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆ ನಿಲ್ಲಿಸಲಾಗಿದೆ. ನೆಲ ಸಮತಟ್ಟು ಮಾಡಲು ಪರವಾನಿಗೆ ಪಡೆದುಕೊಂಡು ಅದಕ್ಕಿಂತ ವಿಸ್ತಾರವಾದ ಜಾಗದಲ್ಲಿ ಸಮತಟ್ಟು ಮಾಡಿ, ಮಣ್ಣು ಸಾಗಾಟ ಮಾಡಿದ ಆರೋಪ ಕೇಳಿಬಂದಿದೆ. ಅದಕ್ಕಾಗಿ ಕಾನೂನು ಕ್ರಮ ತೆಗೆದುಕೊಂಡು ತನಿಖೆ ನಡೆಸಲಾಗುತ್ತಿದೆ ಎಂದರು.
ಬಳಿಕ ಈ ಬಗ್ಗೆ ಮಾತನಾಡಿದ ಸಚಿವ ಸಿ.ಸಿ.ಪಾಟೀಲ, ಉತ್ತರ ಕನ್ನಡ, ಬೀದರ್ ಉಡುಪಿ, ದಕ್ಷಿಣ ಕನ್ನಡದಲ್ಲಿ ಇಂತಹ ಗಣಿಗಾರಿಕೆ ವಿಷಯಕ್ಕೆ ಸಂಬಂಧಿಸಿದಂತೆ ಸಮಸ್ಯೆಗಳು ಹೆಚ್ಚಿವೆ. ಗಣಿಗಾರಿಕೆ ವಿವಾದ, ಸಮಸ್ಯೆಗಳಿಗೆ ಸಂಬಂಧಿಸಿದಂತೆ ನ್ಯಾಯಯುತವಾಗಿ ಕ್ರಮ ತೆಗೆದುಕೊಂಡು ಮುನ್ನಡೆಯಬೇಕಿದೆ ಎಂದರು.
ಈ ಸಂದರ್ಭದಲ್ಲಿ ಮಂಗಳೂರು ಉಪ ವಿಭಾಗಾಧಿಕಾರಿ ಮದನ್ ಮೋಹನ್, ತಹಶಿಲ್ದಾರ್ ಗುರುಪ್ರಸಾದ್, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಪ್ರಭಾರ ಉಪನಿರ್ದೇಶಕ ನಿರಂಜನ್, ಭೂ ಹಾಗೂ ಗಣಿ ಇಲಾಖೆಯ ಎಂಜಿನಿಯರ್ ಸುಷ್ಮಾ, ಬಾಳೆಪುಣಿ ಗ್ರಾಮ ಪಂಚಾಯಿತಿ ಪಿಡಿಒ ಸುನೀಲ್, ಕೊಣಾಜೆ ಠಾಣೆಯ ಪಿಎಸ್ಐ ಯೋಗೀಶ್ವರನ್ ಮೊದಲಾದವರು ಉಪಸ್ಥಿತರಿದ್ದರು.
Minister of Mines and Geology C C Patil visited mining centres in Mudipu, Konaje in Mangalore.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 11:28 am
HK News Staffer
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm