ಬ್ರೇಕಿಂಗ್ ನ್ಯೂಸ್
20-06-26 10:25 pm HK News Staffer ಕರಾವಳಿ
ಪುತ್ತೂರು, ಜೂನ್ 20: ಮೈಸೂರಿನಲ್ಲಿ ನಡೆಯುವ ವಿಶ್ವಪ್ರಸಿದ್ದ ದಸರಾಗೆ ಈ ಬಾರಿ ಕಂಬಳ ನಡೆಸುವಂತೆ ಮತ್ತು ಅದಕ್ಕೆ ಬೇಕಾದ ಎಲ್ಲಾ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಶಾಸಕ ಅಶೋಕ್ ರೈ ಅವರಿಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೂಚನೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಕಂಬಳ ನಡೆಸುವ ಮೂಲಕ ಕಂಬಳ ಕ್ರೀಡೆಯನ್ನು ಜಗತ್ತಿಗೆ ಪರಿಚಯಿಸಿದ ಮತ್ತು ಯಶಸ್ವಿಯಾಗಿ ಕಂಬಳ ನಡೆಸಿದ ಖ್ಯಾತಿ ಅಶೋಕ್ ರೈ ಅವರಿಗಿದೆ. ಕಳೆದ ಬಾರಿ ಪುತ್ತೂರಿಗೆ ಬಂದಿದ್ದ ಡಿಕೆ ಶಿವಕುಮಾರ್ ಅವರು ಮೈಸೂರು ದಸರಾದಲ್ಲಿ ಕಂಬಳ ನಡೆಸುವ ಬಗ್ಗೆ ಮಾತನಾಡಿದ್ದರು. ಇದೀಗ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿದ ಅಶೋಕ್ ರೈಯವರಿಗೆ ಕಂಬಳ ನಡೆಸಲು ಸೂಚನೆ ನೀಡಿದ್ದಾರೆ. ಈ ಬಾರಿ ಮೈಸೂರು ದಸರಾ ವೇಳೆ ಕಂಬಳ ನಡೆಯಲಿದೆ. ಈಗಾಗಲೇ ಒಂದು ಸುತ್ತಿನ ಅಧಿಕಾರಿಗಳ ಸಭೆಯನ್ನು ಕರೆಯಲಾಗಿದೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ.
ಮೈಸೂರಿನ ಜಯಲಕ್ಷ್ಮೀ ಪುರಂನ ಪ್ರೀಮಿಯರ್ ಸ್ಟುಡಿಯೋ ಬಳಿ ಇರುವ ಸುಮಾರು 17 ಎಕ್ರೆ ಜಾಗದಲ್ಲಿ ಕಂಬಳ ನಡೆಯಲಿದೆ. ಅಕ್ಟೋಬರ್ ತಿಂಗಳ 18, 19 ರಂದು ಎರಡು ದಿನ ಕಂಬಳ ನಡೆಯಲಿದೆ. ಕಂಬಳ ನಡೆಸುವ ಬಗ್ಗೆ ಸಿಎಂ ಸೂಚನೆಯಂತೆ ಮೈಸೂರಿನಲ್ಲಿ ಅಧಿಕಾರಿಗಳ ಸಭೆ ನಡೆದಿದೆ. ಸಭೆಯಲ್ಲಿ ಜಿಲ್ಲೆಯ ಕಂಬಳ ಪ್ರಮುಖರು ಭಾಗವಹಿಸಿದ್ದರು ಎಂದು ಅಶೋಕ್ ರೈ ತಿಳಿಸಿದ್ದಾರೆ.
ಎರಡನೇ ಹಂತದ ಸಭೆ ಮುಂದಿನ ಗುರುವಾರ ಮೈಸೂರಿನಲ್ಲಿ ನಡೆಯಲಿದ್ದು ಈ ಸಭೆಯಲ್ಲಿ ಶಾಸಕ ಅಶೋಕ್ ರೈ, ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ಸಹಿತ ಪ್ರಮುಖ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಕಳೆದ ಬಾರಿ ಮೈಸೂರು ದಸರಾಗೆ ಕಂಬಳ ನಡೆಸುವಂತೆ ಡೆಪ್ಯುಟಿ ಸಿಎಂ ಆಗಿದ್ದ ಡಿಕೆಶಿಯವರು ಕೇಳಿಕೊಂಡಿದ್ದರು, ಬಳಿಕ ಕೊನೇ ಹಂತದಲ್ಲಿ ಕೈಬಿಡಲಾಗಿತ್ತು. ಈ ಬಾರಿ ಕಂಬಳ ನಡೆಸುವಂತೆ ಸಿಎಂ ಆಗಿರುವ ಡಿಕೆಶಿ ಸೂಚನೆ ನೀಡಿದ್ದಾರೆ. ಕಂಬಳ ಖಂಡಿತವಾಗಿಯೂ ನಡೆಯಲಿದೆ. ಜಾಗವನ್ನು ನಿಗದಿಪಡಿಸಲಾಗಿದೆ. ಬೆಂಗಳೂರಿನ ಕಂಬಳದಂತೆ ಮೈಸೂರು ದಸರಾ ಕಂಬಳ ವಿಶ್ವ ವಿಖ್ಯಾತಿ ಪಡೆಯಲಿದ್ದು ತುಳು ನಾಡಿನ ಜನಪದ ಕ್ರೀಡೆಯನ್ನು ಜಗತ್ತಿಗೆ ಪರಿಚಯಿಸಿದ ಹೆಮ್ಮೆ ನಮಗೆ ಸಿಗಲಿದೆ ಎಂದಿದ್ದಾರೆ.
06-08-26 03:49 pm
HK News Staffer
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅಸಮರ್ಥ, ಛಲವಾದಿ...
04-08-26 09:12 pm
ಸಿದ್ದರಾಮಯ್ಯ ಆಪ್ತ ಎಂಬ ಕಾರಣಕ್ಕೆ ನನಗೆ ಅನ್ಯಾಯ ಆಗಿ...
04-08-26 09:10 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
06-08-26 11:03 pm
Mangaluru Staffer
ಅಯೋಧ್ಯೆ ಕಾಣಿಕೆ ಹಣ ಕಳವು ತೀವ್ರ ಆಘಾತಕಾರಿ, ಯಾವುದೇ...
06-08-26 10:22 pm
ಹಿಂದೂ ದೇವಸ್ಥಾನಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ...
06-08-26 09:33 pm
ಹೆದ್ದಾರಿ ಬದಿ ವ್ಯಾಪಾರಿಗಳ ವಿರುದ್ಧ ಕಾರ್ಯಾಚರಣೆಗಿಳ...
06-08-26 08:09 pm
ಸುರತ್ಕಲ್ ಎನ್ಐಟಿಕೆ ಕಾಲೇಜು ಹಾಸ್ಟೆಲ್ನಲ್ಲಿ ಸ್ವಯ...
05-08-26 08:08 pm
06-08-26 09:31 pm
HK News Staffer
ಲವ್ - ಸೆಕ್ಸ್ ದೋಖಾ ; ಬಳ್ಳಾರಿಯಲ್ಲಿ ಬೆಚ್ಚಿಬೀಳಿಸಿ...
06-08-26 09:31 pm
ಬೆಂಗಳೂರು ; ಒಂದು ತಿಂಗಳ ಹಿಂದೆ ನೇಪಾಳದಿಂದ ಕೆಲಸಕ್ಕ...
06-08-26 06:13 pm
7 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ...
06-08-26 11:48 am
Surathkal Student Death: ಸುರತ್ಕಲ್ ; ವಾಲಿಬಾಲ್...
06-08-26 11:47 am