ಬ್ರೇಕಿಂಗ್ ನ್ಯೂಸ್
20-06-26 10:25 pm HK News Staffer ಕರಾವಳಿ
ಪುತ್ತೂರು, ಜೂನ್ 20: ಮೈಸೂರಿನಲ್ಲಿ ನಡೆಯುವ ವಿಶ್ವಪ್ರಸಿದ್ದ ದಸರಾಗೆ ಈ ಬಾರಿ ಕಂಬಳ ನಡೆಸುವಂತೆ ಮತ್ತು ಅದಕ್ಕೆ ಬೇಕಾದ ಎಲ್ಲಾ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಶಾಸಕ ಅಶೋಕ್ ರೈ ಅವರಿಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೂಚನೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಕಂಬಳ ನಡೆಸುವ ಮೂಲಕ ಕಂಬಳ ಕ್ರೀಡೆಯನ್ನು ಜಗತ್ತಿಗೆ ಪರಿಚಯಿಸಿದ ಮತ್ತು ಯಶಸ್ವಿಯಾಗಿ ಕಂಬಳ ನಡೆಸಿದ ಖ್ಯಾತಿ ಅಶೋಕ್ ರೈ ಅವರಿಗಿದೆ. ಕಳೆದ ಬಾರಿ ಪುತ್ತೂರಿಗೆ ಬಂದಿದ್ದ ಡಿಕೆ ಶಿವಕುಮಾರ್ ಅವರು ಮೈಸೂರು ದಸರಾದಲ್ಲಿ ಕಂಬಳ ನಡೆಸುವ ಬಗ್ಗೆ ಮಾತನಾಡಿದ್ದರು. ಇದೀಗ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿದ ಅಶೋಕ್ ರೈಯವರಿಗೆ ಕಂಬಳ ನಡೆಸಲು ಸೂಚನೆ ನೀಡಿದ್ದಾರೆ. ಈ ಬಾರಿ ಮೈಸೂರು ದಸರಾ ವೇಳೆ ಕಂಬಳ ನಡೆಯಲಿದೆ. ಈಗಾಗಲೇ ಒಂದು ಸುತ್ತಿನ ಅಧಿಕಾರಿಗಳ ಸಭೆಯನ್ನು ಕರೆಯಲಾಗಿದೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ.
ಮೈಸೂರಿನ ಜಯಲಕ್ಷ್ಮೀ ಪುರಂನ ಪ್ರೀಮಿಯರ್ ಸ್ಟುಡಿಯೋ ಬಳಿ ಇರುವ ಸುಮಾರು 17 ಎಕ್ರೆ ಜಾಗದಲ್ಲಿ ಕಂಬಳ ನಡೆಯಲಿದೆ. ಅಕ್ಟೋಬರ್ ತಿಂಗಳ 18, 19 ರಂದು ಎರಡು ದಿನ ಕಂಬಳ ನಡೆಯಲಿದೆ. ಕಂಬಳ ನಡೆಸುವ ಬಗ್ಗೆ ಸಿಎಂ ಸೂಚನೆಯಂತೆ ಮೈಸೂರಿನಲ್ಲಿ ಅಧಿಕಾರಿಗಳ ಸಭೆ ನಡೆದಿದೆ. ಸಭೆಯಲ್ಲಿ ಜಿಲ್ಲೆಯ ಕಂಬಳ ಪ್ರಮುಖರು ಭಾಗವಹಿಸಿದ್ದರು ಎಂದು ಅಶೋಕ್ ರೈ ತಿಳಿಸಿದ್ದಾರೆ.
ಎರಡನೇ ಹಂತದ ಸಭೆ ಮುಂದಿನ ಗುರುವಾರ ಮೈಸೂರಿನಲ್ಲಿ ನಡೆಯಲಿದ್ದು ಈ ಸಭೆಯಲ್ಲಿ ಶಾಸಕ ಅಶೋಕ್ ರೈ, ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ಸಹಿತ ಪ್ರಮುಖ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಕಳೆದ ಬಾರಿ ಮೈಸೂರು ದಸರಾಗೆ ಕಂಬಳ ನಡೆಸುವಂತೆ ಡೆಪ್ಯುಟಿ ಸಿಎಂ ಆಗಿದ್ದ ಡಿಕೆಶಿಯವರು ಕೇಳಿಕೊಂಡಿದ್ದರು, ಬಳಿಕ ಕೊನೇ ಹಂತದಲ್ಲಿ ಕೈಬಿಡಲಾಗಿತ್ತು. ಈ ಬಾರಿ ಕಂಬಳ ನಡೆಸುವಂತೆ ಸಿಎಂ ಆಗಿರುವ ಡಿಕೆಶಿ ಸೂಚನೆ ನೀಡಿದ್ದಾರೆ. ಕಂಬಳ ಖಂಡಿತವಾಗಿಯೂ ನಡೆಯಲಿದೆ. ಜಾಗವನ್ನು ನಿಗದಿಪಡಿಸಲಾಗಿದೆ. ಬೆಂಗಳೂರಿನ ಕಂಬಳದಂತೆ ಮೈಸೂರು ದಸರಾ ಕಂಬಳ ವಿಶ್ವ ವಿಖ್ಯಾತಿ ಪಡೆಯಲಿದ್ದು ತುಳು ನಾಡಿನ ಜನಪದ ಕ್ರೀಡೆಯನ್ನು ಜಗತ್ತಿಗೆ ಪರಿಚಯಿಸಿದ ಹೆಮ್ಮೆ ನಮಗೆ ಸಿಗಲಿದೆ ಎಂದಿದ್ದಾರೆ.
20-06-26 06:40 pm
HK News Staffer
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 10:25 pm
HK News Staffer
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm