ಬ್ರೇಕಿಂಗ್ ನ್ಯೂಸ್
25-06-26 10:48 pm HK News Staffer ಕರಾವಳಿ
ಮಂಗಳೂರು, ಜೂ.25: ಮಾದಕ ವಸ್ತುಗಳ ಮಾರಾಟ ಮತ್ತು ಸೇವನೆಯನ್ನು ನಿಯಂತ್ರಿಸಲು ಪೊಲೀಸರೊಂದಿಗೆ ಸಾರ್ವಜನಿಕರು ಕೈಜೋಡಿಸಿದಾಗ ಸಾಧ್ಯ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.
ಅಂತರರಾಷ್ಟ್ರೀಯ ಮಾದಕದ್ರವ್ಯ ದುರುಪಯೋಗ ಮತ್ತು ಅಕ್ರಮ ಸಾಗಣೆ ವಿರೋಧಿ ದಿನದ ಅಂಗವಾಗಿ ಮಂಗಳೂರು ನಗರ ಪೊಲೀಸ್ ವತಿಯಿಂದ ಯೆನೆಪೋಯ ಶಿಕ್ಷಣ ಸಂಸ್ಥೆ ಸಹಯೋಗದಲ್ಲಿ ಗುರುವಾರ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಪೋಷಕರು ಮತ್ತು ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯ ವಿರೋಧಿ ಪ್ರತಿಜ್ಞಾ ವಿಧಿ ಬೋಧಿಸಿ ಮಾತನಾಡಿದರು.
ಈ ಪಿಡುಗನ್ನು ನಿಯಂತ್ರಿಸುವ ಪ್ರಯತ್ನಗಳಿಗೆ ಪ್ರತಿರೋಧ ಇರುವ ತನಕ ಈ ಸಮಸ್ಯೆ ಮುಂದುವರಿಯುತ್ತಲೇ ಇರುತ್ತದೆ ಎಂದು ಹೇಳಿದರು.
ಒಂದು ವರ್ಷದಲ್ಲಿ ಮಾದಕ ದ್ರವ್ಯ ಸಂಬಂಧಿತ ಅಪರಾಧಗಳ ವಿರುದ್ಧ ಕಾರ್ಯಾಚರಣೆಯನ್ನು ತೀವ್ರಗೊಳಿಸಲಾ
ಗಿದೆ. ಸಮಾಜದ ಸುಮಾರು ಶೇ. 80 ರಷ್ಟು ಮಂದಿ ಮಾದಕ ಪದಾರ್ಥಗಳ ಬಳಕೆ ವಿರುದ್ಧ ಸಕ್ರಿಯವಾಗಿ ಧ್ವನಿ ಎತ್ತುತ್ತಿದ್ದಾರೆ. ಆದರೆ, ಕ್ರಮಗಳನ್ನು ವಿರೋಧಿಸುವ ಇನ್ನುಳಿದ ಶೇ. 20 ರಷ್ಟು ಜನರು ಸಮಸ್ಯೆಯನ್ನು ಜೀವಂತವಾಗಿಡಲು ಕಾರಣವಾಗಿದ್ದಾರೆ ಎಂದು ಅವರು ವಿಷಾದಿಸಿದರು.


400 ಪೆಡ್ಲರ್ಗಳ ಬಂಧನ;
ಒಂದು ವರ್ಷದಲ್ಲಿ ಸುಮಾರು 400 ಪೆಡ್ಡರ್ಗಳನ್ನು ಬಂಧಿಸಲಾಗಿದ್ದು, 2,000 ಕ್ಕೂ ಹೆಚ್ಚು ಡ್ರಗ್ಸ್ ಬಳಕೆದಾರರನ್ನು ಗುರುತಿಸಲಾಗಿದೆ. ಅವರಲ್ಲಿ ಅನೇಕರಿಗೆ ಕೌನ್ಸೆಲಿಂಗ್ ಮಾಡಲಾಗಿದ್ದು, ಉಳಿದ ವರನ್ನು ವಶಕ್ಕೆ ಪಡೆಯಲಾಗಿದೆ. ನಂತರದ ಫಾಲೋ-ಅಪ್ ತಪಾಸಣೆಗಳು ಸುಧಾರಣೆಯನ್ನು ತೋರಿಸಿದ್ದು, ಹಿಂದೆ ಗುರುತಿಸಲಾದ ಬಳಕೆದಾರರಲ್ಲಿ ಸುಮಾರು ಶೇ. 90 ರಷ್ಟು ಜನರಲ್ಲಿ ಪಾಸಿಟಿವ್ ಅಂಶ ಕಂಡುಬಂದಿಲ್ಲ (ನೆಗೆಟಿವ್ ಬಂದಿದೆ). ಕೇವಲ ಶೇ. 10 ರಷ್ಟು ಜನರು ಮಾತ್ರ ಮಾದಕ ದ್ರವ್ಯ ಬಳಕೆಯನ್ನು ಮುಂದುವರಿಸಿದ್ದಾರೆ ಎಂದು ಅವರು ಹೇಳಿದರು.
ಕ್ಯೂಆರ್ ಕೋಡ್ ಆಧಾರಿತ ವ್ಯವಸ್ಥೆಯ ಮೂಲಕ ವಾರಕ್ಕೆ ಸುಮಾರು 20 ದೂರುಗಳು ಬರುತ್ತಿದ್ದು, ಇದರಿಂದಾಗಿ ಸುಮಾರು 100 ಪ್ರಕರಣಗಳು ದಾಖಲಾಗುತ್ತಿವೆ ಎಂದು ತಿಳಿಸಿದರು.
Mangaluru City Police have arrested around 400 drug peddlers and identified more than 2,000 drug users over the past year as part of an intensified crackdown on narcotics, Police Commissioner Sudheer Kumar Reddy said on Thursday.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm